ಪ್ರತಿಭಟನೆಯ ಬಿಸಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರೂರಿಗೆ ಬರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೇಟು ಹಾಕಿದ್ದು, ಇಂದಿನ ಮೈಸೂರು ಪ್ರವಾಸವನ್ನು ರದ್ದು ಮಾಡಿಕೊಂಡಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಸಿಎಂ ಬೊಮ್ಮಾಯಿ ಅವರಿಂದು ಮೈಸೂರು ಜಿಲ್ಲೆಯ ಮೂಗೂರು ದೇವಾಲಯಕ್ಕೆ ಆಗಮಿಸಬೇಕಿತ್ತು.
ಆದರೆ, ಮಾಜಿ ಸಿಎಂ ಸಿದ್ದು ಕಾರಿಗೆ ಕೊಡಗಿನ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಹೊಡೆದ ಪರಿಣಾಮ ಎಲ್ಲೆಡೆ ಪ್ರತಿಭಟನೆಯ ಬಿಸಿ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ನಿಗಿ ನಿಗಿ ಕೆಂಡವಾಗಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಿದರೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಅದನ್ನರಿತು ಸಿಎಂ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಹಾಗಾಗಿ ಇಂದು ಮೈಸೂರಿನ ಪ್ರವಾಸ ಹಿಂದೇಟಾಗಿ ಶಿಗ್ಗಾಂವ್ ಗೆ ತೆರಳಿದ್ದಾರೆ.