ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆಯೆ ಹೊರತು ನನ್ನಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ನನ್ನಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕರೆ ಮಾಡಿ ಮಾತನಾಡಿದ್ದಾರೆ ಬಹಿರಂಗ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಹಿನ್ನಡೆ ಉಂಟಾಗುವುದರಿಂದ ಮಾತನಾಡದಂತೆ ಹೇಳಿದ್ದಾರೆ ಕೆಪಿಸಿಸಿ ಅಧ್ಯಕ್ಷರಿಗೂ ಸಹ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಈ ವೇಳೆ ಶಾಸಕ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮೀರ್ 2007ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಸಂದರ್ಭದಲ್ಲಿ ನಾನು ಸಹ ಅಲ್ಲಿದೆ ಅವಾರು ಬಕೆಟ್ ಹಿಡಿದು ಮೇಲೆ ಬಂದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಆದಿಚುಂಚನಗಿರಿ ಸ್ವಾಮೀಜಿಯವರ ಆರ್ಶೀವಾದದಿಂದ ನಾನು ಬೆಳೆದಿದ್ದೇನೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ನನ್ನ ರಾಜಖಿಯ ಗುರುಗಳು ಒಕ್ಕಲಿಗ ಸಮುದಾಯದ ವಿಚಾರದಲ್ಲಿ ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಒಂದು ನಾನು ಮಾತನಾಡುವ ವೇಳೆ ಯಾವುದಾದರು ತಪ್ಪು ಪದ ಬಳಸಿದ್ದರೆ ಕ್ಷಮೆಯಾಚಿಸುತ್ತೇನೆ ತಪ್ಪು ಮಾಡದೆ ಇರುವಾಗ ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಶಾಸಕ ಜಮೀರ್ ಅಹ್ಮದ್ ಚಿತ್ರದುರ್ಗದಲ್ಲಿ ಪ್ರಶ್ನಿಸಿದ್ದಾರೆ.