• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ, ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ: ಡಿ.ಕೆ.ಶಿವಕುಮಾರ್

Any Mind by Any Mind
November 9, 2021
in ಕರ್ನಾಟಕ, ರಾಜಕೀಯ
0
ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ, ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ: ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬಹಳ ದಿನಗಳಿಂದ ಬಿ. ದೇವೇಂದ್ರಪ್ಪ ಅವರ ಪಕ್ಷ ಸೇರ್ಪಡೆ ಮುಂದೂಡಿಕೆ ಆಗುತ್ತಲೇ ಬಂದಿತ್ತು. ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಬೇಷರತ್ ಆಗಿ ದೇವೇಂದ್ರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.

ADVERTISEMENT

ನಾನು, ರಾಜೇಶ್, ಜಯಸಿಂಹ, ಬಸವರಾಜ ಅವರು ಸೇರಿದಂತೆ ಎಲ್ಲ ಸ್ಥಳೀಯ ನಾಯಕರು ಸಮಾಲೋಚಿಸಿ, ಷರತ್ತು ಇಲ್ಲದೆ ಪಕ್ಷ ಸೇರುವವರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೆವು.

12 ವರ್ಷಗಳ ನಂತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಎಲ್ಲರಿಗೂ ಮುಕ್ತ ಸದಸ್ಯತ್ವ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಇದೇ 14 ರಂದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಳೆಯ ಸದಸ್ಯರು ಕೂಡ ಈಗ ತಮ್ಮ ಸದಸ್ಯತ್ವ ನವೀಕರಣ ಮಾಡಿಸಿಕೊಳ್ಳಬಹುದು. ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್ ಎಸ್ ಯುಐ, ರೈತ ಘಟಕ ಸೇರಿದಂತೆ ಎಲ್ಲ ಘಟಕಗಳಲ್ಲಿ ಮತ್ತೆ ಸದಸ್ಯತ್ವ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದೇವೆ.

ನ. 14 ರಂದು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅಭಿಯಾನ ಆರಂಭಿಸುತ್ತಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಚಾಲನೆ ನೀಡಲಿದ್ದಾರೆ. ರಾಜ್ಯದ ಎಲ್ಲ ನಾಯಕರು ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

ಪ್ರತಿಯೊಬ್ಬರು  5ರೂಪಾಯಿಗಳನ್ನ ನೀಡಿ ಸದಸ್ಯತ್ವ ಪಡೆಯಬೇಕು. ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಕ್ರಿಯ ಸದಸ್ಯರಾಗಲು 100 ಜನರನ್ನು ಸದಸ್ಯರನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಎಲ್ಲ ಘಟಕದ ನಾಯಕರು, ಪದಾಧಿಕಾರಿಗಳು, ಪಂಚಾಯಿತಿ ಮಟ್ಟದ ಹಾಲಿ ಹಾಗೂ ಮಾಜಿ ಸದಸ್ಯರು ಆಗಮಿಸಬೇಕು ಎಂದು ಹೇಲಿದ್ದಾರೆ.

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ, ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ ಎಂದು ಮನದಟ್ಟು ಮಾಡಬೇಕಾಗಿದೆ. ತ್ರಿವರ್ಣ ಧ್ವಜ ಹಾಕಿಕೊಳ್ಳುವ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಸಿದ್ಧಾಂತದ ಮೇಲೆ ನಂಬಿಕೆ ಇರುವವರು ಈ ಸದಸ್ಯತ್ವ ಪಡೆಯಬಹುದು.

ಜಾತ್ಯಾತೀತ ಜನತಾದಳ ತೊರೆದು ಕಾಂಗ್ರೆಸ್ ಸೇರುತ್ತಿರುವ  ಬಿ. ದೇವೇಂದ್ರಪ್ಪ ಹಾಗೂ ಇತರ ಮುಖಂಡರನ್ನು ನಮ್ಮ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ. ಅವರು ಸ್ವಯಿಚ್ಛೆಯಿಂದ ಕಾಂಗ್ರೆಸ್ ಸೇರಿ ಸೇವೆ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.’

ಆಪರೇಷನ್ ಕಮಲದಲ್ಲಿ ಬಿಜೆಪಿ ಸೇರಿರುವ ಶಾಸಕರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಲಿ. ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಬಿಟ್ ಕಾಯಿನ್ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಬಳಿ ಸಾಕ್ಷಿ ಇದ್ದರೆ ನೀಡಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್‌, ‘ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಅವ್ಯವಹಾರದಲ್ಲಿ ತೊಡಗಿದ್ದರೆ ಅವರನ್ನು ಕಾನೂನು ಪ್ರಕಾರ ಗಲ್ಲಿಗೆ ಹಾಕಲಿ. ನಮ್ಮಿಂದ ಯಾವುದೇ ಅಭ್ಯಂತರವಿಲ್ಲ. ಬಿಟ್ ಕಾಯಿನ್ ವಿಚಾರವಾಗಿ ಪೊಲೀಸ್ ದಾಖಲೆ ಮಾಡಿರುವ ಎಫ್ಐಆರ್, ಮಾಧ್ಯಮಗಳಲ್ಲಿ ಕೇಳಿ ಬಂದಿರುವ ಹೆಸರುಗಳು, ಪ್ರಧಾನಮಂತ್ರಿಗಳಿಗೆ ಹೋಗಿರುವ ದೂರುಗಳು, ಯಾರನ್ನು ವಿವಿಧ ಪ್ರಕರಣದಲ್ಲಿ ಬಂಧಿಸಿ ವಿಚಾರಣೆ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಬಹಿರಂಗ ಮಾಡಲಿ. ಕಾಂಗ್ರೆಸ್ ಪಕ್ಷದ ನಾಯಕರು ಇದರಲ್ಲಿ ಭಾಗಿಯಾಗಿದ್ದರೆ ಅವರನ್ನು ಕೂಡ ಬಂಧಿಸಿ ವಿಚಾರಣೆ ನಡೆಸಲಿ. ನಾವು ಯಾರ ಬೆಂಬಲಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಹಿಂದೆ ಸಂದೀಪ್ ಪಾಟೀಲ್ ಅವರು ಮಾಧ್ಯಮಗೋಷ್ಠಿ ನಡೆಸಿದ್ದು, ಇಡಿಗೆ ಪ್ರಕರಣ ವಹಿಸಿರುವ ಬಗ್ಗೆ ಸಿಎಂ ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಾಹಿತಿಯನ್ನು ನೀಡಲಿ. ನಾವು ಕೂಡ ಈ ವಿಚಾರವಾಗಿ ಆಂತರಿಕ ತನಿಖೆ ನಡೆಸಿ ಮಾಹಿತಿ ಕಲೆಹಾಕಿದ್ದು, ನಾವು ಕೂಡ ಸೂಕ್ತ ಸಮಯದಲ್ಲಿ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ.

ನಾವು ತನಿಖೆ ಮಾಡಿಸುವುದು ಬೇರೆ ವಿಚಾರ. ಬಿಜೆಪಿ ಅಧಿಕಾರದಲ್ಲಿದೆ. ಅವರ ಕೈಯಲ್ಲಿ ಸರ್ಕಾರ ಇದೆ. ಗೃಹ ಮಂತ್ರಿಗಳು ಇದ್ದಾರೆ. ರಾಜ್ಯದ ಜನರಿಂದ ಅವರು ಮುಚ್ಚಿಟ್ಟಿರುವ ಸತ್ಯಾಂಶ ಹೊರಗಿಡಲಿ’ ಎಂದು ಆಗ್ರಹಿಸಿದ್ದಾರೆ.

ವಿದ್ವತ್ ಹಲ್ಲೆ ಪ್ರಕರಣದಲ್ಲಿ ಶ್ರೀಕಿ ಜತೆ ನಲಪಾಡ್ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾಕೆ ವಿಚಾರಣೆ ಮಾಡಲಿಲ್ಲ ಎಂಬ ಬಿಜೆಪಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರವಾಗಿ ನಾನು ಗೃಹಮಂತ್ರಿಗಳಿಂದ ಹೇಳಿಕೆ ಬಯಸುತ್ತೇನೆ. ಮಾಧ್ಯಮಗಳ ಮೂಲಕ ನಾನು ಯಾರ ಹೆಸರನ್ನೂ ಕೇಳಲು ಬಯಸುವುದಿಲ್ಲ. ಸಿಎಂ ಹಾಗೂ ಗೃಹ ಸಚಿವರಿಗೆ ಮಾಹಿತಿ ಇದ್ದರೆ ಅವರು ಹೇಳಲಿ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೇಳಿದ್ದಾರೆ.

ಜಾಮೀನು ಪಡೆದಿದ್ದ ಶ್ರೀಕಿ ಅವರನ್ನು ಮತ್ತೆ ಬಂಧಿಸಿರುವುದರ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ, ‘ಈ ಪ್ರಕರಣದಲ್ಲಿ ಎಷ್ಟು ಎಫ್ಐಆರ್ ಬಂದಿದೆ. ಯಾರ ಮೇಲೆ ಪ್ರಕರಣ ದಾಖಲಾಗಿದೆ, ಹೈಕೋರ್ಟ್ ನಲ್ಲಿದ್ದ ಪ್ರಕರಣ ಹಿಂಪಡೆದಿದ್ದು ಯಾಕೆ ಎಂಬ ವಿಚಾರಗಳನ್ನು ಬಹಿರಂಗ ಪಡಿಸಲಿ. ಸಮಯ ಬಂದಾಗ ಪಕ್ಷ ಚರ್ಚೆ ಮಾಡಿ ತನ್ನ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರ ಈ ಪ್ರಕರಣದಲ್ಲಿ ಪಂಚನಾಮದಿಂದ ಹಿಡಿದು ಇಡಿಗೆ ಪ್ರಕರಣ ವಹಿಸಿರುವವರೆಗೂ ಸಂಪೂರ್ಣ ಮಾಹಿತಿ ನೀಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸುದ್ದಿಘೋಷ್ಠಿಯಲ್ಲಿ ಹೇಳಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಧಾನ ಪರಿಷತ್ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

Next Post

ಹ್ಯಾಕರ್ ಶ್ರೀಕಿ ಬಂಧನ : ಹೊಲ ಮೇಯ್ದ ಬೇಲಿಯ ರಕ್ಷಣೆಯ ತಂತ್ರವೇ?

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಹ್ಯಾಕರ್ ಶ್ರೀಕಿ ಬಂಧನ : ಹೊಲ ಮೇಯ್ದ ಬೇಲಿಯ ರಕ್ಷಣೆಯ ತಂತ್ರವೇ?

ಹ್ಯಾಕರ್ ಶ್ರೀಕಿ ಬಂಧನ : ಹೊಲ ಮೇಯ್ದ ಬೇಲಿಯ ರಕ್ಷಣೆಯ ತಂತ್ರವೇ?

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada