
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಆಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಲು ಒತ್ತಾಯಿಸಿದ ಆರೋಪ ಮಾಡಲಾಗಿತ್ತು. ಆದರೆ ಇದೀಗ ಕೋರ್ಟ್ನಲ್ಲಿ ಹಿನ್ನಡೆ ಆಗಿದೆ.

ಇಬ್ಬರು ED ಅಧಿಕಾರಿಗಳ ವಿರುದ್ದ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಿದೆ ರಾಜ್ಯ ಹೈಕೋರ್ಟ್. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಲ್ಲಿ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಬಿದ್ದಿದೆ.ಜಾರಿ ನಿರ್ದೇಶನಾಲಯ ಡೆಪ್ಯೂಟಿ ಡೈರೆಕ್ಟರ್ ಮನೋಜ್ ಮಿತ್ತಲ್ ಹಾಗು ಅಸಿಸ್ಟೆಂಟ್ ಡೈರೆಕ್ಟರ್ ಮುರಳಿ ಕಣ್ಣನ್ ವಿರುದ್ದ ದಾಖಲಾಗಿದ್ದ ಎಫ್ಐಆರ್ ರದ್ದು ಆಗಿದೆ.ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಎಂದು ಕೋರ್ಟ್ ಆದೇಶ ಮಾಡಿದೆ.
ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಕಲ್ಲೇಶ್ ದಾಖಲಿಸಿದ್ದ ಕೇಸ್ ಇದಾಗಿದ್ದು, ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯಿಸಿದ ಆರೋಪ ಹೊರಿಸಲಾಗಿತ್ತು.ಇಡಿ ದಾಳಿ ಬಳಿಕ ರಾಜ್ಯ ಸರ್ಕಾರ ಕೌಂಟರ್ ಕೇಸ್ ರೀತಿ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿತ್ತು.ಇಬ್ಬರು ಇಡಿ ಅಧಿಕಾರಿಗಳು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಮಾಡಿದೆ. ಅರ್ಜಿ ವಜಾ ಆಗುವುದನ್ನು ತಪ್ಪಿಸಲು ಅರ್ಜಿಯನ್ನು ವಾಪಸ್ ಪಡೆದುಕೊಳ್ಳಲಾಗಿದೆ.