• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಮನಗರದಲ್ಲಿ ರಣವಿಳ್ಯ ಕೊಟ್ಟ ಕಾಂಗ್ರೆಸ್‌.. ನಿಖಿಲ್‌ಗೆ ಮತ್ತೆ ಮುಖಭಂಗನಾ..?

ಕೃಷ್ಣ ಮಣಿ by ಕೃಷ್ಣ ಮಣಿ
October 24, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ರಾಮನಗರದಲ್ಲಿ ರಣವಿಳ್ಯ ಕೊಟ್ಟ ಕಾಂಗ್ರೆಸ್‌.. ನಿಖಿಲ್‌ಗೆ ಮತ್ತೆ ಮುಖಭಂಗನಾ..?
Share on WhatsAppShare on FacebookShare on Telegram

ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ರಣವಿಳ್ಯ ನೀಡಿದ್ದು, ನಿಖಿಲ್‌ ಕುಮಾರಸ್ವಾಮಿ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಜೆಡಿಎಸ್‌ – ಬಿಜೆಪಿ ಮೈತ್ರಿ ಅಭ್ಯರ್ಥಿ ಆಗಬೇಕಿದ್ದ ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡ ರಂಗೇರಿದೆ.. ಯೋಗೇಶ್ವರ್‌ ಕಾಂಗ್ರೆಸ್‌ ಅಭ್ಯರ್ಥಿ ಆಗಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್‌‌ ಹಾಜರಿದ್ದುಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ADVERTISEMENT

ಚನ್ನಪಟ್ಟಣದ ಮಂಗಳವಾರಪೇಟೆ ಸರ್ಕಲ್​ನಿಂದ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಕಾಂಗ್ರೆಸ್‌ ನಾಯಕರು, ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ಶಕ್ತಿಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಯೋಗೇಶ್ವರ್​ಗೆ ಪರಿಷತ್‌ ಸದಸ್ಯ ರವಿ, ಡಿ.ಎಂ. ವಿಶ್ವನಾಥ್ ಸೇರಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಾಥ್​ ನೀಡಿದ್ದಾರೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರದೆ ಇನ್ನೆರಡು ದಿನ ಕಾದಿದ್ರೆ ನನ್ನ ಪರಿಸ್ಥಿತಿ ಅತಂತ್ರ ಆಗ್ತಿತ್ತು. ಜೆಡಿಎಸ್ ನಾಯಕರು ಹೇಗೆ ಎಂದು ನನಗೆ ಗೊತ್ತಿದೆ. ಹೊರಗಿನವರ ದಬ್ಬಾಳಿಕೆಯಿಂದ ಒಂದಾಗಿದ್ದೇವೆ. ಜಿಲ್ಲೆಯ ಅಭಿವೃದ್ಧಿಯೇ ನಮ್ಮ ಆದ್ಯತೆ ಎಂದು ನಾನು ಸ್ಥಳೀಯ ಅನ್ನೋ ಕಾರ್ಡ್‌ ಪ್ಲೇ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ‌ ಸಿ.ಪಿ‌ ಯೋಗೇಶ್ವರ್ ರೋಡ್ ಶೋನಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ತೆರೆದ ವಾಹನ ಏರಿ ಸಿಪಿ ಯೋಗೇಶ್ವರ್‌‌ ಪಕ್ಕದಲ್ಲಿ ನಿಂತು ಕೈ ಮುಗಿಯುತ್ತ ಜನರ ಕಡೆ ಕೈ ಬೀಸಿ ಮತಬೇಟೆ ಮಾಡಿದ್ದಾರೆ. ಯೋಗೇಶ್ವರ್ ಅಕ್ಕಪಕ್ಕ ನಿಂತು ಡಿಕೆ ಶಿವಕುಮಾರ್‌ ಹಾಗು ಸಿದ್ದರಾಮಯ್ಯ ಶಕ್ತಿ ತುಂಬಿದ್ದಾರೆ. ನಮ್ಮ ಅಭ್ಯರ್ಥಿ ಯೋಗೇಶ್ವರ್ ಗೆದ್ದೆ ಗೆಲ್ತಾರೆ, ಯೋಗೇಶ್ವರ್ ಗೆಲ್ಲುವ ಕುದುರೆ, ಅವರನ್ನು ನೀವೆಲ್ಲರ ಗೆಲ್ಲಿಸಿ ಎಂದು ಸಿಎಂ ಕರೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕರಕ್ಕೆ ಬಂದು ಎರಡು ವರ್ಷ ಆಗ್ತಿದೆ. ಇನ್ನೂ ಮೂರು ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ‌. ಕುಮಾರಸ್ವಾಮಿ ಶಾಸಕರಾಗಿ ಏನು ಅಭಿವೃದ್ಧಿ ಮಾಡಿಲ್ಲ, ನಾವು ಅಭಿವೃದ್ಧಿ ಮಾಡ್ತೀವಿ, ಹಾಗಾಗಿ ನೀವು ಯೋಗೇಶ್ವರ್ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಲು ನಾನೇ ಸ್ವತ ಬಂದಿದ್ದೇನೆ ಎಂದಿದ್ದಾರೆ.

ಡಿಕೆ ಶಿವಕುಮಾರ್ ಮಾತನಾಡಿ, 85 ಸಾವಿರ ಮತಗಳು ಕೊಟ್ಟು ಡಿಕೆ ಸುರೇಸ್‌ಗೆ ಆಶೀರ್ವಾದ ಮಾಡಿದ್ರಿ. ಆದರೂ ಕೂಡ ಚುನಾವಣೆಯಲ್ಲಿ ಹಿನ್ನಡೆ ಆಯ್ತು. ಈಗ ಸಿಪಿ ಯೋಗೇಶ್ವರ್ ನಮ್ಮ ಜೊತೆ ಸೇರಿದ್ದಾರೆ. ನಾವೆಲ್ಲರೂ ಸೇರಿ ಕ್ಷೇತ್ರ ಜಿಲ್ಲೆ ರಾಜ್ಯ ಅಭಿವೃದ್ಧಿ ಮಾಡೋಣ. ನಮ್ಮ ಜೊತೆ ಬಂದ ಯಾರಿಗೂ ಅನ್ಯಾಯ ಮಾಡಲ್ಲ. ಚನ್ನಪಟ್ಟಣಕ್ಕೆ ಹೊಸ ರೂಪ ಕೊಡಲು ಯೋಜನೆ ಮಾಡಿದ್ದೇವೆ. ನಾನು ಸಿಎಂ ಜೊತೆ ಮಾತಾಡಿದ್ದೇನೆ, 500 ಕೋಟಿ ರೂಪಾಯಿ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡ್ತಿದ್ದೇವೆ ಎಂದಿದ್ದಾರೆ. ತೆನೆ ಹೊಲದಲ್ಲಿ ಇದ್ದರೆ ಚೆಂದ, ಕಮಲ ಕೆರೆಯಲ್ಲಿ ಇದ್ದರೆ ಚೆಂದ, ಈ ದಾನ ಧರ್ಮ ಮಾಡೋ ಹಸ್ತ ಅಧಿಕಾರದಲ್ಲಿ ಇದ್ದರೆ ಚೆಂದ ಎನ್ನುವ ಮೂಲಕ ಕಾಂಗ್ರೆಸ್‌ ಗೆಲ್ಲಿಸಿ ಎಂದು ಕರೆ ಕೊಟ್ಟಿದ್ದಾರೆ.

ಇದೀಗ ಅಳೆದೂ ತೂಗಿ ನಿಖಿಲ್‌ ಕುಮಾರಸ್ವಾಮಿಯನ್ನು ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ನಾನು ಚಕ್ರವ್ಯೂಹ ಭೇದಿಸಿಕೊಂಡು ಬರ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿಯೂ ಹೇಳಿದ್ದಾರೆ. ಆದರೆ ರಾಮನಗರ ಜಿಲ್ಲೆಗೆ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹೊರಗಿನವರು ಅನ್ನೋ ಭಾವನೆ ಬಿತ್ತಲು ಕಾಂಗ್ರೆಸ್‌ ಸಜ್ಜಾಗಿದೆ. ಈಗಾಗಲೇ ಮಂಡ್ಯ ಲೋಕಸಭಾ ಚುನಾವಣೆ ಹಾಗು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲುಂಡಿರುವ ನಿಖಿಲ್‌ ಕುಮಾರಸ್ವಾಮಿ, ಬಂಡೆಗಳ ಎದುರಿಗೆ ನಿಲ್ಲುವ ದುಸ್ಸಾಸ ಮಾಡಿದ್ದಾರೆ. ಆದರೆ ಚನ್ನಪಟ್ಟಣ ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ಡಿಕೆ ಬ್ರದರ್ಸ್‌ ಹಾಗು ಯೋಗೇಶ್ವರ್‌ ಚುನಾವಣಾ ದಾಳಗಳು ಪ್ರಬಲವಾಗಿವೆ ಅನ್ನೋದು ಕ್ಷೇತ್ರದಲ್ಲಿ ಕೇಳಿ ಬರುತ್ತಿರುವ ಮಾತು.

Tags: BJPchannapatna by electionchannapatna by election 2024channapatna by election candidatechannapatna by election datechannapatna by election meetingchannapatna by election newschannapatna by pollschannapatna by- electionchannapatna electionchannapatna election 2024channapatna election newschannapatna re electionchannapatna sabha electionchannapattana election 2024Congress Partydk shivakumar on channapatna by pollskarnataka by election 2024ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಸನಾಂಬೆ ದೇಗುಲದಲ್ಲಿ ಸ್ಥಳೀಯರಿಗೆ ಬೆಲೆಯೇ ಇಲ್ವಾ..? ಜಿಲ್ಲಾಡಳಿತ ನಿರ್ಲಕ್ಷ್ಯ ಯಾಕೆ..?

Next Post

ಕೆರೆಬೇಟೆ ಕನ್ನಡ ಚಿತ್ರಕ್ಕೆ ಹೆಮ್ಮೆಯ ಗರಿ – ಗೋವಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಆಯ್ಕೆ ! 

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025
Next Post
ಕೆರೆಬೇಟೆ ಕನ್ನಡ ಚಿತ್ರಕ್ಕೆ ಹೆಮ್ಮೆಯ ಗರಿ – ಗೋವಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಆಯ್ಕೆ ! 

ಕೆರೆಬೇಟೆ ಕನ್ನಡ ಚಿತ್ರಕ್ಕೆ ಹೆಮ್ಮೆಯ ಗರಿ - ಗೋವಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಆಯ್ಕೆ ! 

Recent News

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
Top Story

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

by ಪ್ರತಿಧ್ವನಿ
June 26, 2025
Top Story

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 26, 2025
Top Story

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

by ಪ್ರತಿಧ್ವನಿ
June 26, 2025
Top Story

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada