• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ:ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ.ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು.

ADVERTISEMENT

“ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಇಷ್ಟು ದಿನ ಎನ್ ಡಿಎಯಲ್ಲಿದ್ದೂ, ಮತ್ತೆ ಕಾಂಗ್ರೆಸ್ಸಿಗನಾಗಿ ಮುಂದುವರೆಯಬೇಕು ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದರು.

“ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ದೂರವಾಣಿಯಲ್ಲಿ ಚರ್ಚೆ ಮಾಡಿದೆ. ನಂತರ ಪಕ್ಷದ ಎಲ್ಲ ಮುಖಂಡರ ಬಳಿ ಸಮಾಲೋಚನೆ ನಡೆಸಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದೇ ಇರುವ ಕಾರಣಕ್ಕೆ ಬುಧವಾರ (ಇಂದು) ಬೆಳಿಗ್ಗೆಯೇ ಮುಖ್ಯಮಂತ್ರಿಗಳ ನಿವಾಸದಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದೆ. ಇವರ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಗಮನಕ್ಕೆ ತಂದು ಎಲ್ಲರ ಒಪ್ಪಿಗೆ ಮೇರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೀಡಲಾಗಿದೆ” ಎಂದು ಹೇಳಿದರು.

ರಾಜಕಾರಣ ಸಾಧ್ಯತೆಗಳ ಕಲೆ:

“ರಾಜಕಾರಣ ಸಾಧ್ಯತೆಗಳ ಕಲೆ. ಮತ್ತೆ ಯೋಗೇಶ್ವರ್ ಅವರು ಮರಳಿ ಗೂಡಿಗೆ ಬಂದಿದ್ದಾರೆ. ಎಸ್ ಪಿ, ಬಿಜೆಪಿ, ಸ್ವತಂತ್ರ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದಾರೆ. ಜೆಡಿಎಸ್ ಜೊತೆಗೂ ಜಿಲ್ಲೆಯಲ್ಲಿ ಮೈತ್ರಿ ಮಾಡಿಕೊಂಡು ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿದ್ದರು.ರಾಜಕೀಯ ಸನ್ನಿವೇಶ ಬದಲಾದ ಕಾರಣಕ್ಕೆ ಮತ್ತೆ ನಮ್ಮೊಡನೆ ಕೈಜೋಡಿಸಿದ್ದಾರೆ” ಎಂದರು.

“ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕುಮಾರಸ್ವಾಮಿ ಅವರು ಗೆದ್ದಿದ್ದರು. ನಮ್ಮ ಪಕ್ಷ 16 ಸಾವಿರ ಮತಗಳನ್ನು ಚನ್ನಪಟ್ಟಣದಲ್ಲಿ ಗಳಿಸಿತ್ತು. ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಅವರು 85 ಸಾವಿರ ಮತಗಳನ್ನು ಪಡೆದಿದ್ದೆವು.ಅನೇಕ ಮಂದಿ ಜನತಾದಳದಿಂದ ಬಂದು ನಮಗೆ ಸಹಾಯ ಮಾಡಿದ್ದರು.ನಂತರ ಸ್ಥಾನ ತೆರವುಗೊಂಡ ನಂತರ ಸುಮಾರು 15 ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ” ಎಂದರು.

ಪಕ್ಷ ಕಟ್ಟಿದ ಕಾರ್ಯಕರ್ತರ ಜೊತೆ ನಾವಿದ್ದೇವೆ:

“ನಮ್ಮ ಕಾರ್ಯಕರ್ತರು ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿ ಮಾಡಲು ಶ್ರಮವಹಿಸಿದ್ದರು. ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಮುಜುಗರಕ್ಕೆ ಒಳಗಾಗುವ ಪ್ರಮೇಯವನ್ನು ನಾವು ಉಂಟು ಮಾಡುವುದಿಲ್ಲ. ನಿಮ್ಮ ಜೊತೆ ನಾನು ಹಾಗೂ ಡಿ.ಕೆ.ಸುರೇಶ್ ಇದ್ದೇವೆ. ನಿಮ್ಮನ್ನು ಉತ್ತಮವಾದ ರೀತಿಯಲ್ಲಿ ನಡೆಸಿಕೊಳ್ಳುತ್ತೇವೆ, ಇದೇ ಮಾತನ್ನು ಯೋಗೇಶ್ವರ್ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಅವರೂ ಸಹ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಿಗೆ ಕೆಲಸ ಮಾಡುತ್ತಾರೆ.ಚನ್ನಪಟ್ಟಣಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ.ಕಾರ್ಯಕರ್ತರು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ” ಎಂದು ಸೂಚನೆ ನೀಡಿದರು.

ನಾಳೆ (ಗುರುವಾರ) ನಾಮಪತ್ರ ಸಲ್ಲಿಕೆ ಕಾರ್ಯಕ್ರಮ:

“ಇಂದೇ (ಬುಧವಾರ) ಹೈಕಮಾಂಡ್ ಗೆ ಸ್ಪರ್ಧಿಸುವವರ ಪಟ್ಟಿಯನ್ನು ಕಳುಹಿಸಲಾಗುವುದು. ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿ ಅಂತಿಮ ಮಾಡುತ್ತಾರೆ. ಚನ್ನಪಟ್ಟಣದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವನ್ನು ಡಿ.ಕೆ.ಸುರೇಶ್ ಅವರ ಜವಾಬ್ದಾರಿಗೆ ವಹಿಸಲಾಗಿತ್ತು. ಅವರು ಈಗಾಗಲೇ ಖರ್ಗೆ ಅವರ ಬಳಿ ಮಾತನಾಡಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ನಾಮಪತ್ರ ಸಲ್ಲಿಕೆ ವೇಳೆ ಎಲ್ಲರೂ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಅಭ್ಯರ್ಥಿ ಕೊರತೆಯಿಂದ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತೇ ಎಂದು ಕೇಳಿದಾಗ “ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ಅಭ್ಯರ್ಥಿಗಳ ಕೊರತೆ ಕಾಣುವುದಿಲ್ಲ.ನಾನು ಇಲ್ಲದಿದ್ದರೂ ಪಕ್ಷ ನಡೆಯುತ್ತದೆ” ಎಂದರು.

ಎಲ್ಲ ಪಕ್ಷದಲ್ಲಿಯೂ ಈ ವಿದ್ಯಮಾನ ನಡೆಯುತ್ತದೆ:

ಡಿ.ಕೆ.ಸುರೇಶ್ ಅವರನ್ನು ಸೋಲಿಸಿದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಎಂದು ಕೇಳಿದಾಗ, “ಇದರ ಬಗ್ಗೆ ನಮ್ಮ ಕಾರ್ಯಕರ್ತರ ಬಳಿ ಚರ್ಚೆ ನಡೆಸಿದ್ದೇವೆ. ಇದು ಎಲ್ಲಾ ಪಕ್ಷದಲ್ಲಿಯೂ ಇದ್ದಿದ್ದೇ. ನಮ್ಮಲ್ಲಿ ಮಾತ್ರ ಇದು ನಡೆದಿಲ್ಲ.ಇದೊಂದು ರಾಜಕೀಯ ವಿದ್ಯಮಾನವಷ್ಟೇ” ಎಂದರು.

ಸೋಲಿನ ಭೀತಿಗೆ ಕ್ಷೇತ್ರ ಬಿಟ್ಟುಕೊಡಲು ಮುಂದಾಗಿದ್ದ ಕುಮಾರಸ್ವಾಮಿ:

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ ಬಗ್ಗೆ ಕೇಳಿದಾಗ, “ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ” ಎಂದರು.

“ಪ್ರಿಯಾಂಕ ಗಾಂಧಿ ಅವರು ವಯನಾಡಿನಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು. ಈ ಕಾರ್ಯಕ್ರಮಕ್ಕೆ ತೆರಳಬೇಕಾಗಿತ್ತು. ಪಕ್ಷ ಸೇರ್ಪಡೆ ಕಾರ್ಯಕ್ರಮ ತುರ್ತಾಗಿ ನಡೆದ ಕಾರಣಕ್ಕೆ ಮುಖ್ಯಮಂತ್ರಿಗಳು ಅಲ್ಲಿ ಭಾಗವಹಿಸುತ್ತಿದ್ದು, ನಾನು ತೆರಳಲಿಲ್ಲ. ಅಲ್ಲದೇ ಬೆಂಗಳೂರು ನಗರದಲ್ಲಿ ಉಂಟಾಗಿರುವ ಮಳೆ ಹಾನಿ ವೀಕ್ಷಣೆಗೆ ಒಂದಷ್ಟು ಕಡೆ ಭೇಟಿ ನೀಡುವ ಕಾರಣಕ್ಕೆ ವಯನಾಡಿಗೆ ತೆರಳುವುದನ್ನು ರದ್ದು ಮಾಡಿದೆ” ಎಂದರು.

ಮಳೆಯಿಂದ ಕಟ್ಟಡ ಕುಸಿತವಾಗಿಲ್ಲ:

“ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ.ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ” ಎಂದರು

Tags: bengaluruCongress blood flowsDCM DK Shivakumarin CP Yogeshwarjoining the Congress partyKPCC office on Queen's Road.
Previous Post

Priyanka Gandhi’s Nomination Roadshow

Next Post

ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಲು ಒತ್ತಾಯಿಸಿ ಎಎಪಿ ಮುಖ್ಯಮಂತ್ರಿಗಳಿಗೆ ಪತ್ರ

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post

ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಲು ಒತ್ತಾಯಿಸಿ ಎಎಪಿ ಮುಖ್ಯಮಂತ್ರಿಗಳಿಗೆ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada