ಕಾಂಗ್ರೆಸ್ (congress) ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಗೆ,(election manifesto) ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇದೀಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದ ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ (BJP) ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ʻಕಾಂಗ್ರೆಸ್ ಪ್ರಣಾಳಿಕೆಯಲ್ಲಿ(congress manifesto) ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್(congress) ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ(bhajarangdal) ನಿಷೇಧಿಸಲು ನಿಮ್ಮ ಬಳಿ ಧೈರ್ಯ ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದ್ರು.
![](https://pratidhvani.com/wp-content/uploads/2023/05/Congress-Election-Manifesto-1.webp)
ರಾಮಸೇತು ಬಗ್ಗೆ ಸುಪ್ರೀಂಕೋರ್ಟ್ನಲ್ಲಿ(court) ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ ಕಾಂಗ್ರೆಸ್ ನಾಯಕರಿಗೆ(congress leaders) ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ಕಾಂಗ್ರೆಸ್ ವಿರುದ್ಧ ಫಡ್ನವೀಸ್(devendra fadnavees) ವಾಗ್ದಾಳಿ ನಡೆಸಿದ್ರು.
![](https://pratidhvani.com/wp-content/uploads/2023/05/99700419-1024x576.webp)
![](https://pratidhvani.com/wp-content/uploads/2023/05/48f35854-65b1-4c4e-8c2d-9e4348c5debb-18-1024x143.jpg)