• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಟ್ ಕಾಯಿನ್ ಹಗರಣ : CBI ಅಥವಾ NIA ತನಿಖೆಗೆ ವಿಪಕ್ಷಗಳ ಆಗ್ರಹ

Shivakumar A by Shivakumar A
March 8, 2022
in ಕರ್ನಾಟಕ, ರಾಜಕೀಯ
0
ಬಿಟ್ ಕಾಯಿನ್ ಹಗರಣ : CBI ಅಥವಾ NIA ತನಿಖೆಗೆ ವಿಪಕ್ಷಗಳ ಆಗ್ರಹ
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣ (Bit Coin Scam) ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ (Araga Jnanendra) ಬಿಟ್ ಕಾಯಿನ್ ಹಗರಣದ ಕುರಿತು ವಿಧಾನ ಪರಿಷತ್ತಿನಲ್ಲಿ ನೀಡಿರುವ ಉತ್ತರದಿಂದ ಅಸಂತುಷ್ಟರಾಗಿರುವ ವಿಪಕ್ಷ ನಾಯಕರು, ಹಗರಣದ ಕುರಿತು ಸಿಬಿಐ ಅಥವಾ ಎನ್ಐಎ ತನಿಖೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ.

ADVERTISEMENT

ಆಗಸ್ಟ್ 2016ರಲ್ಲಿ ಬಿಟ್ ಫೈನೆಕ್ಸ್ ಎಂಬ ಕ್ರಿಪ್ಟೋ ಕರೆನ್ಸಿಯನ್ನು 4.5 ಬಿಲಿಯನ್ ಡಾಲರ್ ಮೊತ್ತದ ಬಿಟ್ ಕಾಯಿನ್ ಗಳಾಗಿ ಪರಿವರ್ತಿಸಿರುವ ಕುರಿತು ಅಮೇರಿಕಾ ಮೂಲದ ಏಜೆನ್ಸಿ ತನಿಖೆ ನಡೆಸಿತ್ತು. ಈ ತನಿಖೆಯಲ್ಲಿ ಹಗರಣ ಹಾಗೂ ಭಾರತ/ಕರ್ನಾಟಕದ ನಡುವೆ ಯಾವುದೇ ಸಂಬಂಧವಿಲ್ಲವೆಂದು ಏಜೆನ್ಸಿ ತಿಳಿಸಿದೆ ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಹೇಳಿದರು.

“ಹಗರಣಕ್ಕೆ ಸಂಬಂಧಿಸಿ ಅಮೇರಿಕಾದ ಏಜೆನ್ಸಿ (america agency) ಇಬ್ಬರು ಅಮೇರಿಕನ್ ಪ್ರಜೆಗಳನ್ನು ಈಗಾಗಲೇ ಬಂಧಿಸಿದೆ. ಹ್ಯಾಕಿಂಗ್ ಮೂಲಕ ಪಡೆಯಲಾಗಿದ್ದ ಸಂಪೂರ್ಣ ಹಣವನ್ನು ಅವರು ಜಪ್ತಿಗೊಳಿಸಿದ್ದಾರೆ. ಆದರೆ, ಈ ಪ್ರಕರಣ ಹಾಗೂ ಭಾರತದ ನಡುವೆ ಯಾವುದೇ ಸಂಬಂಧ ಇರುವ ಕುರಿತು ಅವರಿಗೆ ಮಾಹಿತಿ ಲಭಿಸಿಲ್ಲ,” ಎಂದು ಜ್ಞಾನೇಂದ್ರ ಹೇಳಿದ್ದಾರೆ.

Also Read : ರಾಜ್ಯ ಬಿಜೆಪಿ ಸರ್ಕಾರಕ್ಕೆ ಸುನಾಮಿಯಂತೆ ಅಪ್ಪಳಿಸಲಿದೆಯೇ ʼಬಿಟ್‌ಕಾಯಿನ್‌ʼ ಹಗರಣ?

ಇದೇ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ (Srikrishna Ramesh alias Sriki) ಎಂಬ ಹ್ಯಾಕರ್ ನನ್ನು 2020 ನವೆಂಬರ್ ನಲ್ಲಿ ಬಂಧಿಸಿದ್ದರು. ಬಿಟ್ ಕಾಯಿನ್ ಬಳಸಿ ಡಾರ್ಕ್ ನೆಟ್’ನಿಂದ ಡ್ರಗ್ಸ್ ಖರೀದಿ ಹಾಗೂ ಬಿಟ್ ಕಾಯಿನ್ ಹ್ಯಾಕಿಂಗ್ ಮಾಡಿರುವ ಆರೋಪ ಶ್ರೀಕಿ ಮೇಲಿತ್ತು. ಕರ್ನಾಟಕ ಸರ್ಕಾರದ ವೆಬ್ಸೈಟ್ ಹಾಕಿ ಮಾಡಿ ಸುಮಾರು ರೂ.11.5 ಕೋಟಿ ಹಣ ದೋಚಿರುವ ಕುರಿತು ಹಾಗೂ ಬಿಟ್ ಫೈನೆಕ್ಸ್ ಕರೆನ್ಸಿ ಅದಲು ಬದಲು ಮಾಡಿರುವ ಕುರಿತಾಗಿ ಶ್ರೀಕಿ ತನಿಖೆ ವೇಳೆ ಬಾಯಿಬಿಟ್ಟಿದ್ದ.

ತನಿಖೆಯು ಹಳ್ಳ ಹಿಡಿಯುತ್ತಿರುವ ಕುರಿತು ಕಾಂಗ್ರೆಸ್ ಪರಿಷತ್ ಸದಸ್ಯ ಯು ಬಿ ವೆಂಕಟೇಶ್ ಅವರು ಸದನದಲ್ಲಿ ಪ್ರಸ್ತಾಪಿಸಿದ್ದರು. ಸರ್ಕಾರವು ತನಿಖೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿಲ್ಲ ಎಂದು ಆರೋಪಿಸಿದ್ದರು.

“ಹಣ ವರ್ಗಾವಣೆ ಮಾಡಲು ಭಾರತ ಮೂಲದ ಈಮೈಲ್ ಐಡಿಗಳನ್ನು ಬಳಸಲಾಗಿತ್ತು. ಭಾರತ ಮೂಲದ ಈಮೈಲ್ ಐಡಿಗಳನ್ನು ಬಳಸುವ ಅಗತ್ಯವೇನಿತ್ತು? ಈ ಹಾದಿಯಲ್ಲಿ ನೀವೇ ತನಿಖೆ ನಡೆಸ್ತೀರಾ? ಸಿಬಿಐ ಅಥವಾ ಎನ್ಐಎಗೆ ತನಿಖೆಯನ್ನು ವಹಿಸ್ತೀರಾ ಎಂಬ ಕುರಿತು ಸ್ಪಷ್ಟನೆ ನೀಡಿ,” ಎಂದು ವೆಂಕಟೇಶ್ ಹೇಳಿದ್ದಾರೆ.

ಇವರೊಂದಿಗೆ ದನಿಗೂಡಿಸಿದ ಕಾಂಗ್ರೆಸ್ ವಿಧಾನ ಪರಿಷತ್ ನಾಯಕ ಬಿ ಕೆ ಹರಿಪ್ರಸಾದ್, ಹಗರಣದಲ್ಲಿ ಹಲವು ವಿವಿಐಪಿಗಳ ಕೈವಾಡವೂ ಇದೆ. ಅವರೆಲ್ಲರ ಹೆಸರು ಹೊರಗೆ ಬರಬೇಕು. ಆ ಕಾರಣಕ್ಕಾಗಿ ಪಾರದರ್ಶಕ ತನಿಖೆಗೆ ಸರ್ಕಾರ ಆದೇಶ ನಿಡಬೇಕು. ಇದೊಂದು ಮಾಮೂಲಿ ಪ್ರಕರಣ ಅಲ್ಲ. ಹಗರಣದಲ್ಲಿ ಐಪಿಎಸ್ ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳೂ ಇದ್ದಾರೆ. ಹಾಗಾಗಿ ಇದನ್ನು ಬೇರೆ ಏಜೆನ್ಸಿ ಮುಖಾಂತರವೇ ತನಿಖೆ ಮಾಡಬೇಕು, ಎಂದಿದ್ದಾರೆ.

Also Read : ಹ್ಯಾಕರ್ ಶ್ರೀಕಿ ಬಂಧನ : ಹೊಲ ಮೇಯ್ದ ಬೇಲಿಯ ರಕ್ಷಣೆಯ ತಂತ್ರವೇ?

ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ವಿಪಕ್ಷಗಳು ಯಾವುದೇ ದಾಖಲೆಗಳನ್ನು ನೀಡಿದರೆ ಸರ್ಕಾರವು ಆ ದಾಖಲೆಗಳ ಆಧಾರದ ಮೇಲೆ ಉನ್ನತ ಮಟ್ಟದ ತನಿಖೆಯನ್ನು ನಡೆಸುತ್ತದೆ ಎಂದು ಗೃಹ ಸಚಿವರು ಹೇಳಿದ್ದಾರೆ.

“ಭಾರತೀಯ ಮೂಲದ ಈಮೈಲ್ ಐಡಿಗಳನ್ನು ಬಳಸಿರುವ ಕುರಿತು ದಾಖಲೆಗಳನ್ನು ನೀಡಿ. ನಾವು ತನಿಖೆ ನಡೆಸುತ್ತೇವೆ. ಈ ವಿಚಾರದ ಕುರಿತು ಕೂಲಂಕುಷವಾದ ಮಾಹಿತಿಯನ್ನು ಪಡೆದಿದ್ದೇನೆ. ಇದನ್ನು ದೊಡ್ಡ ವಿಚಾರವೆಂದು ಬಿಂಬಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಜೊತೆಯೂ ಮಾತನಾಡಿದ್ದೇನೆ. ಹಣ ಕಳೆದುಕೊಂಡವರು ಪ್ರಧಾನಿಯನ್ನು ಭೇಟಿಯಾಗಿದ್ದಾರೆ. ಆದರೆ, ಕೇಂದ್ರದಿಂದ ಈ ಕುರಿತಾಗಿ ಯಾವುದೇ ದಾಖಲೆಗಳನ್ನು ರಾಜ್ಯಕ್ಕೆ ನೀಡಿಲ್ಲ,” ಎಂದು ಅವರು ಹೇಳಿದರು.

Also Read : ಬಿಟ್ ಕಾಯಿನ್ ಹಗರಣ : ಶ್ರೀಕಿ ನಾಪತ್ತೆ ಕಥೆ ಹೇಳುತ್ತಿರುವುದೇನು?

ಈ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ, ಈ ಪ್ರಕರಣವನ್ನು ಸಿಬಿಐಗೆ ಏಕೆ ನೀಡುತ್ತಿಲ್ಲ? ಸರ್ಕಾರದ ಹಣವನ್ನೇ ದೋಚಿದ್ದರೂ ಮೀನಾಮೇಷ ಏಕೆ ಎಣಿಸುತ್ತಿದ್ದಾರೆ? ಸರ್ಕಾರದ ಈ ನಡೆ ಅನುಮಾನ ಹುಟ್ಟುಹಾಕುತ್ತಿದೆ. ಸಿಬಿಐ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಲಿ, ಎಂದು ಅವರು ಆಗ್ರಹಿಸಿದರು.

Tags: america agencyAraga GnandraAraga JnanendraBit Coin ScameSrikrishna Ramesh alias Srikiಅಮೇರಿಕಾದ ಏಜೆನ್ಸಿಆರಗ ಜ್ಞಾನೇಂದ್ರಬಿಟ್ ಕಾಯಿನ್ ಹಗರಣಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ
Previous Post

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ವಿರುದ್ಧ UAPAʼಅಡಿ ಕೇಸ್‌ ದಾಖಲು

Next Post

2021-22 ಫ್ರೆಬ್ರವರಿ ವರೆಗೆ ರಾಜ್ಯದಲ್ಲಿ 5,860 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲು!

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
2021-22 ಫ್ರೆಬ್ರವರಿ ವರೆಗೆ ರಾಜ್ಯದಲ್ಲಿ 5,860 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲು!

2021-22 ಫ್ರೆಬ್ರವರಿ ವರೆಗೆ ರಾಜ್ಯದಲ್ಲಿ 5,860 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲು!

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada