ಈ ದೇಶ ಸುರಕ್ಷಿತವಾಗಿ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದರು.
ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರೊಡನೆ ಚಾಲನೆ ಮಾತನಾಡಿದರು.
ಬಡವರ ಮಹಿಳೆಯರ, ದೀನ ದಲಿತರ ಹಾಗೂ ಸಂವಿಧಾನದ ಉಳಿವಿಗಾಗಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಬೇಕು ಎಂದು ಖರ್ಗೆ ಹೇಳಿದರು.
ಕರ್ನಾಟಕ ಸರ್ಕಾರದ ಐದು ಖಾತ್ರಿ ಯೋಜನೆಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಈ ಗ್ಯಾರಂಟಿ ಯೋಜನೆಗಳು ಜಾರಿಗೆ ಬರುತ್ತಿವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮನಸಿದ್ದರೆ ಮಾರ್ಗ ದೊರೆಯುತ್ತದೆ. ಯಾರು ಬಡವರ ಬಗ್ಗೆ ಚಿಂತನೆ ಮಾಡುತ್ತಾರೋ ಅವರು ಯೋಜನೆಗಳನ್ನು ಜಾರಿಗೆ ತರಲು ದುಡ್ಡು ಹುಡುಕುತ್ತಾರೆ ಎಂದು ಯೋಜನೆಗಳ ಬಗ್ಗೆ ಖರ್ಗೆ ಶ್ಲಾಘಿಸಿದರು.
ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆ ಲೋಕಾರ್ಪಣೆಗೆ ಕ್ಷಣಗಣನೆ | ಖರ್ಗೆ ಆಗಮನ
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ನುಡಿದಂತೆ ನಡೆದ ಸರ್ಕಾರವಾಗಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ 2 ಕೋಟಿ ಉದ್ಯೋಗ, ವಿದೇಶದಿಂದ ಕಪ್ಪು ಹಣ ವಾಪಸ್ ತಂದು ಪ್ರತಿ ಕುಟುಂಬಕ್ಕೆ ಹದಿನೈದು ಲಕ್ಷ ಕೊಡುವುದಾಗಿ ಹೇಳಿದ್ದರು. ಅದು ಈಗ ಎಲ್ಲಿ ಹೋಯಿತು? ಎಂದು ಕುಹಕವಾಡಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, “ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ಮಾಡಬೇಕಿದೆ. ಬೀದರ್, ಕಲಬುರಗಿ, ಯಾದಗಿರಿ,ಕೊಪ್ಪಳ ಜಿಲ್ಲೆಗಳು ಸೇರಿದಂತೆ ಕಕ ಭಾಗದ ಎಲ್ಲಾ ಜಿಲ್ಲೆಗಳು ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ತಳಮಟ್ಟದಲ್ಲಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.