ಉಪ ಚುನಾವಣೆಯ (Bypoll result) ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಮತ್ತೆ ಇದೀಗ ಕಾಂಗ್ರೆಸ್ (Congress) ಪಾಳಯದಲ್ಲಿ ಗ್ಯಾರೆಂಟಿ ಅಪಸ್ವರ ಜೋರದಂತಿದೆ. ಐದು ಗ್ಯಾರೆಂಟಿಗಳ ಪೈಕಿ ಎರಡು ಗ್ಯಾರೆಂಟಿ ಗಳನ್ನು ಕೈಬಿಡಬೇಕು. ಆಗ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಬಹುದು ಎಂಬ ಅರ್ಥದಲ್ಲಿ ಕಾಂಗ್ರೆಸ್ ಶಾಸಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಾದ 5 ಗ್ಯಾರಂಟಿಗಳಲ್ಲಿ (5 guareenty schemes) ಸದ್ಯಎರಡನ್ನು ಕೈ ಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ (MLA gaviyappa) ಹೇಳಿದ್ದಾರೆ.
ಈ ಬಗ್ಗೆ ಹೊಸಪೇಟೆಯಲ್ಲಿ ಮಾತನಾಡಿದ ಶಾಸಕ ಗವಿಯಪ್ಪ,ಗ್ಯಾರಂಟಿಗಳಿಂದ ಆಶ್ರಯ ಮನೆಗಳು ನೀಡಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳನ್ನು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಆದ್ರೆ ಸಿಎಂ ಏನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದಿದ್ದಾರೆ.