• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Any Mind by Any Mind
May 30, 2023
in Top Story, ಇತರೆ / Others, ಇದೀಗ
0
Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!
Share on WhatsAppShare on FacebookShare on Telegram

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರ ಜೊತೆಗೆ ಪ್ರತ್ಯೇಕವಾಗಿ ಪ್ರಣಾಳಿಕೆಯನ್ನೂ ನೀಡಿತ್ತು. ಪ್ರಣಾಳಿಕೆ ಜಾರಿ ಸ್ವಲ್ಪ ತಡವಾದರೂ 5 ಗ್ಯಾರಂಟಿ ಯೋಜನೆಗಳ ಜಾರಿ ಮಾಡುವುದು ತಡ ಆಗುವುದಿಲ್ಲ ಎನ್ನುವ ಭರವಸೆನ್ನು ನೀಡಿತ್ತು. ಮೊದಲ ಕ್ಯಾಬಿನೆಟ್​ನಲ್ಲೇ ಗ್ಯಾರಂಟಿ ಜಾರಿ ಬಗ್ಗೆ ಹೇಳಿಕೊಂಡಿದ್ದ ಕಾಂಗ್ರೆಸ್​ ಪಕ್ಷ, ಇದೀಗ ಮೊದಲ ಕ್ಯಾಬಿನೆಟ್​ನಲ್ಲಿ ತಾತ್ವಿಕ ಒಪ್ಪಿಗೆ ನೀಡಿ ಜನರ ಆಶಯದಂತೆ ಕೆಲಸ ಮಾಡುವ ಮುನ್ಸೂಚನೆ ನೀಡಿದೆ. ಆದರೆ ಜನರು ಗ್ಯಾರಂಟಿಗಳು ಜಾರಿ ಆಗುವುದು ಯಾವಾಗ ಅನ್ನೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಅದರಲ್ಲಿ ಬಹು ಬೇಡಿಕೆಯ ಗ್ಯಾರಂಟಿ ಅಂದ್ರೆ 200 ಯೂನಿಟ್​ ವಿದ್ಯುತ್​ ಉಚಿತ ಹಾಗು ಮಹಿಳೆಯರಿಗೆ ಬಸ್​ನಲ್ಲಿ ಉಚಿತ ಪ್ರಯಾಣ.

ADVERTISEMENT

ಸಾರಿಗೆ ನಿಗಮಗಳ ಎಂಡಿ ಜೊತೆ ಸಾರಿಗೆ ಸಚಿವರ ಸಭೆ

ಗುರುವಾರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಇದೀಗ ಸಾರಿಗೆ ನಿಗಮಗಳ ಸದ್ಯದ ಸ್ಥಿತಿಗತಿ ಹಾಗು ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟರೆ ಆಗಬಹುದಾದ ನಷ್ಟ. ಎಲ್ಲಾ ಆಯಾಮದಿಂದಲೂ ಸಚಿವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಭೆಯಲ್ಲಿ ನಾಲ್ಕು ನಿಗಮಗಳು ಯಾವ ರೀತಿ ಕಾರ್ಯ ನಿರ್ವಹಿಸುತ್ತಿವೆ..? ಯಾವ ನಿಗಮ ಎಷ್ಟು ಆದಾಯ ಗಳಿಸುತ್ತಿವೆ..? ಎಷ್ಟು ನಷ್ಟದಲ್ಲಿವೆ? ಎನ್ನುವ ಮಾಹಿತಿ ಪಡೆದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಿದರೆ ಪ್ರತಿ ವರ್ಷ ಅಂದಾಜು 3200 ಕೋಟಿ ಖರ್ಚು ಆಗಲಿದೆ ಎನ್ನುವ ಮಾಹಿತಿ ಪಡೆದಿದ್ದಾರೆ.

ಕೊರೊನಾ ಕಾಲದಲ್ಲಿ ಸಾರಿಗೆ ಸಂಸ್ಥೆಗಳಿಗೆ ನಷ್ಟ..

ಕೊರೊನಾ ಕಾಲದಲ್ಲಿ ಸಾರಿಗೆ ಸಂಚಾರ ಬಂದ್​ ಆಗಿದ್ದರಿಂದ ನಾಲ್ಕು ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಸರ್ಕಾರ ಸಹಾಯಧನ ನೀಡಿದ್ರೆ ಮಹಿಳೆಯರಿಗೆ ಉಚಿತ ಸಂಚಾರದ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಕಾಲದ ನಷ್ಟ ಸರಿದೂಗಿಸಲು ಬ್ಯಾಂಕ್​ಗಳಲ್ಲಿ ಸಾಲ ಪಡೆಯಲಾಗಿದೆ. ಸಾರಿಗೆ ನಿಗಮದ ಕೆಲವು ಆಸ್ತಿಗಳನ್ನು ಅಡಮಾನ ಇಡಲಾಗಿದೆ. ಈಗಾಗಲೇ ಹಲವು ರೀತಿಯ ಪಾಸ್​ಗಳಿಂದ ನಿಗಮಗಳಿಗೆ ಸಾವಿರಾರು ಕೋಟಿ ಹಣ ಬರಬೇಕಿದೆ. ನೌಕರರಿಗೆ ಸಂಬಳ ನೀಡಲು ಸರ್ಕಾರ ಹಣ ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕೂಡ ಗ್ಯಾರಂಟಿಗಳ ಜಾರಿಗೆ ಕಸರತ್ತು ಮಾಡಿದ್ದು, ಶಕ್ತಿ ಭವನದಲ್ಲಿ ಯೋಜನಾ ವರದಿಗಳ ಮೇಲೆ ಚರ್ಚೆ ಮಾಡಲಾಗ್ತಿದೆ.

ಮಹಿಳೆಯರ ಉಚಿತ ಪ್ರಯಾಣಕ್ಕೆ ನಿರ್ಬಂಧ ಇಲ್ಲ..!

ಸಾರಿಗೆ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ ಬಳಿಕ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಬಗ್ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಸಭೆ ಇದೆ. ನಾಳೆ ಸಿಎಂ ಸಿದ್ದರಾಮಯ್ಯ ಫೈನಲ್ ಮಾಡ್ತಾರೆ. ಇಂದಿನ ಸಭೆಯಲ್ಲಿ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಸಂಚಾರ ಯೋಜನೆ ಜಾರಿ ಮಾಡೋದ್ರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. 4 ನಿಗಮಗಳಲ್ಲಿ ಒಟ್ಟು 23,978 ವಾಹನಗಳಿವೆ. 1,04650 ಜನ ಸಿಬ್ಬಂದಿಗಳಿದ್ದಾರೆ. 4,449 ಬಸ್‌ಗಳು ಹೊಸದಾಗಿ ಸೇರ್ಪಡೆಯಾಗಲಿದೆ. 82 ಲಕ್ಷದ 51ಸಾವಿರ ಪ್ರಯಾಣಿಕರು ಪ್ರತಿನಿತ್ಯ ಸಂಚಾರ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಸಿದ್ಧ ಸಾರಿಗೆ ಸಂಸ್ಥೆ ಆಗಿ KSRTC , BMTC ಬೆಳೆದಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ಸಿಗಲಿದ್ದು, ಮಹಿಳೆಯರಿಗೆ ಪ್ರತ್ಯೇಕ ಬಸ್ ಇರಲ್ಲ. ನಾಲ್ಕು ನಿಗಮದ ಬಸ್​ಗಳಲ್ಲೇ ಮಹಿಳೆಯರಿಗೆ ಉಚಿತ ಪ್ರಯಾಣ ಸಿಗಲಿದೆ ಎಂದಿದ್ದಾರೆ ಸಚಿವ ರಾಮಲಿಂಗಾ ರೆಡ್ಡಿ. ಇನ್ನು ಉಚಿತ ಪ್ರಯಾಣಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ಸಚಿವರು, ನಾಳೆ ಈ ಬಗ್ಗೆ ಸಿಎಂ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ನಾವು ಬಿಜೆಪಿಯವರ ಹತ್ರ ಹೇಳಿಸಿಕೊಳ್ಳಬೇಕಿಲ್ಲ. ಅವರು ಪ್ರತಿಭಟನೆ ಮಾಡೋದಕ್ಕೆ ಅವಕಾಶವನ್ನೇ ನೀಡಲ್ಲ ಎಂದಿದ್ದಾರೆ.

ಕೃಷ್ಣಮಣಿ

Tags: 200 units of free electricity5 guaranteescmsiddaramiahCongress GovernmentCongress GuaranteeDCM DK ShivakumarDKShivakumarfree bus travel for womenlatestnewsmanifestoRamalinga Reddysiddaramaiah
Previous Post

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Next Post

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada