ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಚರ್ಚೆ ನಡೆಯುತ್ತಿರುವ ಕುರಿತಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ, ಗರ್ಭಿಣಿಯೂ ಆಗಲ್ಲ, ಕೂಸನ್ನೂ ಹೆರುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಾರೆ ಅಂತಾರೆ. ನಾನು ಈ ಮಾತನ್ನ ಒಪ್ಪಲ್ಲ. ಗರ್ಭಿಣಿ ಆದರೆ ತಾನೇ ಕುಲಾಯಿ ಹೊಲೆಸುವುದು. ಕಾಂಗ್ರೆಸ್ಸಿನ ತಾಯಿ ಬಂಜೆ ಆಗಿದ್ದಾಳೆ, ಗರ್ಭಿಣಿಯೂ ಆಗಲ್ಲ, ಕೂಸನ್ನೂ ಹೆರುವುದಿಲ್ಲ ಅದರೆ , ಕುಲಾಯಿ ಹೊಲೆಸುವ ಪ್ರಸಂಗವೂ ಬರಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಳುಗುವ ಹಡಗು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ ಬಿಜೆಪಿಯೇ ಆಡಳಿತಕ್ಕೆ ಬರುತ್ತೆ. ಸಿದ್ದರಾಮೋತ್ಸವದಿಂದ ಬಿಜೆಪಿಗೆ ಹುಮ್ಮಸ್ಸು, ಆತ್ಮಸ್ಥೈರ್ಯ ಹೆಚ್ಚಿಸಿದೆ. ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮ ಕೊನೆಗಾಲೋತ್ಸವ ಆಗುತ್ತೆ ಎಂದು ಲೇವಡಿ ಮಾಡಿದ್ದಾರೆ.