ಹಾಸನ (Hassan): ದೇಶದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಸಿಎಂ ಇದ್ದರೆ ಅದು ಸಿದ್ದರಾಮಯ್ಯ (Siddaramaiah) ಅವರು ಮಾತ್ರ ಎಂದು ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ (Yatindra siddaramaiah) ಹೇಳಿದ್ದಾರೆ.
ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಳೆದ ಬಾರಿ ಅಧಿಕಾರದಲ್ಲಿದ್ದಾಗ ಶೋಷಿತರು, ಬಡವರು ಎಲ್ಲಾ ವರ್ಗದವರಿಗೂ ಯೋಜನೆ ಕೊಟ್ಟರು. ಈ ಬಾರಿ 5 ಗ್ಯಾರಂಟಿ ಕೊಟ್ಟಿದ್ದಾರೆ. ನುಡಿದಂತೆ ಅಧಿಕಾರಕ್ಕೆ ಬಂದ ಒಂಭತ್ತೇ ತಿಂಗಳಿನಲ್ಲಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ನುಡಿದಂತೆ ನಡೆಯುವ ಸಿಎಂ ಅಂದರೆ ಸಿದ್ದರಾಮಯ್ಯ ಅವರು ಎಂದರು.
ಸಮಾಜದ ಕಟ್ಟ ಕಡೆಯ ಹಾಗೂ ಶೋಷಣೆಗೆ ಒಳಗಾದವರಿಗೆ ಶಕ್ತಿ ತುಂಬಬೇಕು ಎಂಬುದೇ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ಧ್ಯೇಯ. ಅದರಂತೆ ಅವರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ.
ಐದು ಗ್ಯಾರಂಟಿ ಜಾರಿ ಆದರೆ ರಾಜ್ಯ ದಿವಾಳಿ ಆಗುತ್ತೆ ಅಂತ ಬಿಜೆಪಿಯವರು ಹೇಳಿದ್ರು. ಹೆಚ್ಚು ಸಾಲ ಮಾಡದೆ ಒಳ್ಳೆಯ ಬಜೆಟ್ ಮಂಡಿಸಿದ್ದಾರೆ. 58 ಸಾವಿರ ಕೋಟಿ ಗ್ಯಾರಂಟಿಗೆ ಖರ್ಚಾಗುತ್ತೆ. ಇದೆಲ್ಲವನ್ನೂ ಕೊಟ್ಟು ಬಜೆಟ್ ಮಂಡನೆ ಮಾಡಿದ್ದಾರೆ. ಇದು ಸಿದ್ದರಾಮಯ್ಯ ಅವರ ಬದ್ಧತೆ, ಕ್ಷಮತೆ ಎಂದರು.
70 ವರ್ಷ ಕಾಂಗ್ರೆಸ್ ಏನೂ ಮಾಡಿಲ್ಲ ಅಂತಾರೆ. ಇಷ್ಟು ವರ್ಷ ಕಾಂಗ್ರೆಸ್ ಸಂವಿಧಾನ ರಕ್ಷಿಸಿದೆ. ಸಿದ್ದರಾಮಯ್ಯ ಸರ್ಕಾರ ಹಲವು ಜನಪರ ಕೆಲಸ ಮಾಡಿದೆ. ಇದೇ ರೀತಿ ಕೆಲಸ ಮುಂದುವರಿಸಬೇಕು ಎಂದರೆ ನೀವು ಅಂತ ರಾಜಕೀಯ ನಾಯಕರಿಗೆ ಶಕ್ತಿ ಕೊಡಬೇಕು. ನಿಮ್ಮ ಪರವಾಗಿ ಕೆಲಸ ಮಾಡುವ ಸಿದ್ದರಾಮಯ್ಯ ಅವರ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು.
#karnataka #hassan #siddaramaiah #yatindrasiddramaiah #congress