• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇನ್ನಷ್ಟು ಹೆಚ್ಚಿದೆ ಚಡ್ಡಿ ಸುಟ್ಟ ಕೀರ್ತಿ ಗಣೇಶ್ ಕೀರ್ತಿ! ಕಾಂಗ್ರೆಸಿಗೆ ಬೇಕಿರುವುದೇ ಇಂತಹ ಯುವಕರು

ಯದುನಂದನ by ಯದುನಂದನ
June 6, 2022
in ಕರ್ನಾಟಕ, ದೇಶ, ರಾಜಕೀಯ
0
ಇನ್ನಷ್ಟು ಹೆಚ್ಚಿದೆ ಚಡ್ಡಿ ಸುಟ್ಟ ಕೀರ್ತಿ ಗಣೇಶ್ ಕೀರ್ತಿ! ಕಾಂಗ್ರೆಸಿಗೆ ಬೇಕಿರುವುದೇ ಇಂತಹ ಯುವಕರು
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷಕ್ಕೆ ಇಂತಹ ಯವಕರ ಅಗತ್ಯ ಇತ್ತು. ರಾಜ್ಯದಲ್ಲಿ ಹಾಗೂ ದೇಶದಲ್ಲಿ NSUI ಎನ್ನುವಂತಹ ವಿದ್ಯಾರ್ಥಿ ಸಂಘಟನೆಯೊಂದು ಇದೆ ಎನ್ನುವುದೇ ಬಹಳ ಜನಕ್ಕೆ ಗೊತ್ತೇ ಇರಲಿಲ್ಲ. ಮೈನ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ನಡುವೆ ವಿದ್ಯಾರ್ಥಿ ಕಾಂಗ್ರೆಸ್ ಎನ್ನುವುದೊಂದು ಇದೆ ಎಂಬುದೂ ಗೊತ್ತಿರಲಿಲ್ಲ. ಆದರೀಗ ರಾಜ್ಯ NSUI ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕೀರ್ತಿ ಗಣೇಶ್ ಸಂಚಲನ ಮೂಡಿಸಿದ್ದಾರೆ.

ADVERTISEMENT

ಪಠ್ಯ ಪರಿಷ್ಕರಣೆ ಸಮಿತಿಯಲ್ಲಿ ಆಗಿರುವ ಲೋಪಗಳನ್ನು ಸರಿ ಮಾಡಬೇಕು. ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು 12ನೇ ಶತಮಾನದಲ್ಲೇ ಪ್ರಜಾಪ್ರಭುತ್ವ, ಸಮಸಮಾಜದ ಕನಸುಕಂಡು ವಚನ ಕ್ರಾಂತಿ ಮಾಡಿದ ಬಸವಣ್ಣನವರ ವಿಚಾರಧಾರೆಗಳಿಗೆ ಕತ್ತರಿ ಹಾಕಿರುವ ಪಠ್ಯಗಳನ್ನು ಕಿತ್ತೆಸೆದು ಮೊದಲಿದ್ದ ಪಠ್ಯಗಳನ್ನೇ ಮಕ್ಕಳಿಗೆ ಬೋಧಿಸಬೇಕು. ಹೀಗೆ ಹಲವು ಸಕಾರಣಗಳೊಂದಿಗೆ ನಿಷ್ಕ್ರೀಯವಾಗಿದ್ದ ಆರ್ ಎಸ್ ಎಸ್ ಮೂಲದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿರುದ್ಧ ಪ್ರತಿಭಟನೆ ಮಾಡಲು ಹೋಗಿದ್ದ ಕೀರ್ತಿ ಗಣೇಶ್ ಈಗ ಜೈಲುಪಾಲಾಗಿದ್ದಾರೆ.

ಶಿಕ್ಷಣ ಸಚಿವರ ಮನೆ ಎದುರು ಚಡ್ಡಿ ಸುಟ್ಟಿದ್ದಾರೆ ಎಂಬುದು ಪೊಲೀಸರು ಕೀರ್ತಿ ಗಣೇಶ್ ಮೇಲೆ ಹೊರಿಸಿರುವ ಆರೋಪ. ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ. ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು ಎಂಬವು ಇನ್ನಿತರ ಸಬೂಬುಗಳು. ಆದರೆ ಆಡಳಿತಾರೂಢ ಬಿಜೆಪಿ ಸರ್ಕಾರದ ಕಣ್ಣಿಗೆ ಬಿದ್ದಿರುವುದು ಹೊತ್ತಿ ಉರಿದ ಚಡ್ಡಿಯಿಂದ ಹಾರಿದ ಕಿಡಿ. ಆದುದರಿಂದ ಸಾಮಾನ್ಯವಾಗಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡುವ ಶಾಸ್ತ್ರವನ್ನು ಬದಿಗೊತ್ತಿ ಧೀರೋದಾತ್ತ ಪೊಲೀಸರು ಕೀರ್ತಿ ಗಣೇಶ್ ಅವರನ್ನು ಜೈಲಿಗಟ್ಟಿದ್ದಾರೆ.

Concerned that students who were protesting peacefully have been arrested & jailed. The right to protest is fundamental to democracy. They should be released immediately. #JusticeForNSUI #ReleaseTeamNSUI https://t.co/fK8Hdwe9Z9 pic.twitter.com/QjdQkYJo7R

— Shashi Tharoor (@ShashiTharoor) June 4, 2022

ಆದರೆ ಬಿಜೆಪಿ ಸರ್ಕಾರದ ಮೂರ್ಖತನದಿಂದ ಕೀರ್ತಿ ಗಣೇಶ್ ಅವರ ಕೀರ್ತಿ ಇನ್ನಷ್ಟು ಹೆಚ್ಚಾಗಿದೆ‌. NSUI ಎನ್ನುವಂತಹ ವಿದ್ಯಾರ್ಥಿ ಸಂಘಟನೆ ಇದೆ ಎಂಬುದನ್ನು ಕೀರ್ತಿ ಗಣೇಶ್ ಸಾಬೀತುಪಡಿಸಿದ್ದಾರೆ. ಒಂದು ಕಾಲದಲ್ಲಿ NSUI ಸಂಘಟನೆ ಪದಾಧಿಕಾರಿಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇರುತ್ತಿರಲಿಲ್ಲ.‌ ಇಂದು ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಂತಹ ಹಿರಿಯ ನಾಯಕರು ಕೀರ್ತಿ ಗಣೇಶ್ ಬಗ್ಗೆ ಮಾತನಾಡುತ್ತಿದ್ದಾರೆ. ಅಷ್ಟೇ ಏಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಂಸದ ಶಶಿ ತರೂರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರಂತಹ ನಾಯಕರು ಕೂಡ ಕೀರ್ತಿ ಗಣೇಶ್ ಬಿಡುಗಡೆಗೆ ಆಗ್ರಹಿಸಿದ್ದಾರೆ.

ಸ್ವತಃ ದೇಶಾದ್ಯಂತ ಸಾವಿರಾರು ಪ್ರತಿಭಟನೆ ಮಾಡಿ, ನೂರಾರು ಕೇಸುಗಳನ್ನು ಹಾಕಿಸಿಕೊಂಡಿರುವ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಈಗ ‘ಈ ಚಡ್ಡಿ ಸುಡುವ ಅಭಿಯಾನಕ್ಕೆ’ ಸ್ಫೂರ್ತಿ ನೀಡಿದ ಕೀರ್ತಿ ಗಣೇಶ್ ಬೆನ್ನೆಲುಬಾಗಿ ನಿಂತಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ. ಇದೇ NSUI ಸಂಘಟನೆಯ ವಕೀಲ ಶತಾಬಿಶ್ ಅವರು ಕೀರ್ತಿ ಗಣೇಶ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದಾರೆ. NSUI ಮಾಡಿದ ಪ್ರತಿಭಟನೆ ರಾಜ್ಯಮಟ್ಟದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸಿದೆ. ಟಿವಿ ವಾಹಿನಿಗಳು ಚರ್ಚೆ ನಡೆಸಿವೆ. ಈ ಮೂಲಕ ಯಾವುದೇ ವಂಶಪಾರಂಪರ್ಯದ ಹಿನ್ನೆಲೆಯೂ ಇಲ್ಲದ ಕೀರ್ತಿ ಗಣೇಶ್ ಕೆಲಸಕ್ಕೆ ಎಲ್ಲೆಡೆ ಮಾನ್ಯತೆ ದೊರಕಿದೆ.

ಕಾಂಗ್ರೆಸ್ ಪಕ್ಷದಲ್ಲಿ ವಂಶಪಾರಂಪರ್ಯ ಕೊನೆಯಾಗಬೇಕು. ಯುವಕರಿಗೆ ಹೆಚ್ಚು ಆದ್ಯತೆ ಸಿಗಬೇಕು. ಕೆಲಸ ಮಾಡುವವರನ್ನು ಗುರುತಿಸಬೇಕು ಎಂದು ಹೆಚ್ಚು ಚರ್ಚೆ ಆಗುತ್ತಿರುವ ವೇಳೆಯಲ್ಲೇ ‘ಇವೆಲ್ಲ ದೃಷ್ಟಿಯಿಂದಲೂ ಸೂಕ್ತ ಅಭ್ಯರ್ಥಿ ಹೇಗಿರಬೇಕೆಂದು’ ಒಂದೇ ಒಂದು ಪ್ರತಿಭಟನೆ ಮೂಲಕ ತೋರಿಸಿಕೊಟ್ಟಿದ್ದಾರೆ ಕೀರ್ತಿ ಗಣೇಶ್. ತೆರೆ ಮರೆಯಲ್ಲಿ ರಾಜಕಾರಣ ಮಾಡುವ ಆರ್ ಎಸ್ ಎಸ್ ಬಗ್ಗೆ ಮಾತನಾಡಲು ಹಿಂಜರಿಯುತ್ತಿದ್ದ ಕಾಂಗ್ರೆಸ್ ನಾಯಕರೂ ಈಗ ಸೊಲ್ಲೆತ್ತುವಂತಾಗಿದೆ. ವಿದ್ಯಾರ್ಥಿ ಸಂಘಟನೆ ಎಂದರೆ ನಮ್ಮ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಎಂದು ಬೀಗುತ್ತಿದ್ದ ಬಿಜೆಪಿಗೂ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಚಡ್ಡಿ ಸುಟ್ಟ ಕೀರ್ತಿ ಗಣೇಶ್ ಅವರನ್ನು ಜೈಲಿಗಟ್ಟಿದೆ. ಇದರಿಂದ ಕೀರ್ತಿ ಗಣೇಶ್ ಅವರಂತಹ ಇನ್ನಷ್ಟು ಗಟ್ಟಿ ಯುವಕರನ್ನು ಆಕರ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿಯಮ ಉಲ್ಲಂಘಿಸಿದ ಅಪಾರ್ಟ್‌ಮೆಂಟ್‌ಗಳಿಗೆ ಬಿಬಿಎಂಪಿ ನೋಟಿಸ್

Next Post

ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮಾವತಿ ನಿಧನ

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮಾವತಿ ನಿಧನ

ಹಾಸ್ಯ ನಟ ನರಸಿಂಹರಾಜು ಹಿರಿಯ ಪುತ್ರಿ ಧರ್ಮಾವತಿ ನಿಧನ

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada