ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
![](https://pratidhvani.com/wp-content/uploads/2024/05/rahul-gandhi-pti1-1681645429-1024x576.jpg)
ಬಿಹಾರದ ಭೋಜ್ಪುರದಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯನ್ನು (Lok Sabha Election Rally) ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ.
![](https://pratidhvani.com/wp-content/uploads/2024/05/narendra-modi-16-1024x576.webp)
ಜಗತ್ತಿನಲ್ಲಿ ಕೇವಲ 2 ಜಾತಿಗಳಿವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮನ್ನು ಒಬಿಸಿ ಎಂದು ಏಕೆ ಗುರುತಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
![](https://pratidhvani.com/wp-content/uploads/2024/05/rahul-gandhi-6-1024x576.webp)
ಮೋದಿ ಅವರ ಪ್ರಕಾರ ದೇಶದಲ್ಲಿ ಶ್ರೀಮಂತರು ಹಾಗೂ ಬಡವರು ಎಂಬ ಎರಡು ಜಾತಿಗಳಿವೆ. ಈ ಎರಡೇ ಜಾತಿಗಳಿದ್ದರೆ ನರೇಂದ್ರ ಮೋದಿ ಹೇಗೆ ಒಬಿಸಿ ಆದರು? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
![](https://pratidhvani.com/wp-content/uploads/2024/05/narendra-modi-1-2-1-1024x576.webp)
ಭಾರತ ದೇಶದಲ್ಲಿ ಶೇ.50ರಷ್ಟು ಜನಸಂಖ್ಯೆ ಹಿಂದುಳಿದವರು, ಶೇ.15ರಷ್ಟು ದಲಿತರು, ಶೇ.8ರಷ್ಟು ಆದಿವಾಸಿಗಳು ಇದ್ದಾರೆ ಎಂಬುವುದು ದೇಶಕ್ಕೆ ತಿಳಿಯಬೇಕು. ನಾವೂ ಕೂಡ ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಹೇಳಿದ್ದೆವು ಎಂದು ಹೇಳಿದ್ದಾರೆ.