2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್, ಚುನಾವಣಾ ಸೋಲು ಮತ್ತು ಭಿನ್ನಾಭಿಪ್ರಾಯಗಳ ಬಗ್ಗೆ ಇಂದಿನಿಂದ ಮೂರು ದಿನಗಳ ಕಾಲ ರಾಜಸ್ಥಾನದ ಉದಯಪುರದಲ್ಲಿ ಚಿಂತನ ಶಿಬಿರ ಆಯೋಜಿಸಿದೆ.
ಶಿಬಿರದಲ್ಲಿ ಮುಖ್ಯವಾಗಿ ಪಕ್ಷದ ಪುನರ್ ರಚನೆ, ಧ್ರುವೀಕರಣ ರಾಜಕೀಯವನ್ನು ಎದುರಿಸಲು ಮಾರ್ಗಗಳನ್ನು ಕಂಡುಕೊಳ್ಳುವುದು ಮತ್ತು ಮುಂಬರುವ ಚುನಾವಣಾ ಸವಾಲುಗಳಿಗೆ ಸಿದ್ಧತೆ ಸೇರಿದಂತೆ ಅನೇಕ ವಿಚಾರಗಳ ಬಗೆ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.