ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?

ಕೃಷ್ಣ ಮಣಿ by ಕೃಷ್ಣ ಮಣಿ
May 15, 2023
in ಅಂಕಣ
0
ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಅಧಿಕಾರ ನಡೆಸಲು ಸಿದ್ಧತೆ ಆರಂಭ ಮಾಡಿರುವ ಸಿಎಂ ಸ್ಥಾನಕ್ಕೆ ಯಾರು ಬೇಕು ಅನ್ನೋ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಲ್ಲಾ ಶಾಸಕರನ್ನು ಶಾಂಗ್ರಿಲಾ ಹೋಟೆಲ್‌ನಲ್ಲಿ ಸೇರಿಸಿದ್ದ ನಾಯಕರು ರಾಜ್ಯದಲ್ಲೇ ಒಮ್ಮತದ ಆಯ್ಕೆ ಮಾಡುವಲ್ಲಿ ಗೊಂದಲಕ್ಕೆ ಈಡಾಗಿದ್ದಾರೆ. ಕೆಲವರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರೆ ಇನ್ನೂ ಕೆಲವರು ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಮಾತನ್ನಾದ್ದಾರೆ. ಯಾರಾದರೂ ಸಿಎಂ ಆಗಲಿ, ಒಳ್ಳೇ ಸರ್ಕಾರ ಬರಲಿ ಎನ್ನುವ ಮನಸ್ಸಿದ್ದವರು, ಸಿಎಂ ಯಾರಾಗಬೇಕು ಅನ್ನೋ ನಿರ್ಧಾರವನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು. ಗೊಂದಲಗಳು ಇಲ್ಲದೆ ಸಿಎಂ ಅಭ್ಯರ್ಥಿ ಆಯ್ಕೆಯಾದರೆ ಉತ್ತಮ ಅನ್ನೋ ಆಯ್ಕೆಯನ್ನು ಮಾಡಿದ್ದಾರೆ. ಇದೀಗ ಅನಿವಾರ್ಯವಾಗಿ ಮುಖ್ಯಮಂತ್ರಿ ಚೆಂಡು ಹೈಕಮಾಂಡ್ ಅಂಗಳಕ್ಕೆ ಬಿದ್ದಿದ್ದು, ಮುಖ್ಯಮಂತ್ರಿ ಯಾರು ಅನ್ನೋ ಕುತೂಹಲ ಸೃಷ್ಟಿಗೆ ಕಾರಣವಾಗಿದೆ.

ADVERTISEMENT

ಹೋಟೆಲ್ ಒಳಗೆ ಫ್ರೆಂಡ್‌ಶಿಪ್ ಹೊರಗಡೆ ದಂಗಲ್..

ಶಾಂಗ್ರಿಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ನಾಯಕರು ಹಾಗು ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಆಗಮಿಸಿದ್ದ ಅಬ್ಸರ್ವರ್‌ ತಂಡ ಪ್ರತಿ ಶಾಸಕರಿಂದಲೂ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿತ್ತು. ಎಲ್ಲರೂ ಒಟ್ಟಿಗೆ ಊಟ ಮಾಡುತ್ತಾ, ಗೆಲುವಿನ ಸಂಭ್ರಮದಲ್ಲಿದ್ದರು. ಸಿಎಂ ಆಯ್ಕೆಗೆ ಪಾರದರ್ಶಕ ಪ್ರಕ್ರಿಯೆ ಶುರುವಾಗಿದ್ದು, ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ನಡೆದಿದೆ. ಹೋಟೆಲ್ ಹೊರಗಡೆ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್ ಬೆಂಬಲಿಗರು ಜಮಾಯಿಸಿ ತಮ್ಮ ತಮ್ಮ ನಾಯಕರ ಪರವಾಗಿ ಘೋಷಣೆ ಕೂಗುತ್ತಾ ಕಾಂಗ್ರೆಸ್ ನಾಯಕರಿಗೆ ಮುಜುಗರನ್ನೂ ಸೃಷ್ಟಿಸಿದ್ದಾರೆ. ಜಮೀರ್ ಅಹ್ಮದ್ ಖಾನ್, ಭೈರತಿ ಸುರೇಶ್ ಸೇರಿದಂತೆ ಬಹುತೇಕ ಸಿದ್ದರಾಮಯ್ಯ ಬೆಂಬಲಿಗರು ಕಾರ್ಕಕರ್ತರನ್ನು ಸಮಾಧಾನ ಮಾಡಲು ಪ್ರಯತ್ನ ಪಟ್ಟರೂ ಸಾಧ್ಯವಾಗದೆ ಮುಜುಗರಕ್ಕೆ ಈಡಾದ ಘಟನೆ ನಡೆಯುತ್ತಿದೆ.

ಡಿಕೆ ಶಿವಕುಮಾರ್ ಹುಟ್ಟುಹಬ್ಬ ಆಚರಣೆ, ಬೆಂಬಲಿಗರ ಸಂಭ್ರಮ..

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಿನ್ನೆ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಡಿ ಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನಲೆಯಲ್ಲಿ, ಸದಾಶಿವನಗರದ ನಿವಾಸದ ಬಳಿ ಡಿ.ಕೆ ಶಿವಕುಮಾರ್ ಕಟೌಟ್‌ಗಳು ರಾರಾಜಿಸುತ್ತಿದೆ. ರಸ್ತೆಯುದ್ದಕ್ಕೂ ಹುಟ್ಟು ಹಬ್ಬದ ಶುಭಾಶಯ ಕೋರಿ ಬ್ಯಾನರ್ ಕಟೌಟ್ ಹಾಕಲಾಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಸೇರಿದಂತೆ ಸಾಕಷ್ಟು ಜನರು ಕಟೌಟ್ ಹಾಕಿ ಶುಭಾಶಯ ಕೋರಿದ್ದಾರೆ. ಭಿನ್ನ ವಿಭಿನ್ನ ಕೇಕ್‌ಗಳನ್ನು ತಂದು ಡಿ.ಕೆ ಶಿವಕುಮಾರ್ ಕೈಯಲ್ಲಿ ಕೇಕ್ ಕತ್ತರಿಸಿ ಜೈಕಾರ ಮೊಳಗಿಸಿದ್ದಾರೆ. ಅತ್ತ ಸಿದ್ದರಾಮಯ್ಯ ನಿವಾಸದಲ್ಲೂ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಬೆಂಬಲ ವ್ಯಕ್ತಪಡಿಸಲು ನೂರಾರು ಜನರು ಜಮಾಯಿಸಿದ್ದಾರೆ. ಸಿಎಂ ಆಗುತ್ತಾರೆ ಅನ್ನೋ ಆಶಯದಿಂದ ಹೂ ಗುಚ್ಛ ಹಿಡಿದು ಸಿದ್ದರಾಮಯ್ಯಗೆ ಶುಭ ಕೋರುತ್ತಿದ್ದಾರೆ.

ಯಾರಾಗ್ತಾರೆ ಮುಖ್ಯಮಂತ್ರಿ..? ಆಯ್ಕೆಗೆ ಇರುವ ಸಮಸ್ಯೆ ಆದರೂ ಏನು..?

ಸಿಎಂ ಯಾರಾಗಬೇಕು ಎನ್ನುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ, ಹೈಕಮಾಂಡ್ ನಾಯಕರ ಬಳಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಅಭಿಪ್ರಾಯ ತಿಳಿಸಿದ್ದೇನೆ ಎಂದಿದ್ದಾರೆ. ಇನ್ನು ಕೋಲಾರದಿಂದ ಆಯ್ಕೆಯಾಗಿರುವ ಕೊತ್ತೂರು ಮಂಜುನಾಥ್, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಇನ್ನು ಡಾ ಜಿ ಪರಮೇಶ್ವರ್ ಕೂಡ ಸಿಎಂ ಸ್ಥಾನ ಸಿಗಲಿ, ಹೈಕಮಾಂಡ್ ನಿರ್ಧಾರದಂತೆ ಆಯ್ಕೆಯಾಗಲಿದೆ ಎಂದಿದ್ದಾರೆ. ಅದೇ ರೀತಿ ಸಾಕಷ್ಟು ಜನರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಅನ್ನೋ ಆಶಯದಲ್ಲೇ ಇದ್ದಾರೆ. ಆದರೆ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್, ಸಾಕಷ್ಟು ನಾಯಕರಿಗೆ ಧನಸಹಾಯ ಮಾಡಿದ್ದು, ಡಿ.ಕೆ ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅನ್ನೋ ಆಯ್ಕೆ ಗೊಂದಲ್ಲಿ ಇದ್ದಾರೆ. ಇದೀಗ ಸಿದ್ದರಾಮಯ್ಯ ಆಯ್ಕೆಯಾಗಬೇಕು ಅನ್ನೋ ಮನಸ್ಸಿದ್ದವರು ಕೂಡ ಹೈಕಮಾಂಡ್ ನಿರ್ಧಾರದ ಮೊರೆ ಹೋಗಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಬಹುತೇಕ ಎರಡು ಬಣಗಳಾಗಿ ಬದಲಾಗಿದ್ದು, ಹೈಕಮಾಂಡ್ ಬಣ ಕೂಡ ಸೇರ್ಪಡೆ ಆಗಿದೆ. ಡಿ.ಕೆ ಶಿವಕುಮಾರ್ ಅಥವಾ ಸಿದ್ದರಾಮಯ್ಯ, ಇಬ್ಬರಲ್ಲಿ ಯಾರು ಸಿಎಂ ಆದರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭ ಆಗಲಿದೆ ಅನ್ನೋ ಬಗ್ಗೆ ಚರ್ಚೆ ನಡೆಸಿ ಇಂದು ಅಥವಾ ನಾಳೆ ಹೈಕಮಾಂಡ್ ಸಂದೇಶ ಹೊರಬೀಳಲಿದೆ ಅನ್ನೋ ಮಾಹಿತಿ ಸಿಕ್ಕಿದೆ.

ಕೃಷ್ಣಮಣಿ

Tags: BJPDK Shivakumarkurubanext CMOkkaligasiddaramaiahstate
Previous Post

ಕಾಂಗ್ರೆಸ್​ ಅಧಿಕಾರಕ್ಕೆ ಬರ್ತಿದ್ದಂತೆ ನನಗೆ ಬೆದರಿಕೆ ಕರೆ ಬಂದಿದೆ : ಕೆ.ಎಸ್​ ಈಶ್ವರಪ್ಪ

Next Post

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: AICC ಅಧ್ಯಕ್ಷರಿಗೆ ಕೋರ್ಟ್‌ ಸಮನ್ಸ್‌

Related Posts

Top Story

ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಹತ್ವದ ಸಭೆ

by ಪ್ರತಿಧ್ವನಿ
May 13, 2025
0

2024-25 ಹಾಗೂ 2025-2026 ನೇ ಸಾಲಿಗೆ ಸಂಬಂಧಿಸಿದಂತೆರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ, ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತಂತೆ ಕರ್ನಾಟಕ ಸರ್ಕಾರದ ನವ ದೆಹಲಿಯ ವಿಶೇಷ ಪ್ರತಿನಿಧಿ...

Read moreDetails

ಇಹಲೋಕ ತ್ಯಜಿಸಿದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ..

May 12, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

“ಪೀಟರ್” ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

May 11, 2025

ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 10, 2025
Next Post
ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: AICC ಅಧ್ಯಕ್ಷರಿಗೆ ಕೋರ್ಟ್‌ ಸಮನ್ಸ್‌

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: AICC ಅಧ್ಯಕ್ಷರಿಗೆ ಕೋರ್ಟ್‌ ಸಮನ್ಸ್‌

Please login to join discussion

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada