• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ʼಬಿಜೆಪಿಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ, ಇನ್ನೊಬ್ಬ ಭ್ರಷ್ಟ ಬರುತ್ತಾನೆʼ – ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 24, 2021
in ರಾಜಕೀಯ
0
ʼಬಿಜೆಪಿಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ, ಇನ್ನೊಬ್ಬ ಭ್ರಷ್ಟ ಬರುತ್ತಾನೆʼ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಿಜೆಪಿಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ, ಆ ಸ್ಥಾನಕ್ಕೆ ಇನ್ನೊಬ್ಬ ಭ್ರಷ್ಟ ಬರುತ್ತಾನೆ. ಇಡೀ ಬಿಜೆಪಿ ಪಕ್ಷ ಭ್ರಷ್ಟರಿಂದ ತುಂಬಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಾಜಿ, ಹಾಲಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಬಿಜೆಪಿ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ, ಈಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರಂತೆ, ಒಬ್ಬ ಭ್ರಷ್ಟ ಮುಖ್ಯಮಂತ್ರಿ ಹೋದರೆ ಬರುವ ಇನ್ನೊಬ್ಬ ಮುಖ್ಯಮಂತ್ರಿಯೂ ಭ್ರಷ್ಟನೇ ಆಗಿರುತ್ತಾನೆ, ಕಾರಣ ಬಿಜೆಪಿ ಪಕ್ಷವೇ ಭ್ರಷ್ಟರಿಂದ ತುಂಬಿದೆʼ ಎಂದಿದ್ದಾರೆ.

ʼಕೊರೊನಾ ನಿರ್ವಹಣೆಯ ಉಪಕರಣ ಖರೀದಿ, ಆಸ್ಪತ್ರೆ, ವೆಂಟಿಲೇಟರ್, ಹಾಸಿಗೆ ಖರೀದಿಯಲ್ಲೂ ಭ್ರಷ್ಟಾಚಾರ ನಡೆಸಿದವರು ಬಿಜೆಪಿಯವರು. ಈಗ ಚಿಕ್ಕ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ವಿಚಾರ ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ ನಿಂದ ಬಹಿರಂಗಗೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆದರೂ ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಬಿಜೆಪಿ ಯವರು ಆರ್.ಟಿ.ಜಿ.ಎಸ್, ಚೆಕ್, ಕ್ಯಾಶ್ ಹೀಗೆ ಹಲವು ರೀತಿ ಲಂಚ ಪಡೆದು ಈಗಾಗಲೇ ಸಿಕ್ಕಿಬಿದ್ದಿದ್ದಾರೆ, ಆದರೆ ಚಿಕ್ಕ ಮಕ್ಕಳು ತಿನ್ನುವ ಮೊಟ್ಟೆಯಲ್ಲೂ ಲಂಚ ಪಡೆಯುವಷ್ಟು ಕೆಳ ಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ನಾನು ಶಾಸಕನಾಗಿ, ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ನಲವತ್ತು ವರ್ಷ ರಾಜಕಾರಣ ಮಾಡಿದ್ದೇನೆ, ಆದರೆ ಇಂತಹಾ ಹೊಲಸು ಭ್ರಷ್ಟ ಸರ್ಕಾರವನ್ನು ಈ ವರೆಗೆ ಕಂಡಿಲ್ಲ. ಕಳೆದ ಬಾರಿಯ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ, ಈಗ ಮತ್ತೆ ರಾಜ್ಯದಲ್ಲಿ ಪ್ರವಾಹ ಬಂದಿದೆ ಈ ಸರ್ಕಾರ ಅವರಿಗೆ ಪರಿಹಾರ ಕೊಡುತ್ತಾದಯಾ? ವಿವಿಧ ವಸತಿ ಯೋಜನೆಗಳಲ್ಲಿ ನಿರ್ಮಿಸಲಾದ ಮನೆಗಳಿನ್ನು ಅಪೂರ್ಣ ಆಗಿ ನಿಂತಿದೆ, ಅವುಗಳಿಗೆ ಹಣ ಬಿಡುಗಡೆ ಮಾಡದೆ ಹೊಸದಾಗಿ ಎರಡು ಲಕ್ಷ ಮನೆ ನಿರ್ಮಾಣ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ಹೊಸ ಮನೆಗಳ ನಿರ್ಮಾಣ ಮಾಡಲು ಈ ಸರ್ಕಾರದ ಬಳಿ ಹಣವಾದರೂ ಇದೆಯೇ?ʼ ಎಂದು ಪ್ರಶ್ನಿಸಿದ್ದಾರೆ.

ʼತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಯಾವಾಗ ಮಾಡಬೇಕು ಎಂದು ನಿರ್ಧರಿಸುವುದು ಚುನಾವಣಾ ಆಯೋಗವೇ ಹೊರತು ರಾಜ್ಯ ಸರ್ಕಾರವಲ್ಲ. ಮೀಸಲಾತಿ ಪಟ್ಟಿ ಸಿದ್ಧಪಡಿಸಿದ ನಂತರ ದಿನಾಂಕ ಘೋಷಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಡಿಸೆಂಬರ್ ವರೆಗೂ ಚುನಾವಣೆ ನಡೆಸಲ್ಲ ಎನ್ನುತ್ತದೆ, ಚುನಾವಣೆ ದಿನ ನಿಗದಿ ಮಾಡುವ ಅಧಿಕಾರ ಇವರಿಗೆ ಎಲ್ಲಿದೆ? ಇದೇ ಕಾರಣಕ್ಕೆ ರಾಜ್ಯ ಚುನಾವಣಾ ಆಯೋಗ ಸರ್ಕಾರದ ಮಾತನ್ನು ಪರಿಗಣಿಸುವುದಿಲ್ಲ ಎಂದು ಹೇಳಿಗೆ. ಹಾಗಾಗಿ ಡಿಸೆಂಬರ್ ಒಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ಯಾವ ಕ್ಷಣದಲ್ಲಿ ಬೇಕಾದರೂ ನಡೆಯಬಹುದು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರಗಳು ಹಾಗೂ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮಗಳು, ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹ ಹೀಗೆ ಮುಂತಾದ ಪ್ರಜಾಸತ್ತಾತ್ಮಕ ಉದ್ದೇಶಗಳೊಂದಿಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಇಂದು ಸಭೆ ನಡೆಸಲಾಯಿತು. ನಮ್ಮ ಕಾರ್ಯಕರ್ತರು, ಮುಖಂಡರ ನಡುವೆ ಸಮನ್ವಯ ಸಾಧಿಸುವುದು, ಪಕ್ಷ ನಿಶ್ಚಲವಾಗಿರುವ ಕಡೆಗಳಲ್ಲಿ ಪಕ್ಷ ಕಟ್ಟಲು ಏನೆಲ್ಲಾ ಮಾಡಬೇಕು ಎಂಬ ವಿಚಾರಗಳನ್ನೆಲ್ಲಾ ಇಂದು ನಡೆದ ಪಕ್ಷದ ವಲಯಾವಾರು ಸಭೆಯಲ್ಲಿ ಚರ್ಚಿಸಿದ್ದೆವುʼ ಎಂದಿದ್ದಾರೆ.

ʼರಾಜ್ಯವನ್ನು ಉಳಿಸುವ ಕಾರಣಕ್ಕಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಒಂದಾಗಿ ಶ್ರಮಿಸುತ್ತಿದೆʼ ಎಂದು ಅವರು ಹೇಳಿದ್ದಾರೆ.

Tags: bjp karnatakaBS YADIYURAPPAsiddaramaiah
Previous Post

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಹುದ್ದೆ; ಶ್ರೀರಾಮುಲು, ರಮೇಶ್ ಜಾರಕಿಹೊಳಿ ನಡುವೆ ತೀವ್ರ ಪೈಪೋಟಿ

Next Post

ಗೋವಾ ವಿಧಾನಸಭಾ ಚುನಾವಣೆ; ಬಿಜೆಪಿ ನಾಯಕರ ಜತೆ ನಡ್ಡಾ ಸರಣಿ ಸಭೆ; ಚುನಾವಣೆ ಗೆಲ್ಲಲು ರಣತಂತ್ರ!

Related Posts

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
0

ಬೆಳಗಾವಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ರೇಕ್‌ಫಾಸ್ಟ್‌-ಡಿನ್ನರ್​​ ಪಾಲಿಟಿಕ್ಸ್​​ ಚಳಿಗಾಲದ ಅಧಿವೇಶನದ(Winter Session 2025) ಆರಂಭವಾಗುತ್ತಿದ್ದಂತೆ ಬೆಳಗಾವಿಗೆ ಶಿಫ್ಟ್‌ ಆಗಿತ್ತು. ಇನ್ನೇನು ಅಧಿವೇಶನ ಮುಗಿಯಲು ಒಂದು ದಿನ ಬಾಕಿ ಇರುವಾಗ...

Read moreDetails
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
ಗೋವಾ ವಿಧಾನಸಭಾ ಚುನಾವಣೆ; ಬಿಜೆಪಿ ನಾಯಕರ ಜತೆ ನಡ್ಡಾ ಸರಣಿ ಸಭೆ; ಚುನಾವಣೆ ಗೆಲ್ಲಲು ರಣತಂತ್ರ!

ಗೋವಾ ವಿಧಾನಸಭಾ ಚುನಾವಣೆ; ಬಿಜೆಪಿ ನಾಯಕರ ಜತೆ ನಡ್ಡಾ ಸರಣಿ ಸಭೆ; ಚುನಾವಣೆ ಗೆಲ್ಲಲು ರಣತಂತ್ರ!

Please login to join discussion

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada