ಮೈಸೂರು : ಪ್ರಧಾನಿ ದೇಶದ ಸಮಸ್ಯೆಗಳನ್ನು ಬದಿಗೊತ್ತಿ ಚುನಾವಣಾ ಪ್ರಚಾರಕ್ಕೆ ಆದ್ಯತೆ ನೀಡಿದ್ದು ಸರಿಯಲ್ಲ ಅಂತಾ ಎಂಎಲ್ಸಿ ಹೆಚ್, ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಪತ್ರಕರ್ತ ಭವನದಲ್ಲಿ ಮಾತನಾಡಿದ ಅವರು, ಚುನಾವಣೆಗೋಸ್ಕರ ಯಾವೊಬ್ಬ ಪ್ರಧಾನಿಯೂ ಇಷ್ಟೊಂದು ಸಮಯ ಮೀಸಲಿಟ್ಟಿರಲಿಲ್ಲ ಎಂದು ಹೇಳಿದ್ದಾರೆ.

ಮೋದಿಯವರು ರೆಕಾರ್ಡ್ ಬ್ರೇಕ್ ಮಾಡಿದ್ಧಾರೆ.ಮೋದಿ ರೋಡ್ ಶೋ ಫ್ಯಾಶನ್ ಶೋ ರೀತಿ ಆಯಿತು.ಮೋದಿ ಅಬ್ಬರಿಸಿ ಬೊಬ್ಬಿರಿದರೂ ಏನು ಪ್ರಯೋಜನ ಆಗುವುದಿಲ್ಲ.ರಾಜ್ಯದ ಬಿಜೆಪಿ ನಾಯಕರು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ.ಹೀಗಾಗಿ ಮತ ಕೇಳಲು ಜನರ ಮುಂದೆ ಬರಲಿಲ್ಲ.ಹೀಗಾಗಿ ಮೋದಿ ಅವರು ಪಕ್ಷದ ಪರವಾಗಿ ಪ್ರಚಾರ ನಡೆಸಿದರು.ಮೋದಿ ಪ್ರಚಾರಕ್ಕೆ ಭಾರೀ ಹಣ ವ್ಯಯವಾಗಿದೆ.ಮೋದಿಯವರ ಬಗ್ಗೆ ಜನರಿಗಿದ್ಧ ಅಭಿಮಾನ ದೂರವಾಗಿದೆ.ಮೋದಿ ರೋಡ್ ಶೋ ಗೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಸೇರಲಿಲ್ಲ.ಮೋದಿ ಆಗಮನದಿಂದ ಜನರಲ್ಲಿ ಸಿನಿಕ ಭಾವನೆ ಉಂಟಾಗಿದೆ.ಮೋದಿ ಆಗಮನದಿಂದ ಬಿಜೆಪಿ ಮತ ಗಳಿಕೆ ಕಡಿಮೆಯಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಈ ಬಾರಿ ಬಹುಮತ ಪಡೆಯಲಿದೆ. ಸಿದ್ಧರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಸೋಲಿಸಬೇಕೆಂಬ ಬಿಜೆಪಿ ತಂತ್ರ ಫಲಿಸುವುದಿಲ್ಲ.ಇಬ್ಬರೂ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸುತ್ತಾರೆ.ಬಿಜೆಪಿಗೆ ವೋಟು ಹಾಕದಿದ್ದರೇ ಕೇಂದ್ರದ ಯೋಜನೆಗಳು ಸ್ಥಗಿತವಾಗಲಿವೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಬೆದರಿಕೆಯಂತಿದೆ.ಕಾಂಗ್ರೆಸ್ ಗೆ ವೋಟು ಹಾಕಿದರೆ ದಂಗೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ ಎಂದು ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಒಬ್ಬ ಸುಳ್ಳುಗಾರ. ಕಾಂಗ್ರೆಸ್ ಮಾಡಿದ್ಧ ಸಾಲವನ್ನು ನಾವು ತೀರಿಸುತ್ತಿದ್ದೇವೆಂದು ಬಸವರಾಜ ಬೊಮ್ಮಾಯಿ ಸುಳ್ಳು ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರವಿದ್ದಾಗ ಎಷ್ಟು ಸಾಲವಿತ್ತು, ಈಗ ಎಷ್ಟು ಹೆಚ್ಚಾಗಿದೆ ಎಂದು ತಿಳಿಸಿ, ಬರೀ ಸುಳ್ಳು ಹೇಳಬೇಡಿ.ಬಿಜೆಪಿಯವರು ಕರ್ನಾಟಕವನ್ನು ಉತ್ತರದವರಿಗೆ ಮಾರಲು ಸಿದ್ಧವಾಗಿದ್ಧಾರೆ ಎಂದು ಕಿಡಿಕಾರಿದ್ದಾರೆ.






