• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಹೆಸರು ಘೋಷಣೆ: ರಾಹುಲ್ ಗಾಂಧಿ ಅವರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಯದುನಂದನ by ಯದುನಂದನ
February 7, 2022
in ದೇಶ, ರಾಜಕೀಯ
0
ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಹೆಸರು ಘೋಷಣೆ: ರಾಹುಲ್ ಗಾಂಧಿ ಅವರಿಂದ ಮತ್ತೊಂದು ಮಾಸ್ಟರ್ ಸ್ಟ್ರೋಕ್
Share on WhatsAppShare on FacebookShare on Telegram

ADVERTISEMENT

ಪಂಜಾಬಿನಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷಕ್ಕಿಂತಲೂ ಪ್ರಭಾವಿ, ಜನಾನುರಾಗಿ, ಕಳೆದ ಬಾರಿ ಅವರಿಂದಾಗಿಯೇ ಪಕ್ಷ ಅಧಿಕಾರಕ್ಕೆ ಬಂತು ಎಂದು ಹೇಳಲಾಗುತ್ತಿತ್ತು. ಆದರೀಗ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷವನ್ನೂ ತ್ಯಜಿಸಿದ್ದಾರೆ.‌ ಇನ್ನೊಂದೆಡೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಮಾಜಿ ಕ್ರಿಕೆಟಿಗ, ಸೆಲೆಬ್ರಿಟಿ, ಜಾಟ್ ಸಿಖ್ ಸಮುದಾಯದ ಪ್ರಭಾವಿ ನಾಯಕ ಎಂದು ಹೇಳಲಾಗುತ್ತಿತ್ತು. ನವಜೋತ್ ಸಿಂಗ್ ಸಿಧುವನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡದಿದ್ದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆ ತಂದೊಡ್ಡುತ್ತಾರೆ ಎಂದು ಕೂಡ ಹೇಳಲಾಗುತ್ತಿತ್ತು. ಇದೆಲ್ಲದರ ನಡುವೆ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಅವರನ್ನೇ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಹಿಂದೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ನವಜೋತ್ ಸಿಂಗ್ ಸಿಧು, ಸುನಿಲ್ ಜಾಖಡ್, ಅಂಬಿಕಾ ಸೋನಿ ಮತ್ತಿತರ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬಂದಿದ್ದವು. ಆದರೆ, ಕಡೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯಾರೂ ಊಹೆ ಮಾಡದ ಚರಣಜಿತ್ ಸಿಂಗ್ ಅವರ ಹೆಸರನ್ನು ಘೋಷಣೆ ಮಾಡಿದ್ದರು. ರಾಹುಲ್ ಗಾಂಧಿ ಅವರ ನಡೆಯನ್ನು ಆಗ ‘ಮಾಸ್ಟರ್ ಸ್ಟ್ರೋಕ್’ ಎಂದು ವ್ಯಾಖ್ಯಾನಿಸಲಾಗಿತ್ತು. ಆಗ ಅದು ಅಚ್ಚರಿಯಾಗಿತ್ತು. ಈಗ ಅದೇ ರಾಹುಲ್ ಗಾಂಧಿ ‌ಅದೇ ಚರಣಜಿತ್ ಸಿಂಗ್ ಚನ್ನಿ‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಆದರೆ ಇದು ನಿರೀಕ್ಷಿತವಾದುದು.

ಯಾವಾಗ ಪಂಜಾಬ್ ಕಾಂಗ್ರೆಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಗಲು ಚರಣಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಶೀತಲ ಸಮರ ಶುರುವಾಯಿತೋ ಅಂದಿನಿಂದಲೇ ಕಾಂಗ್ರೆಸ್ ಹೈಕಮಾಂಡ್ ಬಹಳ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಮೊದಲಿಗೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಬಹಳ ಜಾಣ್ಮೆಯಿಂದ ಮನವೊಲಿಸಲಾಗಿತ್ತು.‌ ಅದಾದ ಮೇಲೆ ಈಗ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸುವ ವಿಷಯದಲ್ಲಿ ಇನ್ನಷ್ಟು ಜಾಗರೂಕತೆ ವಹಿಸಲಾಗಿದೆ.

ಚನ್ನಿ ಮತ್ತು ಸಿಧು ಇಬ್ಬರನ್ನೂ ಶತಾಯ ಗತಾಯ ವಿಶ್ವಾಸಕ್ಕೆ ತೆಗೆದುಕೊಂಡೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಬೇಕೆಂದು ನಿಶ್ಚಿಯಿಸಿದ ರಾಹುಲ್ ಗಾಂಧಿ ಮೊದಲಿಗೆ ಇಬ್ಬರ ಜೊತೆಯಲ್ಲೂ ಮಾತನಾಡಿ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಜನವರಿ 27ರಂದು ಜಲಂಧರ್ ನಲ್ಲಿ ವರ್ಚ್ಯುಯಲ್ ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಅವರು ‘ಪಂಜಾಬ್ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಕಾರ್ಯಕರ್ತರು ನಿರ್ಧರಿಸಲಿದ್ದಾರೆ’ ಎಂದು ಹೇಳಿದ್ದರು. ಅಲ್ಲದೆ ‘ಚರಣಜಿತ್ ಸಿಂಗ್ ಚನ್ನಿ ಹಾಗೂ ನವಜೋತ್ ಸಿಂಗ್ ಸಿಧು ಇಬ್ಬರಲ್ಲಿ ಯಾರದೇ ಹೆಸರನ್ನು ಪ್ರಕಟಿಸಿದರೂ ಇನ್ನೊಬ್ಬರು ಬೆಂಬಲಿಸುವ ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದರು. ಇದರಿಂದ ರಾಹುಲ್ ಗಾಂಧಿ ಇಬ್ಬರ ಜೊತೆ ಸಮಾಲೋಚನೆ ನಡೆಸಿದ್ದಾರೆಂಬುದು ಸ್ಪಷ್ಟವಾಗುತ್ತದೆ.

ಜೊತೆಗೆ ಚರಣಜಿತ್ ಸಿಂಗ್ ಚನ್ನಿ ಅಥವಾ ನವಜೋತ್ ಸಿಂಗ್ ಸಿಧು ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಕಾರ್ಯಕರ್ತರ ಹೆಗಲಿಗೇರಿಸಿದ್ದು ಕೂಡ ಜಾಣ್ಮೆಯ ನಡೆ. ಈಗ ಕಾರ್ಯಕರ್ತರ ಅಭಿಪ್ರಾಯ ಆಧರಿಸಿ ಚರಣಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆಂದು ನವಜೋತ್ ಸಿಂಗ್ ಸಿಧು ಅವರ ಬಾಯಿ ಮುಚ್ಚಿಸುವುದು ಮಾತ್ರವಲ್ಲ. ಕಾರ್ಯಕರ್ತರ ದೃಷ್ಟಿಯಲ್ಲಿ ಚರಣಜಿತ್ ಸಿಂಗ್ ಚನ್ನಿ ಬಹಳ ಪ್ರಸಿದ್ಧಿ, ಮುಖ್ಯಮಂತ್ರಿಯಾಗಿ ಅವರ ಕಾರ್ಯವೈಖರಿ ಬಗ್ಗೆ ತೃಪ್ತಿ ಇದೆ ಎಂಬ ಸಂದೇಶವನ್ನು ಕೊಟ್ಡಂತಾಗಿದೆ.

ಆಮ್ ಆದ್ಮಿ ಪಕ್ಷ ಇಷ್ಟು ದಿನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸಿಗೆ ಸವಾಲು ಹಾಕುತ್ತಿತ್ತು. ಜೊತೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಮೇಲೆ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಒಡಕು ಮೂಡಲಿದೆ. ಅದರ ಲಾಭ ನಮಗೆ ಆಗಲಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಲೋಧಿಯಾನದಲ್ಲಿ ರಾಹುಲ್ ಗಾಂಧಿ ಅವರು ಭಾನುವಾರ ಚರಣಜಿತ್ ಸಿಂಗ್ ಚನ್ನಿ ಅವರೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ ಕೂಡಲೇ ನವಜೋತ್ ಸಿಂಗ್ ಸಿಧು ಸ್ವಾಗತಿಸಿದ್ದಾರೆ‌. ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಚರಣಜಿತ್ ಸಿಂಗ್ ಚನ್ನಿ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಒಟ್ಟಾರೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎಡವಿ ಗೆಲುವನ್ನು ಕಳೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಬಗ್ಗೆ ಭಾವಿಸಿದ್ದವರಿಗೆ ಭಾರೀ ನಿರಾಸೆ ಉಂಟಾಗಿದೆ. ರಾಹುಲ್ ಗಾಂಧಿ ಪಂಜಾಬ್ ವಿಷಯದಲ್ಲಿ ಪರಿಪಕ್ವ ನಿರ್ಧಾರ ಕೈಗೊಂಡಿದ್ದಾರೆ.

ಪಂಜಾಬಿನಲ್ಲಿ ಫೆಬ್ರವರಿ 20ಕ್ಕೆ ಎಲ್ಲಾ 117 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ಆಗಲಿದೆ. ಮಾರ್ಚ್ 10ರಂದು ಉತ್ತರ ಪ್ರದೇಶ, ಉತ್ತರಖಂಡಾ, ಗೋವಾ ಮತ್ತು‌ ಮಣಿಪುರದ ಮತ ಎಣಿಕೆ ದಿವಸವೇ ಅಂದರೆ ಮಾರ್ಚ್ 10ರಂದು ಪಂಜಾಬ್ ಫಲಿತಾಂಶ ಕೂಡ ಹೊರಬೀಳಲಿದೆ. ಆಗ ಚರಣಜಿತ್ ಸಿಂಗ್ ಚನ್ನಿ ಕಾರ್ಯವೈಖರಿ ಮತ್ತು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ ಕಾಂಗ್ರೆಸ್ ನಡೆ ಎಷ್ಟು ಸೂಕ್ತವಾದುದು ಎಂದು ಗೊತ್ತಾಗುತ್ತದೆ.

Tags: BJPCongress PartyCovid 19ಕೋವಿಡ್-19ಚರಣಜಿತ್ ಸಿಂಗ್ ಚನ್ನಿನರೇಂದ್ರ ಮೋದಿಪಂಜಾಬ್ ಚುನಾವಣೆಬಿಜೆಪಿರಾಹುಲ್ ಗಾಂಧಿ
Previous Post

ಮುಸ್ಲಿಮರ ಢಾಬಾದಲ್ಲಿ ಬಸ್‌ ನಿಲ್ಲಿಸುವ ಚಾಲಕರಿಗೆ ಹಿಂದುತ್ವ ಸಂಘಟನೆಗಳಿಂದ ಬೆದರಿಕೆ

Next Post

ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

ಹಿಜಾಬ್‌ ಧರಿಸಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಸರ್ಕಾರಿ ಕಾಲೇಜು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada