• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈಶ್ವರಪ್ಪ ಭಾಗವಧ್ವಜ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ಬಿಜೆಪಿಗೆ ವರದಾನವಾಯ್ತಾ?

ಕರ್ಣ by ಕರ್ಣ
February 19, 2022
in ಕರ್ನಾಟಕ, ರಾಜಕೀಯ
0
ಈಶ್ವರಪ್ಪ ಭಾಗವಧ್ವಜ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ಬಿಜೆಪಿಗೆ ವರದಾನವಾಯ್ತಾ?
Share on WhatsAppShare on FacebookShare on Telegram

ಕೆಂಪುಕೋಟೆ ಮೇಲೆ ಭಾಗಧ್ವಜ ಹಾರಿಸುವ ಈಶ್ವರಪ್ಪ (KS Eshwarappa) ಹೇಳಿಕೆ ಖಂಡಿಸಿ ಕಾಂಗ್ರೆಸ್‌ (congress) ಉಭಯ ಸದನಗಳಲ್ಲೂ ಧರಣಿ ಕೂತಿದೆ. ಎಲ್ಲಿಯವರೆಗೆ ಈಶ್ವರಪ್ಪನವರನ್ನು ಬಿಜೆಪಿ ವರಿಷ್ಠರು ವಜಾಗೊಳಿಸುವುದಿಲ್ಲವೋ ಅಲ್ಲಿಯವರೆಗೆ ಧರಣಿ ಕೈಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಈಗ ಅಧಿವೇಶನವನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿಸಿದೆ.

ADVERTISEMENT

ಸದ್ಯ ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಿರುವ ಕಾಂಗ್ರೆಸ್‌ ನಾಯಕರು ಧರಣಿಯನ್ನು ಅಧಿವೇಶನ ಮುಗಿಯುವವರೆಗೆ ಮುಂದುವರೆಸಲು ನಿರ್ಧರಿಸಿದ್ದಾರೆ. ಹಿಜಾಬ್‌ ವಿವಾದದಲ್ಲಿ (Hijab Row) ಪೇಚಿಗೆ ಸಿಲುಕಿದ್ದ ಕಾಂಗ್ರೆಸ್‌ಗೆ ಹರಿಯುವ ನೀರಿನಲ್ಲಿ ದಡ ಸೇರಲು ಸಿಕ್ಕ ಕಡ್ಡಿಯಾಗಿ ಈಶ್ವರಪ್ಪನವರ ಹೇಳಿಕೆ ಸಿಕ್ಕಿರುವುದಂತೂ ನಿಜ. ಇದರ ನಡುವೆ ನಾಡಿನ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರ ಕೂಡ ಕ್ರಮ ಕೈಗೊಳ್ಳದೆ ಈಶ್ವರಪ್ಪನವರ ಪರವೇ ವಹಿಸಿಕೊಂಡು ಅಧಿವೇಶನ ಮೊಟಕಿಗೂ ಅವಕಾಶ ಮಾಡಿಕೊಟ್ಟಿರುವುದು ನಾಡಿನ ಜನರ ದುರಾದೃಷ್ಟ.

ಕಾಂಗ್ರೆಸ್‌ ಹೈಕಮಾಂಡ್‌ (Congress high command) ನಿಂದಲೂ ಕೂಡ ಈ ಪ್ರಕರಣವನ್ನು ರಾಜಕೀಯವಾಗಿ (Politics) ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಧರಣಿ ಹಾಗೂ ಹೋರಾಟವನ್ನು ಸಶಕ್ತವಾಗಿ ಬಳಸಿಕೊಳ್ಳಲು AICC ಕೂಡ ನಿರ್ದೇಶನ ಕೊಟ್ಟಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್‌ ನಾಯಕರ ಮೇಲೆ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಧ್ಯವಾದಷ್ಟು ರಾಜಕೀಯ ಲಾಭ ಪಡೆಯಲು ನಿರ್ಧರಿಸಿದ್ದಾರೆ. ಅಸಲಿಗೆ ಕೆಲ ಕಾಂಗ್ರೆಸ್‌ ಶಾಸಕರಿಗೆ (Congress MLA) ಈ ಅಹೋರಾತ್ರಿ ಧರಣಿ ಬಗ್ಗೆ ಕಿಂಚಿತ್ತೂ ಒಲವಿಲ್ಲದಿದ್ದರೂ ಹಿರಿಯ ನಾಯಕರ ಮಾತಿಗೆ ಬಗ್ಗಿ ಸದನದ ಬಾವಿಯಲ್ಲಿ ಧರಣಿಗೆ ಕೂರುತ್ತಿದ್ದಾರೆ.

ಈ ಹಿನ್ನೆಲೆ KPCC ಅಧ್ಯಕ್ಷ ಡಿಕೆ ಶಿವಕುಮಾರ್‌ ನಿನ್ನೆ ರಾತ್ರಿ ವಿಧಾನಸಭೆಯ ಬಾವಿಯಲ್ಲಿ ಎಲ್ಲಾ ಶಾಸಕರನ್ನು ಕರೆದು ʼʼಎಲ್ಲಿಯ ವರಗೆ ಹೋರಾಟ.?” ಎಂಬ ವಿಷಯದ ಮೇಲೆ ಪಾಠ ಮಾಡಿದ್ದಾರೆ. ಈ ವೇಳೆ ಕೆಲ ಕಾಂಗ್ರೆಸ್‌ ಶಾಸಕರಿಂದ ಅಸಮಾಧನ ವ್ಯಕ್ತವಾಗಿದೆ. ಆದರೂ ಹೈಕಮಾಂಡ್‌ ಹಿಜಾಬ್‌ ವಿವಾದದ ಹೊತ್ತಲ್ಲಿ ಇದನ್ನು ಗಟ್ಟಿಯಾಗಿ ಹಿಡಿದುಕೊಳ್ಳಲು ನಿರ್ಧರಿಸಲಾಗಿದೆ.

ಇನ್ನು ರೋಗಿ ಇಚ್ಚಿಸಿದ್ದು ಹಾಲು ವೈದ್ಯ ಕಲ್ಪಿಸಿದ್ದು ಹಾಲು ಎಂಬ ಖುಷಿಯಲ್ಲಿದೆ ಬಿಜೆಪಿ. ಅಧಿವೇಶನದಲ್ಲಿ ವಿಪಕ್ಷವನ್ನು ಟೆಕ್ನಿಕಲ್‌ ಆಗಿ ಎದುರಿಸಲು ಶಕ್ತವಲ್ಲದ ಬಿಜೆಪಿ ನಾಯಕರು‌ ಲಸಿಕೆ, ಕೊರೋನಾ (Corona) ಮುಂತಾದ ವಿಷಯವನ್ನು ಮುಂದಿಟ್ಟುಕೊಟ್ಟು ಮೋದಿ ಇಮೇಜ್‌ ಫ್ರೇಮಿಂಗ್ ಕೆಲಸ ಮಾಡಿಕೊಂಡು ಬರುತ್ತಿದೆ. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ (Siddaramaiah) ಪ್ರಶ್ನೆಗೆ ಬಿಜೆಪಿ ನಾಯಕರು ಗಲಿಬಿಲಿಗೊಂಡಿರುವ ವಿಡಿಯೋಗಳೆಲ್ಲಾ ಈಗ ವೈರಲ್‌ ಆಗಿದೆ. ಹೀಗಾಗಿ ವಿಪಕ್ಷದ ಮರುಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಯೋಚನೆಯಲ್ಲಿದ್ದ ಬಿಜೆಪಿಗೂ ಕೈ ನಾಯಕರ ಈ ಅಹೋರಾತ್ರಿ ಧರಣಿ ವರದಾನವಾಗಿ ಪರಿಣಮಿಸಿದೆ.

ಇದರ ನಡುವೆ ಬಿಜೆಪಿ ಹಿರಿಯ ನಾಯಕಾರದ ಬಿಎಸ್‌ ಯಡಿಯೂರಪ್ಪ (BS Yediyurappa), ಸಿಎಂ ಬೊಮ್ಮಾಯಿ ( CM Bommai), ಅರ್‌ ಅಶೋಕ್‌ (R Ashok), ಅರಗ ಜ್ಞಾನೇಂದ್ರ (Araga jnandra) ಮುಂದಾವದರು ಕಾಂಗ್ರೆಸ್‌ ಗೆ ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ ಎಂದು ಮತ್ತೊಂದು ದಾಳ ಉರುಳಿಸಿದ್ದು ಕಾಂಗ್ರೆಸ್‌ ಅನ್ನು ಅಲ್ಪ ಮಟ್ಟಿಗೆ ಇಕ್ಕಟ್ಟು ತಂದಿಟ್ಟಿದೆ. ವಾಸ್ತವದಲ್ಲಿ ತಮ್ಮ ನಿಲುವನ್ನು ಬಿಜೆಪಿ ನಾಯಕರು ಕಾಂಗ್ರೆಸ್‌ ತಲೆ ಮೇಲೆ ಕಟ್ಟಿ ಹಿಟ್‌ ಆಂಡ್‌ ರನ್‌ ಕೆಲಸ ಮಾಡುತ್ತಿದೆ. ಸಿಎಂ ಬೊಮ್ಮಾಯಿ ಮುಖ್ಯಮಂತ್ರಿಗಳಾದ ಬಳಿಕ ಕೊರೋನಾ ಅಲೆಗಳ ಮೇಲೆ ಆಡಳಿತ ನಡೆಸಿದ್ದು ಬಿಟ್ಟರೆ ಹೇಳಿಕೊಳ್ಳುವ ಯಾವುದೇ ಉತ್ತಮ ನಡೆಗಳು ಮುಂದಿಟ್ಟಿಲ್ಲ. ಅದೇ ಸಮಯಕ್ಕೆ ತಕ್ಕಂತೆ ಹಿಜಾಬ್‌ ವಿವಾದ ಮುನ್ನೆಲೆಗೆ ಬಂದಿದ್ದು ಮತ್ತು ಬರಿಸಿದ್ದು ನಿಟ್ಟುಸಿರುವ ಬಿಡುವಂತೆ ಮಾಡಿದೆ.

ಅದರೆ ಈಶ್ವರಪ್ಪನವರ ವಿರುದ್ಧ ಯಾವುದೇ ಕ್ರಮ ಇಲ್ಲ ಎಂದು ಗಟ್ಟಿಯಾಗಿ ನಿಂತಿರುವ ಬಿಜೆಪಿ ಹಿರಿಯ ನಾಯಕರ ಹೇಳಿಕೆ ಕಾಂಗ್ರೆಸ್‌ ಅನ್ನು ಕೊತ ಕೊತ ಕುದಿಯುವಂತೆ ಮಾಡಿದೆ. ಆದರೆ ಈ ಪ್ರಕರಣದ ಕೊನೆಯೇನು ಕಾದು ನೋಡಬೇಕಿದೆ.

Tags: BJPcm bommaiCongress High CommandCongress PartyCovid 19Karnataka PoliticsKS EshwarappaOutsiders Have No Right To Comment Foreign Ministry On Hijab Rowಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಿಜಾಬ್ ವಿವಾದ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತ ಒಂದು ವಾರ ನಿಷೇಧಾಜ್ಞೆ ವಿಸ್ತರಣೆ

Next Post

ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪ : ಚಿದಂಬರಂ ದೇವಸ್ಥಾನದ ಅರ್ಚಕರ ವಿರುದ್ದ ಪ್ರಕರಣ ದಾಖಲು!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪ : ಚಿದಂಬರಂ ದೇವಸ್ಥಾನದ ಅರ್ಚಕರ ವಿರುದ್ದ ಪ್ರಕರಣ ದಾಖಲು!

ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪ : ಚಿದಂಬರಂ ದೇವಸ್ಥಾನದ ಅರ್ಚಕರ ವಿರುದ್ದ ಪ್ರಕರಣ ದಾಖಲು!

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada