• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ತಂದು ಕೊಟ್ಟಿತೆ ವಿನಃ ಬಿಜೆಪಿಯಲ್ಲ : ಡಿಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ಕರ್ನಾಟಕ
0
ಗೌಪ್ಯತೆ ಕಾಪಾಡಿಕೊಳ್ಳುವುದು ಮುಖ್ಯ, ಇದು ರಾಜಕಾರಣದ ಒಂದು ಭಾಗ : ಡಿಕೆಶಿ ಮಾತಿನ ಮರ್ಮವೇನು?
Share on WhatsAppShare on FacebookShare on Telegram

ADVERTISEMENT

ನಾವು 75 ನೇ ಸ್ವಾತಂತ್ರ ದಿನ ಆಚರಿಸುತ್ತಿದ್ದು, ದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ತಂದು ಕೊಟ್ಟಿತೆ ವಿನಃ ಬಿಜೆಪಿಯಲ್ಲ. ಈ ದೇಶಕ್ಕೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭತ್ವ ವ್ಯವಸ್ಥೆ ತಂದುಕೊಟ್ಟಿದ್ದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸತ್ಯಾಗ್ರಹ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ದೇಶದಲ್ಲಿ ಇಡಿ, ಸಿಬಿಐ, ಆದಾಯ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು, ವಿರೋಧ ಪಕ್ಷಗಳ ನಾಯಕರ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಈ ಸಂವಿಧಾನಿಕ ಸಂಸ್ಥೆಗಳು ಇರುವುದೇ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು. ಬಿಜೆಪಿಯ ಯಾವುದೇ ನಾಯಕರ ಮೇಲೆ ಇಡಿ ದಾಳಿ ಮಾಡಿಲ್ಲ, ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸುತ್ತಿದ್ದು, ದೇಶದ ಎಲ್ಲ ಕಾಂಗ್ರೆಸಿಗರು ಅವರಿಗೆ ಧೈರ್ಯ ತುಂಬುವ ಅಂಗವಾಗಿ ಇಲ್ಲಿ ಸೇರಿದ್ದೇವೆ. ರಾಹುಲ್ ಗಾಂಧಿ ಅವರನ್ನು 50 ಗಂಟೆಗಳ ಕಾಲ, ಸೋನಿಯಾ ಗಾಂಧಿ ಅವರನ್ನು ಮೊನ್ನೆ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರೂ, ಅನಗತ್ಯ ಕಿರುಕುಳ ನಿಂತಿಲ್ಲ ಎಂದು ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕಾಂಗ್ರೆಸ್ ಮುಖವಾಣಿಯಾಗಿದ್ದು, ನೆಹರೂ ಅವರು ಅಧ್ಯಕ್ಷರಾಗಿದ್ದಾಗ ಇದನ್ನು ಆರಂಭಿಸಿದ್ದರು. ಈ ಸಂಸ್ಥೆಯ ಆಸ್ತಿಯನ್ನು ತಮ್ಮ ಸ್ವಂತ ಆಸ್ತಿ ಎಂದು ಎಲ್ಲಿಯೂ ಹೇಳಿಲ್ಲ. ಆ ಪತ್ರಿಕೆ ಸಂಕಷ್ಟದಲ್ಲಿದ್ದಾಗ ಅಲ್ಲಿನ ಸಿಬ್ಬಂದಿಗೆ ವೇತನ ನೀಡಲು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಣಿಗೆ ರೂಪದಲ್ಲಿ ಹಣ ನೀಡಿದ್ದರು ಎಂದು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಅರುಣ್ ಜೇಟ್ಲಿ ಅವರೇ ಈ ಪ್ರಕರಣದಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಹೇಳಿದ್ದರು. ಆದರೂ ಈಗ ಈ ಪ್ರಕರಣ ಮತ್ತೆ ತೆರೆದಿದ್ದಾರೆ.

ನನ್ನನ್ನು, ಚಿದಂಬರಂ, ಮಹಾರಾಷ್ಟ್ರ ನಾಯಕರು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈಗ ಸೋನಿಯಾ ಗಾಂಧಿ ಅವರನ್ನು ಅನಗತ್ಯವಾಗಿ ವಿಚಾರಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅವರು ಏನೇ ಕಿರುಕುಳ ಕೊಟ್ಟರೂ, ಜೈಲಿಗೆ ಹಾಕಿದರೂ ನಾವು ಜಗ್ಗುವುದಿಲ್ಲ. ನೆಹರೂ ಹಾಗೂ ಗಾಂಧೀಜಿ, ಸರ್ದಾರ್ ಪಟೇಲ್ ಅವರು ದೇಶಕ್ಕಾಗಿ ಹಲವು ವರ್ಷಗಳ ಕಾಲ ಜೈಲುವಾಸ ಅನುಭವಿಸಿ, ಜೀವವನ್ನು ಲೆಕ್ಕಿಸದೆ ಬ್ರಿಟೀಷರ ಗುಂಡಿಗೆ ಎದೆಯೊಡ್ಡಿ ನಿಂತಿದ್ದರು. ದೇಶದ ಹಿತಕ್ಕೆ 10 ವರ್ಷಗಳ ಕಾಲ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ ಸೋನಿಯಾ ಗಾಂಧಿ ಅವರಿಗೆ ಈ ರೀತಿ ಕಿರುಕುಳ ನೀಡುತ್ತಿದ್ದಾರೆ. ಅವರ ಕುಟುಂಬದವರು ಅಲಹಾಬಾದ್ ನಲ್ಲಿ 20 ಸಾವಿರ ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ದಾನ ಮಾಡಿದ್ದಾರೆ. ಇಂದು ನಾವೆಲ್ಲ ಅವರ ಜತೆ ಇದ್ದೇವೆ ಎಂದು ಹೇಳಿದ್ದಾರೆ.

ನಾವು 75 ನೇ ಸ್ವಾತಂತ್ರ ದಿನ ಆಚರಿಸುತ್ತಿದ್ದು, ದೇಶಕ್ಕೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ತಂದು ಕೊಟ್ಟಿತೆ ವಿನಃ ಬಿಜೆಪಿಯಲ್ಲ. ಈ ದೇಶಕ್ಕೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭತ್ವ ವ್ಯವಸ್ಥೆ ತಂದುಕೊಟ್ಟಿದ್ದು ಕಾಂಗ್ರೆಸ್. ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆ ತಂದಿದ್ದಕ್ಕೆ ಮೋದಿ ಅವರು ಪ್ರಧಾನಮಂತ್ರಿ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲು ತೀರ್ಮಾನಿಸಲಾಗಿದೆ. ಆ. 15 ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಕನಿಷ್ಠ 1ಲಕ್ಷ ಜನ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ಮಾಡಲಿದ್ದಾರೆ.

ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲಾ ಪಕ್ಷದವರು, ಸಂಘ ಸಂಸ್ಥೆಗಳು ಇದರಲ್ಲಿ ಭಾಗವಹಿಸಬಹುದು. ಎಐಸಿಸಿ ಮಾರ್ಗದರ್ಶನದಲ್ಲಿ ದೇಶ ಐಕ್ಯತೆ, ಸಮಗ್ರತೆ, ರಾಷ್ಟ್ರಧ್ವಜ ಉಳಿಸಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ.

ಸೋನಿಯಾ ಗಾಂಧಿ ನಮ್ಮ ತಾಯಿ, ರಾಹುಲ್ ಗಾಂಧಿ ನಮ್ಮ ಸಹೋದರರು. ನೀವು ಧೃತಿಗೆಡಬೇಡಿ, ನಾವೆಲ್ಲರೂ ನಿಮ್ಮ ಜತೆ ಇದ್ದೇವೆ.’

ಕಾಂಗ್ರೆಸ್ ನಾಯಕರು ಗಾಂಧಿ ಕುಟುಂಬದ ಗುಲಾಮರು ಎಂಬ ಬಿಜೆಪಿ ಟೀಕೆ ಕುರಿತು ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, ‘ ಈ ದೇಶಕ್ಕೆ ಗಾಂಧಿ ಕುಟುಂಬ ಗುಲಾಮರಂತೆ ಸೇವೆ ಸಲ್ಲಿಸಿದೆ. ಇದನ್ನು ಬಿಜೆಪಿ ಅರಿಯಬೇಕು. ಅವರ ಅನುಯಾಯಿಗಳಾದ ನಾವೆಲ್ಲರೂ ಈ ದೇಶಕ್ಕೆ ಗುಲಾಮರೆ. ನಾವು ಜನ ಮತ್ತು ಭಾರತಾಂಬೆ ಸೇವೆ ಮಾಡುತ್ತಿದ್ದೇವೆ ‘ ಎಂದು ತಿಳಿಸಿದರು.

ಗುಜರಾತ್ ಗಲಬೆ ಸಂದರ್ಭದಲ್ಲಿ ಮೋದಿ ಅವರು ವಿಚಾರಣೆ ಎದುರಿಸಿದಾಗ ನಾವು ಪ್ರತಿಭಟಿಸಲಿಲ್ಲ ಎಂಬ ಪ್ರಶ್ನೆಗೆ, ‘ ಅದು ಅವರ ವಿಚಾರ. ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಕೇವಲ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ಅವರನ್ನು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ. ಅವರು ಉಕ್ಕಿನ ಮಹಿಳೆ, ದೇಶಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ದಾರೆ ‘ ಎಂದರು.

ಪಕ್ಷದ ಮುಂದಿನ ನಡೆ ಏನು ಎಂದು ಕೇಳಿದಾಗ, ‘ ಕಳೆದ ಮೂರು ವರ್ಷಗಳ ಅಧಿಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದಕ್ಕೆ ಬಿಜೆಪಿ ಭ್ರಷ್ಟೋತ್ಸವ ಆಚರಿಸುತ್ತಿದೆ. ಅವರ ಸಾಧನೆ ಏನು? ನೇಮಕಾತಿ ಅಕ್ರಮ ಮೂಲಕ ಯುವಕರಿಗೆ ಮೋಸ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಬರೆ, ಕೋವಿಡ್ ಸಮಯದಲ್ಲಿ ಆಕ್ಸಿಜನ್ ಪೂರೈಸದೆ ಹಲವರ ಸಾವಿಗೆ ಕಾರಣ, ರಸಗೊಬ್ಬರ ದರ ಏರಿಕೆ, ಆದಾಯ ಕುಸಿತದ ಮೂಲಕ ಹೇಗೆ ಅನ್ಯಾಯ ಮಾಡಲಾಗಿದೆ ಎಂದು ಜನರಿಗೆ ವಿವರಿಸಲಿ. ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಾಗಿದೆ. ಜನ ಸಾಮಾನ್ಯರನ್ನು ಕೇಳಿ ಅವರೇ ಹೇಳುತ್ತಾರೆ ‘ ಎಂದು ಟೀಕಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಂಗಳೂರು ಪಬ್‌ ನಲ್ಲಿ ವಿದ್ಯಾರ್ಥಿಗಳ ಪಾರ್ಟಿ: ಭಜರಂಗ ದಳ ಕಾರ್ಯಕರ್ತರಿಂದ ದಾಳಿ!

Next Post

ಬಿಜೆಪಿ ಯಡಿಯೂರಪ್ಪರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ!

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಶಿವಮೊಗ್ಗ ಲಾಕ್‌ಡೌನ್‌: ರೈತರಿಗಾಗುವ ನಷ್ಟವನ್ನು ಈಶ್ವರಪ್ಪ ತುಂಬಿಕೊಡುತ್ತಾರಾ…? ರೈತ ಸಂಘದಿಂದ ಆಕ್ರೋಶ

ಬಿಜೆಪಿ ಯಡಿಯೂರಪ್ಪರನ್ನ ಯೂಸ್ ಅಂಡ್ ಥ್ರೋ ಮಾಡಿಕೊಂಡಿದೆ!

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada