• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ ; ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
May 2, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ನಮ್ಮ ಸರ್ಕಾರದ ಯೋಜನೆಗಳನ್ನೇ ಕಾಂಗ್ರೆಸ್ ಕಾಪಿ ಮಾಡಿದೆ ; ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಮೈಸೂರು: ಮೇ.01: ಪಡಿತರದಲ್ಲಿ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಜೊತೆಗೆ ಅರ್ಧ ಲೀಟರ್ ನಂದಿನಿ ಹಾಲು ಸೇರಿಸಿ ನಾವು ಸಂಪೂರ್ಣ ಆರೋಗ್ಯ ಕಿಟ್ ಕೊಡುತ್ತಿದ್ದೇವೆ. ಆರ್ಥಿಕ ದುರ್ಬಲರಿಗೆ ಒಳ್ಳೆಯ ಆಹಾರ ಸಿಗುವ ಸಲುವಾಗಿ ಈ ಪ್ಯಾಕೇಜ್ ಕೊಡುತ್ತಿದ್ದೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ADVERTISEMENT

ಇಂದು ಮೈಸೂರಿನಲ್ಲಿ ಸಾರ್ವಜನಿಕ ರೋಡ್ ಶೋಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರೈತರು ಬೆಳೆಯುವ ಜೋಳ, ರಾಗಿ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಅವರಿಂದ ಖರೀದಿ ಮಾಡಿ ಅವರಿಗೆ ಬೆಂಬಲ ನೀಡುವ ಯೋಜನೆ ನಮ್ಮದು. ಇದರಿಂದ ಪೌಷ್ಠಿಕ ಆಹಾರ ಕೂಡ ಸಿಗುತ್ತದೆ. ಹಾಲು ಕೊಡುವುದರಿಂದ ರೈತರಿಂದ ದೊಡ್ಡ ಪ್ರಮಾಣದ ಖರೀದಿ ಆಗುತ್ತದೆ ಮತ್ತು ಅವರಿಗೆ ಉತ್ಪಾದನೆ ಮಾಡಲು ಬೆಂಬಲ ಸಿಗುತ್ತದೆ. ಈ ಬಗ್ಗೆ ಸಮಗ್ರ ಚಿಂತನೆ ಮಾಡಿ ಈ ಯೋಜನೆ ಮಾಡಿದ್ದೇವೆ. ಸಿರಿಧಾನ್ಯ ಉತ್ಪಾದನೆಗೆ ಸಾಕಷ್ಟು ಪ್ರೋತ್ಸಾಹ ಸಿಗುತ್ತಿದೆ. ಬೆಲೆ ಕಡಿಮೆ ಇದ್ದ ರಾಗಿ ಪಡಿತರದಲ್ಲಿ ಕೊಟ್ಟ ಮೇಲೆ ಹೆಚ್ಚಿನ ಉತ್ಪಾದನೆ ಆಗ್ತಿದೆ ಮತ್ತು ಉತ್ತಮ ಬೆಲೆ ಕೂಡ ಸಿಗ್ತಿದೆ. ನಮ್ಮ ಪೋಷಣ್ ಅಭಿಯಾಣದಲ್ಲಿ ಇದೆಲ್ಲವೂ ಸೇರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅವರ ರಿಪೋರ್ಟ್ ಕಾರ್ಡ್ ಕೊಡಲಿ
ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ. ನಾನು ಬಜೆಟ್ ನಲ್ಲೇ ವಿದ್ಯಾರ್ಥಿನಿಯರಿಗೆ ಮತ್ತು ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದೆ. ಎಸ್ಸಿ ಎಸ್ಟಿ ಕುಟುಂಬಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದೆ, ಅದನ್ನೇ ಕಾಂಗ್ರೆಸ್ ಅವರು ಕಾಪಿ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮೋದಿ, ಅಮಿತ್ ಶಾ ರಿಂದ ನಮಗೆ ಆನೆ ಬಲ
ಮೋದಿ ಮತ್ತು ಅಮಿತ್ ಶಾ ಅವರು ಪ್ರಚಾರಕ್ಕೆ ಬಂದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗುತ್ತೆ. ಪ್ರಧಾನಿ ಮೋದಿ ನೆನ್ನೆ ಮೈಸೂರಿಗೆ ಬಂದು ಹೋದ ಮೇಲೆ ಜನರಲ್ಲಿ ಬಹಳ ದೊಡ್ಡ ಉತ್ಸಾಹ ಕಾಣುತ್ತಿದೆ. ಇದರಿಂದ ಹೆಚ್ಚಿನ ಪರ್ಸೆಂಟೇಜ್ ಓಟಿಂಗ್ ಕೂಡ ಆಗುತ್ತದೆ. ಸೋಲುವ ಹತಾಶೆಯಲ್ಲಿ ವಿರೋಧ ಪಕ್ಷಗಳು ತಮ್ಮ ಸ್ಥಿಮಿತವನ್ನು ಕಳೆದುಕೊಂಡು ಪ್ರಧಾನಿ ವಿರುದ್ಧ ಮಾತನಾಡುತ್ತಿದ್ದಾರೆ. ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. ಈಗ ಅವರ ಮಗನ ಸರದಿ. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ವರುಣಾದಲ್ಲಿ ಗಲಾಟೆ ಆಗಬಾರದು
ಕಾಂಗ್ರೆಸ್ ಅವರು ಸೋಲುತ್ತೇವೆಂದು ಹತಾಶರಾಗಿ ಗಲಾಟೆ ಮಾಡಿಸುತ್ತಿದ್ದಾರೆ. ಬಹಳ ಸುಲಭವಾಗಿ ಗೆಲ್ಲುತ್ತೀವಿ ಎಂಬ ಭ್ರಮೆ ಅವರಲ್ಲಿತ್ತು. ಕಾಂಗ್ರೆಸ್ ಓಟ್ ಬ್ಯಾಂಕ್ ಅವರಿಂದ ಸರಿಯುತ್ತಿದೆ. ಗಲಾಟೆ ಮಾಡಿದ್ರೆ ನಾವು ಗೆಲ್ಲಬಹುದು ಮತ್ತು ನಮ್ಮ ಪ್ರಚಾರವನ್ನು ತಡೆಯಬಹುದು ಎಂದು ಅವರು ಗಲಾಟೆ ಮಾಡುತ್ತಿದ್ದಾರೆ. ತಳಮಟ್ಟದಲ್ಲಿ ಬಹಳ ಬದಲಾವಣೆ ಆಗ್ತಿದೆ. ನಾವು ಗೆಲುವಿನ ಕಡೆಗೆ ಸಾಗುತ್ತಿದ್ದೇವೆ. ಜನ ಜಾಗೃತರಾಗಿದ್ದಾರೆ. ಹಳೇ ಪದ್ಧತಿ ಈಗ ನಡೆಯಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Tags: amithshahBJP GovernmentcmbommaiCongress PartycongressvsbjpKarnataka ElectionKarnataka Politicslatest news digitalModiನರೇಂದ್ರ ಮೋದಿಬಿಜೆಪಿ
Previous Post

ಪ್ರಧಾನಿ ಮೋದಿಯವರಿಗೆ ನಾಲಾಯಕ್ ಎಂದವರಿಗೆ ತಕ್ಕ ಪಾಠ ಕಲಿಸಿ ; ಸಿಎಂ ಬೊಮ್ಮಾಯಿ‌

Next Post

ಮತದಾನಕ್ಕೆ 2 ದಿನ ಮುಂಚೆ ಹೊರ ಜಿಲ್ಲೆಯ ರಾಜಕೀಯ ಪ್ರತಿನಿಧಿಗಳು ಜಿಲ್ಲೆಯನ್ನು ಬಿಡಬೇಕು: ಡಾ. ಕೆ.ವಿ ರಾಜೇಂದ್ರ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

June 26, 2026
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
Next Post
ಮತದಾನಕ್ಕೆ 2 ದಿನ ಮುಂಚೆ ಹೊರ ಜಿಲ್ಲೆಯ ರಾಜಕೀಯ ಪ್ರತಿನಿಧಿಗಳು ಜಿಲ್ಲೆಯನ್ನು ಬಿಡಬೇಕು: ಡಾ. ಕೆ.ವಿ ರಾಜೇಂದ್ರ

ಮತದಾನಕ್ಕೆ 2 ದಿನ ಮುಂಚೆ ಹೊರ ಜಿಲ್ಲೆಯ ರಾಜಕೀಯ ಪ್ರತಿನಿಧಿಗಳು ಜಿಲ್ಲೆಯನ್ನು ಬಿಡಬೇಕು: ಡಾ. ಕೆ.ವಿ ರಾಜೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada