• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

ಪ್ರತಿಧ್ವನಿ by ಪ್ರತಿಧ್ವನಿ
June 16, 2026
in Top Story, ಕರ್ನಾಟಕ, ರಾಜಕೀಯ
0
ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರಿನಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಮೇಲೆ ಹೊರೆ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಪರ ದಿನನಿತ್ಯ ಮಾತನಾಡುವ ಉದ್ಯಮಿಗಳು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಸಬೇಕು ಎಂಬ ಉದ್ದೇಶದಿಂದ ವರ್ಕ್, ಲೀಡ್ ಅಂಡ್ ಪ್ಲೇ ಅಡಿಯಲ್ಲಿ ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಬಿಡದಿ ಟೌನ್ ಶಿಪ್ ನಿರ್ಮಾಣದ ಉದ್ದೇಶದ ಬಗ್ಗೆ ಮಾತನಾಡಿದ್ದಾರೆ.

Priyank Kharge : ಮೋಹನ್ ಭಾಗವತ್ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು..! #pratidhvani

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಮಾಡಿರುವ ಟೌನ್ ಶಿಪ್ ಮಾದರಿಯಾಗಿ, ನಮ್ಮ ರಾಜ್ಯದಲ್ಲಿ ಐಟಿ ಹಾಗೂ ಇತರೆ ಕ್ಷೇತ್ರದ ಉದ್ಯಮಗಳಿಗೆ ನೀಡಲಾಗುವ ಮೂಲಭೂತ ಸೌಕರ್ಯ. ಇದರ ಹಿಂದೆ ಯಾವುದೇ ರೀತಿಯ ರಿಯಲ್ ಎಸ್ಟೇಟ್ ಉದ್ದೇಶವಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ನವರು ಪದೇ ಪದೆ ಹೇಳಿಕೆ ನೀಡುತ್ತಿದ್ದಾರೆ. ಈ ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಸಾಬೀತುಪಡಿಸಲಿ ಎಂದರು.

ಈ ಯೋಜನೆಯನ್ನು ಬಿಎಂಆರ್‌ಡಿಎ ಮೂಲಕ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿ, ಜಾಗ ಸ್ವಾಧೀನ ಪಡಿಸಿಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಿ, ಉಳಿಕೆ ಜಾಗವನ್ನು ಉದ್ಯಮಿಗಳಿಗೆ ನೀಡಿದ ಬಳಿಕ ಅವರು ಅಲ್ಲಿ ತಮ್ಮ ಕಂಪನಿ ಸ್ಥಾಪಿಸುತ್ತಾರೆ. ಎಲ್ಲವನ್ನು ನೋಂದಣಿ ಮೂಲಕವೇ ಮಾಡಲಾಗುವುದು. ಇಲ್ಲಿ ಯಾವುದೇ ಮಧ್ಯವರ್ತಿಗಳು, ಸರ್ಕಾರ ಅಥವಾ ಡಿ.ಕೆ. ಶಿವಕುಮಾರ್ ಅವರು ಹೇಗೆ ದುಡ್ಡು ಹೊಡೆಯುತ್ತಾರೆ ಎಂದು ವಿರೋಧ ಪಕ್ಷಗಳು ಹೇಳಬೇಕು. ಈ ಹಿಂದೆ ನೀವು ಹಣ ಹೊಡೆದಿದ್ದರೆ, ಅದರ ಅನುಭವವನ್ನು ಹಂಚಿಕೊಳ್ಳಿ ಎಂದು ಟೀಕಿಸಿದರು.

Siddaramaiah meet CM DKS : ಸಿದ್ದರಾಮಯ್ಯ ಭೇಟಿ ಮಾಡಿದ ಸಿಎಂ ಡಿಕೆ ಶಿವಕುಮಾರ್‌..! #pratidhvani

ಇದು ಕಾನೂನು ಬಾಹಿರ ಹೇಗಾಗುತ್ತದೆ ಎಂದು ಹೇಳಿ. 2006ರಲ್ಲಿ ಕುಮಾರಸ್ವಾಮಿ ಅವರು ಅಧಿಸೂಚನೆ ಹೊರಡಿಸಿ, ಡಿಎಲ್ಎಫ್ ಬಳಿ 400 ಕೋಟಿ ಕೋಟಿ ಪಡೆದು, ಅವರಿಗೆ ಜಾಗ ನೀಡದೇ ಒಂದೂವರೆ, ಎರಡು ವರ್ಷ ಕಾಯಿಸಿದ ಪರಿಣಾಮ ಅವರು ನಿಮ್ಮ ಸಹವಾಸ ಸಾಕು ಎಂದು ಈ ಯೋಜನೆಯಿಂದ ಹಿಂದೆ ಸರಿದರು. ಕುಮಾರಸ್ವಾಮಿ ಅವರು ಅಧಿಕಾರದಿಂದ ಹೋಗುವಾಗ ಈ ಪ್ರದೇಶವನ್ನು ರೆಡ್ ಜೋನ್ ಎಂದು ಆದೇಶ ಹೊರಡಿಸುತ್ತಾರೆ. ಈಗಲೂ ಅದು ರೆಡ್ ಜೋನ್ ಆಗಿಯೇ ಉಳಿದಿದೆ. ನಂತರ ಯಡಿಯೂರಪ್ಪನವರು ಈ ಯೋಜನೆಯಲ್ಲಿ ಕೆಲವು ಮಾರ್ಪಾಡು ಮಾಡಿದರು. ಈ ಟೌನ್ ಶಿಪ್ ಯೋಜನೆ ಜಾರಿಯಾಗಿ ಆ ಪ್ರದೇಶ ಅಭಿವೃದ್ಧಿಯಾಗುವವರೆಗೂ ಇದು ರೆಡ್ ಜೋನ್ ಆಗಿಯೇ ಇರುತ್ತದೆ.

M Lakshmana : ಬಿಡದಿ ಟೌನ್ ಶಿಪ್ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಲಕ್ಷ್ಮಣ ಟಾಂಗ್‌..! #pratidhvani

ಕುಮಾರಸ್ವಾಮಿ ಅವರು ಯಾವ ಕಾರಣಕ್ಕೆ ರೆಡ್ ಜೋನ್ ಮಾಡಿದರು? ಅಲ್ಲಿ ಯಾವ ಅಭಿವೃದ್ಧಿ ಆಗಬಾರದು ಎಂಬ ಉದ್ದೇಶ. 2011ರಲ್ಲಿ ಸದಾನಂದ ಗೌಡರು ಸಿಎಂ ಆಗಿದ್ದಾಗ, 912 ಎಕರೆ ಜಾಗವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳಿಗೆ ಹಂಚಿಕೆ ಮಾಡಲಾಗಿದೆ. ಆಗ ರೈತರಿಗೆ ಪರಿಹಾರವಾಗಿ ನೀಡಿದ್ದು, ಪ್ರತಿ ಎಕರೆಗೆ 60-80 ಲಕ್ಷ ರೂ. ಮಾತ್ರ. ಈ ಎಲ್ಲಾ ಜಾಗವೂ ತೆಂಗು ಹಾಗೂ ಅಡಕೆ ತೋಟವೇ. ಈ ಪ್ರಕ್ರಿಯೆ ವೇಳೆ ಕುಮಾರಸ್ವಾಮಿ ಅವರು ಏನು ಮಾಡುತ್ತಿದ್ದರು? ಬಿಬಿಎಂಪಿ ವ್ಯಾಪ್ತಿಗೆ ಹೊರವಲಯದ ಪ್ರದೇಶಗಳನ್ನು ಸೇರಿಸಿ ರೈತರಿಗೆ ಮೋಸ ಮಾಡಿದ್ದು ನೀವೇ ಅಲ್ಲವೇ? ಆಗ ರೈತರ ಮೇಲೆ ನಿಮ್ಮ ಕನಿಕರ ಎಲ್ಲಿ ಹೋಗಿತ್ತು? ಈಗ ಶಿವಕುಮಾರ್ ಅವರ ಘನತೆ ಕುಗ್ಗಿಸಲು ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದಾರೆ. ಶಿವಕುಮಾರ್ ಅವರು ಸಿಎಂ ಆದ ಬಳಿಕ ಕುಮಾರಸ್ವಾಮಿ ಹಾಗೂ ಅಶೋಕ್ ಅವರಿಗೆ ನಿದ್ದೆ ಬರುತ್ತಿಲ್ಲ. ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಂ. ಲಕ್ಷ್ಮಣ್ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಆರೋಪಿಸಿದರು.

ಆರ್‌.ಅಶೋಕ್ ನಾಲಾಯಕ್ ವಿರೋಧ ಪಕ್ಷದ ನಾಯಕರು

ಇನ್ನು ಆರ್‌.ಅಶೋಕ್ ಅವರು ನಾಲಾಯಕ್ ವಿರೋಧ ಪಕ್ಷದ ನಾಯಕರು. ಬಾಯಿಗೆ ಬಂದಂತೆ ಸುಳ್ಳು ಹೇಳುತ್ತಾರೆ. ಇಂತಹ ಸುಳ್ಳು ಹೇಳುವ ವ್ಯಕ್ತಿ ಪ್ರಪಂಚದಲ್ಲೇ ಯಾರು ಇಲ್ಲವೇನೋ. ಸುಳ್ಳು ಹೇಳುವುದರಲ್ಲಿ ಪಿಹೆಚ್ಡಿ ಮಾಡಿಕೊಂಡಿದ್ದಾರೆ. ಕಸದ ಬಗ್ಗೆ ಮಾತನಾಡಿ 39 ಸಾವಿರ ಕೋಟಿ ಹಗರಣ ಎಂದು ಆರೋಪ ಮಾಡಿದರು, ದಾಖಲೆ ಮಾತ್ರ ಬಿಡುಗಡೆ ಮಾಡಲಿಲ್ಲ. ಸುಳ್ಳು ಹೇಳುವುದರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ಆರ್‌.ಅಶೋಕ್ ವಿರುದ್ಧ ಕಿಡಿಕಾರಿದರು.

Chaluvaraya Swamy: ಎಚ್‌​.ಡಿ.ಕುಮಾರಸ್ವಾಮಿಗೆ ಶಾಸಕ ಚಲುವರಾಯಸ್ವಾಮಿ ಸವಾಲು #pratidhvani

ಈ ಬಿಡದಿ ಟೌನ್ ಶಿಪ್ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ರಾಜಕೀಯವಾಗಿ ಒಳಿಸಿಕೊಳ್ಳುವ ಪ್ರಯತ್ನ ಮಾಡಬಹುದು. ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ಮಾಡಲಾಗುತ್ತಿದೆ. ಈ ಯೋಜನೆಯಿಂದ ಮುಂದೆ ಜನರಿಗೆ ಅನ್ಯಾಯವಾಗುತ್ತದೆ ಎಂದು ಅನಿಸಿದರೆ ಅದಕ್ಕೆ ದಾಖಲೆ ಬಿಡುಗಡೆ ಮಾಡಿ. ಈ ಯೋಜನೆ ವಿರುದ್ಧ ಧರಣಿ ಮಾಡುತ್ತಿರುವ ಜನರಲ್ಲಿ ಕೆಲವು ನೈಜ್ಯ ರೈತರೂ ಇರಬಹುದು. ಈ ಹೋರಾಟಕ್ಕೆ ಕರೆತಂದಿದ್ದವರು ಯಾರು? ರಾಜಕೀಯವಾಗಿ ಸಂಪೂರ್ಣವಾಗಿ ಕಳೆದು ಹೋಗುತ್ತೇವೆ ಎಂಬ ಉದ್ದೇಶದಿಂದ, ಜೆಡಿಎಸ್ ಕಾರ್ಯಕರ್ತರನ್ನು ಕರೆತಂದು ಹಸಿರು ಶಾಲು ಹಾಕಿ ಹೋರಾಟ ಮಾಡುತ್ತಿದ್ದಾರೆ.

ಈ ಯೋಜನೆ ನಿಮ್ಮ ಕೂಸು, ನಮ್ಮದಲ್ಲ. ಈ ಕೂಸು ಹುಟ್ಟಿದ್ದು ನಿಮ್ಮ ಆಡಳಿತ ಅವಧಿಯಲ್ಲಿ, ಇದು ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ. ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್.ಅಶೋಕ್ ಅವರು. 2006ರಿಂದ ಅವರು ಇದ ಜವಾಬ್ದಾರಿ ಭಾಗವಾಗಿದ್ದರು, ಕಂದಾಯ ಸಚಿವರೂ ಆಗಿದ್ದರು. ಅವರ ಜಾಗವು ಈ ಭಾಗದಲ್ಲಿದೆ. ಅವರು ಅವರ ಪಾಡಿಗೆ ಹೋರಾಟ ಮಾಡುತ್ತಾರೆ, ಇವರು ಇವರ ಪಾಡಿಗೆ ಹೋರಾಟ ಮಾಡುತ್ತಾರೆ. ಇದು ದುರಂತ. ಇದೆಲ್ಲದಕ್ಕೂ ರಾಜ್ಯ ಸರ್ಕಾರ ಅಂತ್ಯವಾಡುತ್ತದೆ ಎಂದು ಭಾವಿಸಿದ್ದೇನೆ ಎಂದರು.

Priyank Kharge : ಬಿಜೆಪಿಯವ್ರಿಗೆ ಕಾಮನ್‌ ಸೆನ್ಸ್‌ ಇದ್ಯಾ? ಅವ್ರ ಮಾತು ಕೇಳಿ ಕೆಲ್ಸ ಮಾಡೋಕಾಗಲ್ಲ..! #bjp
Previous Post

ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ

Next Post

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

Related Posts

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ
Top Story

ಕೇಂದ್ರದ ಕಠಿಣ ಕ್ರಮ: ಜೂನ್ 22ರವರೆಗೆ ಟೆಲಿಗ್ರಾಂ ನಿರ್ಬಂಧ: ಯಾಕೆ ಗೊತ್ತೆ 

by ಪ್ರತಿಧ್ವನಿ
June 16, 2026
0

ನೀಟ್-ಯುಜಿ 2026 ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡುವ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಗೆ ತಾತ್ಕಾಲಿಕ...

Read moreDetails
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

June 16, 2026
ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

June 16, 2026
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

June 16, 2026
Next Post
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada