• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್​​ ಅಸಮಾಧಾನ, ಹೈಕಮಾಂಡ್​ಗೆ ಸಿದ್ದು ಪತ್ರ ಗೊಂದಲ.. ಸಿದ್ದು ಗುಟುರು..

ಕೃಷ್ಣ ಮಣಿ by ಕೃಷ್ಣ ಮಣಿ
May 9, 2023
in ಅಂಕಣ
0
ಕಾಂಗ್ರೆಸ್​​ ಅಸಮಾಧಾನ, ಹೈಕಮಾಂಡ್​ಗೆ ಸಿದ್ದು ಪತ್ರ ಗೊಂದಲ.. ಸಿದ್ದು ಗುಟುರು..
Share on WhatsAppShare on FacebookShare on Telegram

ರಾಜ್ಯ ಚುನಾವಣೆ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮತದಾನಕ್ಕೆ ಇನ್ನು ಕೇವಲ ಕೆಲವೇ ಗಂಟೆಗಳು ಮಾತ್ರ ಉಳಿದುಕೊಂಡಿವೆ. ಈ ಸಮಯದಲ್ಲಿದ್ದ ಕಾಂಗ್ರಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎನ್ನುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ನಾನು ಕಳೆದ ಮೂರೂವರೆ ವರ್ಷಗಳಿಂದ ಬಿಜೆಪಿ ಪಕ್ಷದ ವಿರುದ್ಧ ಸಮರ್ಥವಾಗಿ ಕೆಲಸ ಮಾಡಿದ್ದೇನೆ. ಚುನಾವಣಾ ವರ್ಷದಲ್ಲಿ ಬಿಜೆಪಿ ವಿರುದ್ಧ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದೇನೆ. ಆದರೆ ವಯಸ್ಸಿನಲ್ಲಿ ನನಗಿಂತಲೂ ಕಿರಿಯ ಹಾಗು ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್​ , ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನ ಎಂದು ಪತ್ರದಲ್ಲಿದೆ. ಇನ್ನು ಏಕಮುಕ ನಿರ್ಧಾರ ತೆಗೆದುಕೊಳ್ತಾರೆ ಎಂದು ಪತ್ರದಲ್ಲಿ ಉಲ್ಲೇಖ ಆಗಿದೆ.

ADVERTISEMENT

ಡಿ.ಕೆ ಶಿವಕುಮಾರ್​ ವಿರುದ್ಧ ಅಸಮಾಧಾನ ಯಾಕೆ..?

ಕಾಂಗ್ರೆಸ್​ ಟಿಕೆಟ್​ ಹಂಚಿಕೆ ವೇಳೆ ಇಬ್ಬರು ನಾಯಕರು ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್​ ಕೊಡಿಸುವ ಉದ್ದೇಶದಿಂದ ಭಾರೀ ಪೈಪೋಟಿ ನಡೆಸಿದ್ದು, ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ. ಇದೀಗ ಸಿದ್ದರಾಮಯ್ಯ ಬೆಂಬಲಿಗರಿಗೆ ಟಿಕೆಟ್​​ ಕೊಡದಂತೆ ಡಿ.ಕೆ ಶಿವಕುಮಾರ್​ ಮಾಡಿದ್ರು ಎಂದು ಪ್ರದಲ್ಲಿ ದೂರಲಾಗಿದೆ. ಚಿತ್ರದುರ್ಗದಲ್ಲಿ ನನ್ನ ಬೆಂಬಲಿಗ ಎನ್ನುವ ಕಾರಣಕ್ಕೆ ರಘು ಆಚಾರ್​​ಗೆ ಟಿಕೆಟ್​ ತಪ್ಪಿಸಲಾಯ್ತು, ತರೀಕೆರೆಯಲ್ಲಿ ಗೋಪಿಕೃಷ್ಣಗೂ ಟಿಕೆಟ್​ ತಪ್ಪಿಸಿದ್ರು. ಚಾಮರಾಜಪೇಟೆಯಲ್ಲೂ ಪುಟ್ಟರಂಗಶೆಟ್ಟಿಗೆ ಟಿಕೆಟ್​ ತಪ್ಪಿಸಲು ಯತ್ನಿಸಿದ್ರು. ಆದರೆ ನನ್ನ ಕಾರಣದಿಂದ ಟಿಕೆಟ್​ ಸಿಕ್ಕಿತು. ವರುಣಾದಲ್ಲಿ ಸೋಮಣ್ಣಗೆ ಕೋಟಿ ಕೋಟಿ ರೂಪಾಯಿ ಹಣ ಸಹಾಯ ಮಾಡಿದ್ದಾರೆ. ಶಿವಕುಮಾರ್​ ವರುಣಾದಲ್ಲಿ ಯಾರ ಮನೆಯಲ್ಲಿ ಎಷ್ಟು ಕೋಟಿ ಇಟ್ಟಿದ್ದಾರೆ ಅನ್ನೋ ಮಾಹಿತಿ ನನ್ನ ಬಳಿ ಇದೆ. ಈ ಮೂಲಕ ನಾನು ವರುಣಾದಿಂದ ಹೊರಗೆ ಹೆಚ್ಚು ಪ್ರಚಾರ ಮಾಡದಂತೆ ತಡೆದಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಅಸಮಾಧಾನ ಅನ್ನೋದು ಸುಳ್ಳು, ನಕಲಿ ಎಂದ ಸಿದ್ದರಾಮಯ್ಯ..!

ಡಿ.ಕೆ ಶಿವಕುಮಾರ್ ವಿರುದ್ಧ ಅಸಮಧಾನಗೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದೂರು ಕೊಟ್ಟಿದ್ದಾರೆ ಎನ್ನುವ ಪತ್ರದ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸೋಲಿನ ಭೀತಿಯಿಂದ ಹತಾಶೆಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ. ನನ್ನ ಹೆಸರಿನ ನಕಲಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನು ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು ಎಂದಿದ್ದಾರೆ. ಇನ್ನು ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂದ ಸೌಹಾರ್ಧಯುತವಾಗಿದೆ. ನಮ್ಮ ಸಂಬಂಧಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣುವುದಿಲ್ಲ. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡುತ್ತೇನೆ. ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ವಿರುದ್ಧ ಗುಟುರು.. ಮಾಹಿತಿ ಮಾತ್ರ ಅಸಲಿ..!

ರಾಜ್ಯದಲ್ಲಿ ಜೆಡಿಎಸ್​ ಜೊತೆಗೆ ಕಾಂಗ್ರೆಸ್​ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲು ಡಿ ಕೆ ಶಿವಕುಮಾರ್​ ಯೋಜನೆ ರೂಪಿಸಿದ್ದಾರೆ ಅನ್ನೋ ವಿಚಾರವೂ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿದೆ. ಪತ್ರದಲ್ಲಿ ಕಾಂಗ್ರೆಸ್​ನಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆಯೇ ಉಲ್ಲೇಖ ಮಾಡಲಾಗಿದೆ. ಈ ಮಾಹಿತಿ ಸುಳ್ಳು ಎನ್ನುವುದಕ್ಕೆ ಸಾಧ್ಯವಿಲ್ಲ. ಆದರೆ ಕಾಂಗ್ರೆಸ್​ ಸೋಲುವ ಭೀತಿಯಲ್ಲಿ ಮೊದಲೇ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರಾ..? ಅಥವಾ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿರುವ ಹಾಗೆ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ನಡುವೆ ಹಗ್ಗಾಜಗ್ಗಾಟ ನಡೆದಿದೆ. ಇಬ್ಬರ ನಡುವಿನ ಸಂಬಂಧ ಸರಿಯಿಲ್ಲ ಎನ್ನುವುದನ್ನು ಬಹಿರಂಗ ಮಾಡಿ ಬಿಜೆಪಿ ಲಾಭ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ಯಾ..? ಅನ್ನೋದು ಸ್ಪಷ್ಟವಾಗಿಲ್ಲ. ಆದರೆ ಸಿದ್ದರಾಮಯ್ಯ ಇಲ್ಲೀವರೆಗೂ ಯಾವುದೇ ದೂರು ದೂರು ನೀಡಿಲ್ಲ. ದೂರು ನೀಡದಿದ್ದರೆ ಕಾಂಗ್ರೆಸ್​ ಮೇಲೆಯೇ ಅನುಮಾನ ಬರುವುದು ಸಹಜ.

ಕೃಷ್ಣಮಣಿ

Tags: BangaloreBJPCongress PartyDK ShivakumarMallikarjuna Khargesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಿಗ್ಗಾಂವಿ ಕ್ಷೇತ್ರದ ಹಳ್ಲಿಗಳಲ್ಲಿ ಮನೆ ಮನೆಗೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ..!

Next Post

ಮತದಾನ ಮಾಡಿ ಬಂದು ಪುನೀತ್​ರನ್ನು ನೆನೆದ ರಾಘವೇಂದ್ರ ರಾಜ್​ಕುಮಾರ್​

Related Posts

Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
0

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....

Read moreDetails

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

June 9, 2025
Next Post
ಮತದಾನ ಮಾಡಿ ಬಂದು ಪುನೀತ್​ರನ್ನು ನೆನೆದ ರಾಘವೇಂದ್ರ ರಾಜ್​ಕುಮಾರ್​

ಮತದಾನ ಮಾಡಿ ಬಂದು ಪುನೀತ್​ರನ್ನು ನೆನೆದ ರಾಘವೇಂದ್ರ ರಾಜ್​ಕುಮಾರ್​

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada