• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

‘ಅಧಿಕಾರದ ದಾಹ ಬೇಡ.. ಸರ್ಕಾರದ ವೈಫಲ್ಯ ಬಯಲು ಮಾಡಿ’

ಕೃಷ್ಣ ಮಣಿ by ಕೃಷ್ಣ ಮಣಿ
November 2, 2023
in ಕರ್ನಾಟಕ
0
‘ಅಧಿಕಾರದ ದಾಹ ಬೇಡ.. ಸರ್ಕಾರದ ವೈಫಲ್ಯ ಬಯಲು ಮಾಡಿ’
Share on WhatsAppShare on FacebookShare on Telegram

ADVERTISEMENT

ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಯಾಗುವ ಸಾಧ್ಯತೆಗಳು ಗೋಚರ ಆಗ್ತಿವೆ. ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಭಾನುವಾರ ರಾತ್ರಿ ಬೆಂಗಳೂರು ಶಾಸರನ್ನು ಸೇರಿಸಿಕೊಂಡು ಮಹತ್ವದ ಸಭೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಎದುರಾಗುವ ಸಾಧ್ಯತೆಗಳಿದ್ದು, ಬಿಜೆಪಿಯನ್ನು ಹೇಗೆ ಗೆಲ್ಲಿಸಬೇಕು ಅನ್ನೋ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗೋಪಾಲಯ್ಯ, ಎಸ್.ಆರ್ ವಿಶ್ವನಾಥ್, ಉದಯ ಗರುಡಾಚಾರ್, ಮುನಿರಾಜು ಸೇರಿ ಹಲವರು ಭಾಗಿಯಾಗಿದ್ರು. ಆದರೆ ಆರ್. ಅಶೋಕ್, ಮುನಿರತ್ನ, ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜ್, ಸತೀಶ್ ರೆಡ್ಡಿ, ಮಂಜುಳಾ ಲಿಂಬಾವಳಿ, ಸುರೇಶ್ ಕುಮಾರ್ ಗೈರಾಗಿದ್ರು.

ಶಾಸಕರಿಗೆ ಯಡಿಯೂರಪ್ಪ ಕೊಟ್ಟ ಸಲಹೆಗಳು ಏನು..?

ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ಮಾಡಬೇಕು, ಅಧಿಕಾರ ಹೋಯ್ತು ಎಂದು ಚಿಂತಿಸಬೇಡಿ. ನಾಯಕತ್ವದ ಬಗ್ಗೆ ವರಿಷ್ಠರು ನಿರ್ಧಾರ ಮಾಡ್ತಾರೆ. ನಮ್ಮದು ಏನಿದ್ರು ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸೋದು. ಕಾಂಗ್ರೆಸ್‌ ಸರ್ಕಾರ ಬಂದ ಆರೇ ತಿಂಗಳಲ್ಲೇ ಸಾಲು ಸಾಲು ಭ್ರಷ್ಟಾಚಾರ ಪ್ರಕರಣ ಗಳು ಹೊರಗೆ ಬರುತ್ತಿವೆ. ಇದರ ಬಗ್ಗೆ ಪರಿಣಾಮಕಾರಿ ಹೋರಾಟ ಮಾಡಬೇಕಿದೆ. ಆಗ ಮಾತ್ರ ನಾವು ಪ್ರತಿಪಕ್ಷವಾಗಿ ಕೆಲಸ ಮಾಡ್ತಿದ್ದೇವೆ ಎಂದು ಜನರಿಗೆ ತಿಳಿಯುತ್ತೆ. ಇಲ್ಲವಾದಲ್ಲಿ ನಾವು ಏನು ಮಾಡಿದ್ರು ಪ್ರಯೋಜನ ಆಗುವುದಿಲ್ಲ. ಚುನಾವಣೆಯಲ್ಲಿ ಪಕ್ಷ ಸೋತ ನಂತರ ಕಾರ್ಯಕರ್ತರು ಬೇಸರ ಆಗಿದ್ದಾರೆ. ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೊಳ್ಳುವ ಕೆಲಸ ಮಾಡಿ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬರ ಅಧ್ಯಯನ ಮಾಹಿತಿ ಸಂಗ್ರಹಕ್ಕೆ ಎಲ್ಲರೂ ಬನ್ನಿ!

ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇದ್ದರೂ, ನಾನು ನಿಮ್ಮ ಪರವಾಗಿ ಇರುತ್ತೇನೆ. ಕೆಲವೇ ದಿನಗಳಲ್ಲಿ ಚಳಿಗಾಲದ ಅಧಿವೇಶನ ಕೂಡ ಬರುತ್ತಿದೆ. ಅಷ್ಟೊತ್ತಿಗೆ ನಾವು ಬೆಂಗಳೂರಿನ ಸಮಸ್ಯೆಗಳ ಇಂಚಿಂಚು ಪಟ್ಟಿ ಮಾಡಿಕೊಳ್ಳಬೇಕು. ಆ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಬೇಕು. ನಿಮ್ಮ ನಿಮ್ಮ ಏನೇ ಆಸೆ, ಆಕಾಂಕ್ಷೆಗಳು ಇದ್ದರೂ ಅದರ ಬಗ್ಗೆ ವರಿಷ್ಠರು ನಿರ್ಧಾರ ಮಾಡ್ತಾರೆ. ಆದರೆ ನಾವು ಇಲ್ಲಿ ಒಟ್ಟಾಗಿ ಕೆಲಸ ಮಾಡಿ ಪಕ್ಷ ಸಂಘಟಿಸುವ ಕೆಲಸ ಮಾಡಬೇಕಿದೆ. ಪಂಚರಾಜ್ಯಗಳ ಚುನಾವಣೆ ಬಳಿಕ ವರಿಷ್ಠರು ನಾಯಕತ್ವ ತೀರ್ಮಾನ ಮಾಡಬಹುದು. ನವೆಂಬರ್ 3 ರಿಂದ ಆರಂಭ ಆಗುತ್ತಿರುವ ಬರ ಅಧ್ಯಯನ ಪ್ರವಾಸದಲ್ಲಿ ಬೆಂಗಳೂರು ಅಧ್ಯಯನ ತಂಡದಲ್ಲಿ ನಾನಿದ್ದು, ನೀವೆಲ್ಲರೂ ನನ್ನ ಜೊತೆ ಬರಬೇಕು ಎಂದು ಶಾಸಕರಿಗೆ ತಿಳಿಸಿದ್ದಾರೆ. ನಿಮ್ಮ ನಿಮ್ಮ ಕ್ಷೇತ್ರಗಳ ಸಮಸ್ಯೆ ಬಗ್ಗೆ ವರದಿ ರೆಡಿ ಮಾಡಿಕೊಡಿ ಎಂದು ಶಾಸಕರಿಗೆ ತಿಳಿಸಿದ್ದಾರೆ. ಸಭೆಗೆ ಬಾರದ ಶಾಸಕರು ಕೂಡ ಬರ ಅಧ್ಯಯನ ಪ್ರವಾಸಕ್ಕೆ ಬರಬೇಕು ಎಂದು ಒತ್ತಿ ಹೇಳಿದ್ದಾರೆ.

ಬೆಂಗಳೂರು ಪ್ರವಾಸವೇ ಯಡಿಯೂರಪ್ಪಗೆ ಸವಾಲು..!

ಬೆಂಗಳೂರಿನಲ್ಲಿ ಯಡಿಯೂರಪ್ಪ ನಾಯಕತ್ವಕ್ಕೆ ಸಪೋರ್ಟ್‌ ಮಾಡಲಿಲ್ಲ ಅಂತಾ ಆರ್. ಅಶೋಕ್ ಕೊಂಚ ದೂರ ಸರಿದಿದ್ದಾರೆ. ಇನ್ನು ಎಸ್.ಟಿ ಸೋಮಶೇಖರ್ ಹಾಗು ಬೈರತಿ ಬಸವರಾಜ್ ಕಾಂಗ್ರೆಸ್‌ಗೆ ಪರೋಕ್ಷವಾಗಿ ಸಪೋರ್ಟ್‌ ಮಾಡ್ತಿದ್ದಾರೆ ಅಂತಾ ಪಕ್ಷವೇ ಸ್ವಲ್ಪ ಬದಿಗೆ ಸರಿಸಿದೆ. ಇನ್ನು ಶಾಸಕ ಮುನಿರತ್ನ, ಸತೀಶ್ ರೆಡ್ಡಿ, ಮಂಜುಳಾ ಲಿಂಬಾವಳಿ ಹಾಗು ಸುರೇಶ್ ಕುಮಾರ್ ಗೈರು ಹಾಜರಿಗೆ ನಿಖರ ಕಾರಣ ಗೊತ್ತಾಗಿಲ್ಲ. ಇವರು ಬರ ಪ್ರವಾಸಕ್ಕೆ ಬರುವಂತೆ ಮಾಡುವುದು ಯಡಿಯೂರಪ್ಪಗೆ ಇರುವ ಸವಾಲು. ಬರ ಪ್ರವಾಸ ಒಂದು ರೀತಿಯಲ್ಲಿ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ ಅಂತಾನೇ ಹೇಳಬಹುದು. ಒಂದು ವೇಳೆ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು 17 ತಂಡಗಳ ನಾಯಕರಿಗೆ ಸವಾಲು ಆಗಿದೆ. ರಾಜ್ಯದಲ್ಲಿ ಎದುರಾಗಿರುವ ಬರಕ್ಕೆ ಪರಿಹಾರ ಕೊಡದೆ ಇದ್ದರೆ ಕಾಂಗ್ರೆಸ್‌ ಸರ್ಕಾರ ಮುಗಿ ಬೀಳುತ್ತಿದೆ. ಒಂದು ವೇಳೆ ಪರಿಹಾರ ಕೊಡುವುದಾದರೆ ಹೇಗೆ ಕೊಡಬೇಕು ಅನ್ನೋದನ್ನು ತಿಳಿದುಕೊಳ್ಳಲು ಕೇಂದ್ರ ಸರ್ಕಾರ ವರದಿ ಬಯಸಿದೆ ಅಂತಾನೇ ಹೇಳಬಹುದು.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚುನಾವಣಾ ಫಂಡಿಂಗ್‌ ಒಂದು ಕಾಂಪ್ಲಿಕೇಟೆಡ್‌ ವಿಷಯವಾಗಿದೆ: ಸುಪ್ರೀಂ ಕೋರ್ಟ್‌

Next Post

ಕಾಂಗ್ರೆಸ್‌‌ನಲ್ಲಿ ನಾಯಕತ್ವ ಕಚ್ಚಾಟಕ್ಕೆ ಹೈಕಮಾಂಡ್‌ ಬ್ರೇಕ್‌.. ಇನ್ನಾದ್ರೂ ನಿಲ್ಲುತ್ತಾ ಗೊಂದಲ..?

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಕಾಂಗ್ರೆಸ್‌‌ನಲ್ಲಿ ನಾಯಕತ್ವ ಕಚ್ಚಾಟಕ್ಕೆ ಹೈಕಮಾಂಡ್‌ ಬ್ರೇಕ್‌.. ಇನ್ನಾದ್ರೂ ನಿಲ್ಲುತ್ತಾ ಗೊಂದಲ..?

ಕಾಂಗ್ರೆಸ್‌‌ನಲ್ಲಿ ನಾಯಕತ್ವ ಕಚ್ಚಾಟಕ್ಕೆ ಹೈಕಮಾಂಡ್‌ ಬ್ರೇಕ್‌.. ಇನ್ನಾದ್ರೂ ನಿಲ್ಲುತ್ತಾ ಗೊಂದಲ..?

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada