ಕಾಂಗ್ರೆಸ್ (Congress) ಪಕ್ಷದಲ್ಲಿ ಹಲವು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಪ್ರತಿಕ್ರಿಯಿಸಿದ್ದು,ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಒಂದು ನಾಣ್ಯಗಳ ಎರಡು ಮುಖಗಳು. ಕಾಂಗ್ರೆಸ್ ನ ಭ್ರಷ್ಟಾಚಾರ ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ, ಇವರ ಅಕ್ರಮಗಳೆಲ್ಲ ಕಣ್ಣಮುಂದೆಯೇ ಕಾಣುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ. ಆರ್ ಪಾಟೀಲ್ ಅಷ್ಟೇ ಅಲ್ಲ, ಬಹುತೇಕ ಕಾಂಗ್ರೆಸ್ ಶಾಸಕರು ಇದೇ ರೀತಿ ಅಸಮಾಧಾನಗೊಂಡಿದ್ದಾರೆ.ಎಲ್ಲದರಲ್ಲೂ ಲಂಚ.. ಅಲ್ಪಸಂಖ್ಯಾತರ ಇಲಾಖೆಯಲ್ಲಿ 14% ಹಣ ಕೊಟ್ರಷ್ಟೇ ಗ್ರ್ಯಾಂಟ್ ಸಿಗುತ್ತೆ ಎನ್ನಲಾಗುತ್ತಿದೆ. ಜಿಗಣಿ ಆದರೆ ರಕ್ತ ಹಿರಿ ಬಿದ್ದು ಹೋಗುತ್ತೆ..ಈ ಕಾಂಗ್ರೆಸ್ ನವರು ರಕ್ತ ಹೀರ್ತಾನೆ ಇರ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.