2018ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿ ಮುಗಿಯುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 23 ಸಾವಿರ ರೌಡಿಗಳಿದ್ದರು. ಆದರೆ 2022 ಜೂನ್ ವೇಳೆಗೆ ವೇಳೆಗೆ ರೌಡಿಗಳ ಸಂಖ್ಯೆ 33 ಸಾವಿರ ಆಗಿದೆ. ಇನ್ನೂ ಬೆಂಗಳೂರಿನಲ್ಲಿ 3 ಸಾವಿರ ಇದ್ದ ರೌಡಿಗಳ ಸಂಖ್ಯೆ 6620ಕ್ಕೆ ಏರಿಕೆಯಾಗಿದೆ
ಬಿಜೆಪಿ ಸೇರಲು ಮುಂದಾಗಿರುವ ರೌಡಿ ಶೀಟರ್ಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ರೌಡಿ ಶೀಟರ್ಗಳು ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಜೆಪಿ ಸೇರಲು ಮುಂದಾಗಿರುವ ರೌಡಿ ಶೀಟರ್ಗಳ ಪಟ್ಟಿಯನ್ನ ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಣ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೌಡಿಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ 2018ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿ ಮುಗಿಯುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 23 ಸಾವಿರ ರೌಡಿಗಳಿದ್ದರು. ಆದರೆ 2022 ಜೂನ್ ವೇಳೆಗೆ ವೇಳೆಗೆ ರೌಡಿಗಳ ಸಂಖ್ಯೆ 33 ಸಾವಿರ ಆಗಿದೆ. ಇನ್ನೂ ಬೆಂಗಳೂರಿನಲ್ಲಿ 3 ಸಾವಿರ ಇದ್ದ ರೌಡಿಗಳ ಸಂಖ್ಯೆ 6620ಕ್ಕೆ ಏರಿಕೆಯಾಗಿದೆ
ಹೀಗಾಗಿ ಇದೀಗ ಬಿಜೆಪಿ ರೌಡಿ ಮೋರ್ಚಾ ಆರಂಭಿಸಿದ್ದು, ಪ್ರಮುಖ 60 ರೌಡಿಗಳು ಈ ಮೋರ್ಚಾಗೆ ಸೇರಲು ಮುಂದಾಗಿದ್ದಾರೆ. ಇದರ ಮೊದಲ ಹಂತದಲ್ಲಿ ಈಗಾಗಲೇ 36 ರೌಡಿ ಶೀಟರ್ಗಳು ಬಿಜೆಪಿ ಸೇರಿದ್ದು, 24 ರೌಡಿಗಳ ಸೇರ್ಪಡೆ ಬಾಕಿ ಇದೆ. ಇದರ ಜೊತೆಗೆ ರಾಜ್ಯದಲ್ಲಿ ಒಟ್ಟು 150 ರೌಡಿಗಳನ್ನು ಸೇರಿಸಿಕೊಳ್ಳಲು ಬಿಜೆಪಿ ಪಟ್ಟಿ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸೇರ್ಪಡೆಯಾಗಿರುವ 36 ರೌಡಿಗಳ ಪೈಕಿ ಸೈಲೆಂಟ್ ಸುನೀಲ್, ನಾಗಮಂಗಲದ ಫೈಟರ್ ರವಿ, ಬೆತ್ತನಗೆರೆ ಶಂಕರ ಪ್ರಮುಖವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮುಂದಿನ ಹಂತದಲ್ಲಿ ಉಳಿದ 24 ರೌಡಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಎಂ. ಲಕ್ಷ್ಮಣ್ ತಿಳಿಸಿದರು.
ಬಿಜೆಪಿ ನಾಯಕರು ಮಾತೆತ್ತಿದರೆ ಡಿ.ಕೆ. ಶಿವಕುಮಾರ್ ಬಗ್ಗೆ ಹೇಳಿಕೆ ನೀಡುತ್ತಾರೆ. ಆದರೆ ಶಿವಕುಮಾರ್ ಅವರು ಉದ್ಯಮಿಗಳು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಅವರು ತಮ್ಮ ಆದಾಯ ಎಲ್ಲವನ್ನು ಐಟಿಗೆ ಸಲ್ಲಿಕೆ ಮಾಡಿದ್ದಾರೆ. ಆದರೆ ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುವ ಸೈತಾನ್ ಸಿಟಿ ರವಿ ಅವರೇ, ನಿಮ್ಮ ಆದಾಯದ ಮೂಲವೇನು? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರನ್ನು ಸಿದ್ದರಾಮುಲ್ಲಾ ಎಂದು ಬಿಜೆಪಿ ನಾಯಕರು ಕರೆಯತ್ತಿದ್ದಾರೆ. ಇದಕ್ಕೆ ನಾವು ಬೇಸರ ಮಾಡಿಕೊಳ್ಳಲ್ಲ, ಏಕೆಂದರೆ ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನ ಇಷ್ಟಪಡುವ ವ್ಯಕ್ತಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು, ಮಾಧ್ಯಮ ಸಂಯೋಜಕ ಜಿ.ಸಿ ರಾಜು, ಕಾನೂನು ವಿಭಾಗದ ಉಪಾಧ್ಯಕ್ಷ ದಿವಾಕರ್ ಮತ್ತಿತರರಿದ್ದರು.