ಯುದ್ಧಕ್ಕೂ ಮುನ್ನವೇ ಕಾಂಗ್ರೆಸ್ ಸೋಲು ಒಪ್ಪಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
![](https://pratidhvani.com/wp-content/uploads/2024/04/cpfebl08_pm-modi-twitter_625x300_20_April_24-1024x630.webp)
ಈ ನಿಟ್ಟಿನಲ್ಲಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ. ರಾಹುಲ್ 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲಿಯೂ ಜನ ಬೆಂಬಲ ಪಡೆಯುವುದು ಕಷ್ಟವಾಗಿದೆ. ಹೀಗಾಗಿ ಅಲ್ಲಿಂದಲೂ ಓಡಿ ಹೋಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
![](https://pratidhvani.com/wp-content/uploads/2024/04/109440702-1024x576.webp)
ಇಂಡಿಯಾ ಒಕ್ಕೂಟದ ನಾಯಕ ಯಾರು ಎಂಬುವುದನ್ನೇ ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಈ ಮೈತ್ರಿಕೂಟಕ್ಕೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ಇದೆ. ಹಿರಿಯ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುವುದನ್ನು ಹೆಚ್ಚಿನ ಮತದಾರರು ತೋರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.