• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್‌ ಮೈತ್ರಿಕೂಟದ ಸಭೆ ಬಿಜೆಪಿಗೆ ಢವಢವ.. ನಾಳೆ NDA ಮುಹೂರ್ತ..

ಕೃಷ್ಣ ಮಣಿ by ಕೃಷ್ಣ ಮಣಿ
July 17, 2023
in ಅಂಕಣ, ಅಭಿಮತ
0
ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳು ನಡೆಯುತ್ತಿದೆ. ಬಿಜೆಪಿ ವಿರೋಧಿ ಪಾಳಯ ಹೊಂದಾಗಿದ್ದು, ಈಗಾಗಲೇ ಮೊದಲ ಸಭೆಯನ್ನು ಬಿಹಾರದ ಪಾಟ್ನಾದಲ್ಲಿ ನಡೆಸಿದ್ದ ವಿರೋಧ ಪಕ್ಷ ದ ನಾಯಕರು, ಇಂದು ಬೆಂಗಳೂರಿನಲ್ಲಿ ಎರಡನೇ ಸಭೆ ಸೇರುತ್ತಿದ್ದಾರೆ. ಇಂದು ಮತ್ತು ನಾಳೆ ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಇಂದು ಕಾಂಗ್ರೆಸ್‌ ಒಕ್ಕೂಟದ ಮೈತ್ರಿಕೂಟಕ್ಕೆ ಹೆಸರು ಘೋಷಣೆ ಆಗುವ ಸಾಧ್ಯತೆಯಿದೆ. ಇನ್ನು ಕಳೆದ ಬಾರಿಯ ಸಭೆ ಬಳಿಕ ಕಾಂಗ್ರೆಸ್‌ ಮೈತ್ರಿ ಕೂಟ ಮತ್ತಷ್ಟು ಬಲವಾಗಿದ್ದು, ಈ ಬಾರಿ 24 ರಾಜಕೀಯ ಪಕ್ಷಗಳ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಕರ್ನಾಟಕ ಸರ್ಕಾರ ವಹಿಸಿಕೊಂಡಿದ್ದು, ಕಾರ್ಯಕ್ರಮ ಯಶಸ್ಸಿಗೆ ಟೊಂಕ ಕಟ್ಟಿ ನಿಂತಿದ್ದಾರೆ.

ADVERTISEMENT

ಇಡೀ ದೇಶದ ಚಿತ್ತ ಸೆಳೆದಿರುವ ಬೆಂಗಳೂರು ಸಭೆ..!

ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ನಾಯಕರು ಸಭೆ ನಡೆಸುತ್ತಿದ್ದು, ಇಡೀ ದೇಶದ ರಾಜಕಾರಣಿಗಳ ಚಿತ್ತ ಬೆಂಗಳೂರಿನತ್ತ ನೆಟ್ಟಿದೆ. ರಾಷ್ಟ್ರ ಮಟ್ಟದ ಬಿಜೆಪಿ ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದು, ಕಾಂಗ್ರೆಸ್‌ ನೇತೃತ್ವದ ಮಹಾ ಘಟ್‌‌ಬಂಧನ್ ಮುಂದಿನ ನಡೆಗಳು ಹೇಗಿರಬೇಕು ಎನ್ನೋ ಬಗ್ಗೆ ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇವೆ. ಕಳೆದ ಬಾರಿಯ ಸಭೆಗೆ 16 ಪಕ್ಷಗಳಿಗೆ ಆಹ್ವಾನ ಕೊಡಲಾಗಿತ್ತು. ಆದರೆ ಕಳೆದ ಬಾರಿ ಸಭೆಗೆ 15 ಪಕ್ಷಗಳಿಂದ ಒಟ್ಟು 32 ನಾಯಕರು ಹಾಜರಾಗಿದ್ದರು. ಈ ಬಾರಿ ಬಿಜೆಪಿ ವಿರೋಧಿ ಬಣಗಳ ಸಂಖ್ಯೆ ಕೊಂಚ ಹೆಚ್ಚಾಗಿದ್ದು, 24 ಪಕ್ಷಗಳಿಗೆ ಆಹ್ವಾನ ಕೊಡಲಾಗಿದೆ. ಇಂದಿನ ಸಭೆಯಲ್ಲಿ ಮೈತ್ರಿಕೂಟಕ್ಕೆ ಅಧಿಕೃತ ಹೆಸರು ಘೋಷಣೆ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಮೋದಿ ಮಣಿಸುವುದೇ ಒಂದು ಸಾಲಿನ ಅಜೆಂಡಾ..!

ಒಟ್ಟು 24 ರಾಜಕೀಯ ಪಕ್ಷಗಳು ಸೇರಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ 150 ಲೋಕಸಭಾ ಸದಸ್ಯರನ್ನ ಹೊಂದಿವೆ. ಈ ಬಾರಿ ಲೋಕಸಭಾ ಸ್ಥಾನ ಹೆಚ್ಚಿಸಿಕೊಳ್ಳುವುದು ಮೈತ್ರಿ ಪಕ್ಷಗಳ ಲೆಕ್ಕಾಚಾರ. ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಹೇಗಿರಬೇಕು. ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲುವುದು ಸಾಧಿಸುತ್ತಾರೆ ಅನ್ನೋದನ್ನು ಸರ್ವೇ ಮೂಲಕ ಪತ್ತೆ ಮಾಡಿಕೊಳ್ಳುವುದು ಹೇಗೆ..? ಸೀಟು ಹಂಚಿಕೆಯಲ್ಲಿ ಗೊಂದಲ ಮಾಡಿಕೊಳ್ಳದೆ ಗೆಲ್ಲುವ ಅಭ್ಯರ್ಥಿಯ ಆಯ್ಕೆ ಮಾಡುವ ಮೂಲಕ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಮಣಿಸುವ ಬಗ್ಗೆ ಹಲವು ವಿಚಾರಗಳು ಚರ್ಚೆ ಆಗಲಿವೆ. ಇಂದು ರಾತ್ರಿ ಮೈತ್ರಿಕೂಟದ ನಾಯಕರಿಗೆ ಸಿಎಂ ಭೋಜನ ಕೂಟ ಏರ್ಪಾಡು ಮಾಡಿದ್ದು, ನಾಳೆ ಮಧ್ಯಾಹ್ನ DCM ಡಿ.ಕೆ ಶಿವಕುಮಾರ್ ಭೋಜನ ಕೂಟ ಆಯೋಜನೆ ಮಾಡಿದ್ದಾರೆ.

ಬಿಜೆಪಿಗೆ ಶುರುವಾಗಿದೆ ಢವಢವ.. ಟ್ರಾಫಿಕ್‌ ಕಿರಿಕಿರಿ ಫಿಕ್ಸ್‌..

ಕಾಂಗ್ರೆಸ್‌ ಮೈತ್ರಿಕೂಟ ದಿನದಿಂದ ದಿನಕ್ಕೆ ಪ್ರಬಲ ಆಗುತ್ತಲೇ ಸಾಗುತ್ತಿದೆ. ಇಂದು ಮತ್ತು ನಾಳಿನ ಸಭೆ ಯಶಸ್ಸು ಸಾಧಿಸಿದರೆ ಮೋದಿ ಸರ್ಕಾರದ ವಿರುದ್ಧ ಮತ್ತೊಂದು ಶಕ್ತಿ ಜನ್ಮತಾಳಿದಂತೆಯೇ ಸರಿ ಎನ್ನಲಾಗ್ತಿದೆ. ಇದೇ ಕಾರಣಕ್ಕೆ ನಾಳೆ ಎನ್‌ಡಿಎ ಮೈತ್ರಿಕೂಟದ ಸಭೆ ಕೂಡ ನಿಗದಿಯಾಗಿದೆ. ಇನ್ನು ಇಂದು ಮತ್ತು ನಾಳೆ ಗಣ್ಯ ವ್ಯಕ್ತಿಗಳ ಸಂಚಾರ ಇರುವ ಕಾರಣ, ಟ್ರಾಫಿಕ್‌ ಕಿರಿಕಿರಿ ನಿಶ್ಚಿತ. ವಾಹನ ಸವಾರರು ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ. ತಾಜ್‌ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಡಾ ಬಿ.ಆರ್. ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆ, ಬಳ್ಳಾರಿ ರಸ್ತೆ ಬಳಸುವ ವಾಹನ ಸವಾರರು ಬದಲಿಗೆ ಮಾರ್ಗ ಬಳಸಲು ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಇನ್ನು ಬಿ.ಆರ್. ಅಂಬೇಡ್ಕರ್ ರಸ್ತೆ, ಬಳ್ಳಾರಿ ರಸ್ತೆ, ರೇಸ್‌ ಕೋರ್ಸ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೃಷ್ಣಮಣಿ

Tags: Maha gathbandhanNarendra ModiNDAUnity of the left partiesUPA
Previous Post

ವರ್ಗಾವಣೆಯಲ್ಲಿ ಭ್ರಷ್ಟಾಚಾರ, ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ

Next Post

ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಅನಿವಾರ್ಯವೇ..? ಏನಿದು ಲೆಕ್ಕಾಚಾರ..?

Related Posts

Top Story

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

by ಪ್ರತಿಧ್ವನಿ
October 21, 2025
0

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ: ಸಿ.ಎಂ ಮೆಚ್ಚುಗೆ ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು....

Read moreDetails

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ “4.30 – 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

October 19, 2025

DK Shivakumar: ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ..!!

October 19, 2025
Next Post
ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಅನಿವಾರ್ಯವೇ..? ಏನಿದು ಲೆಕ್ಕಾಚಾರ..?

ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಅನಿವಾರ್ಯವೇ..? ಏನಿದು ಲೆಕ್ಕಾಚಾರ..?

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada