• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket Fight..!

Any Mind by Any Mind
March 18, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket  Fight..!
Share on WhatsAppShare on FacebookShare on Telegram

ADVERTISEMENT

ಕೃಷ್ಣಮಣಿ

ಬೆಂಗಳೂರು: ಮಾ;18: ವಿಧಾನಸಭಾ ಚುನಾವಣೆ ಗೆಲ್ಲಲ್ಲೇಬೇಕು ಅನ್ನೋ ಹಠಕ್ಕೆ ಬಿದ್ದಿರುವ ಕಾಂಗ್ರೆಸ್​ ಟಿಕೆಟ್​​ ಹಂಚಿಕೆ ವಿಚಾರದಲ್ಲಿ ಜಾಣ ಹೆಜ್ಜೆಯನ್ನಿಡಲು ನಿರ್ಧಾರ ಮಾಡಿದೆ. ಇದೀಗ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಚರ್ಚೆ ಆದ ಬಳಿಕ ಅಂತಿಮವಾಗಿ ಟಿಕೆಟ್​ ಘೋಷಣೆ ಮಾಡಲು ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮತ್ವದ ಸಭೆ ನಡೆದಿದ್ದು, ಯಾರಿಗೆ ಟಿಕೆಟ್​ ಕೊಟ್ಟರೆ ಗೆಲ್ಲುವ ಅವಕಾಶವಿದೆ. ಯಾರು ಬಂಡಾಯ ಏಳುತ್ತಾರೆ..? ಯಾರನ್ನು ಸಮಾಧಾನ ಮಾಡಲು ಏನು ಮಾಡ್ಬೇಕು..? ಈಗ ಎಷ್ಟು ಕ್ಷೇತ್ರಗಳ ಟಿಕೆಟ್​ ಘೋಷಣೆ ಮಾಡಿದರೆ ಗೊಂದಲಕ್ಕೆ ಅವಕಾಶ ಕೊಡಂತೆ ಮುಂದುವರಿಯಬಹುದು ಅನ್ನೋ ಬಗ್ಗೆ ಗಹನವಾದ ಚರ್ಚೆ ನಡೆಸಿದ್ದು, ಅಂತಿಮವಾಗಿ ಆರೇಳು ಶಾಸಕರಿಗೆ ಟಿಕೆಟ್​ ಕೊಟ್ಟರೆ ಸೋಲು ಕಟ್ಟಿಟ್ಟ ಬುತ್ತಿ ಎನ್ನುವ ನಿರ್ಧಾರಕ್ಕೆ ಕಾಂಗ್ರೆಸ್​ ಹೈಕಮಾಂಡ್​ ಅಂಗಳ ನಿರ್ಧಾರ ಮಾಡಿದೆ.

185 ಕ್ಷೇತ್ರದ ಬಗ್ಗೆ ಚರ್ಚೆ 125 ಟಿಕೆಟ್​ ಫೈನಲ್​..!

ಶುಕ್ರವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ 224 ಕ್ಷೇತ್ರಗಳ ಪೈಕಿ 185 ಕ್ಷೇತ್ರದ ಟಿಕೆಟ್​ ಆಕಾಂಕ್ಷಿತರು ಹಾಗು ಸಮೀಕ್ಷೆಯಲ್ಲಿ ಗೆಲ್ಲುವ ಅವಕಾಶ ಇರುವ ಅಭ್ಯರ್ಥಿ ಯಾರು ಅನ್ನೋ ಬಗ್ಗೆ ಚರ್ಚೆ ನಡೆಸಿ, ಅಂತಿಮವಾಗಿ ಏಳು ಮಂದಿ ಹಾಲಿ ಶಾಸಕರಿಗೆ ಟಿಕೆಟ್​ ನೀಡುವುದಕ್ಕೆ ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದು, ಒಟ್ಟು ಮೊದಲ ಹಂತದಲ್ಲಿ 125 ಕ್ಷೇತ್ರಗಳ ಟಿಕೆಟ್​ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ. ಮಾರ್ಚ್ 22ರಂದು ಹಿಂದೂಗಳ ಪಾಲಿಗೆ ಹೊಸ ವರ್ಷ ಆಗಿದ್ದು, ಅಂದೇ ಕಾಂಗ್ರೆಸ್​ ತನ್ನ ಮೊದಲ ಪಟ್ಟಿ ‌ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳ ಟಿಕೆಟ್​ ಬಗ್ಗೆ ಮತ್ತೊಮ್ಮೆ ಸ್ಕ್ರೀನಿಂಗ್ ಕಮಿಟಿ‌ ಸಭೆ ನಡೆಸಿ ದೆಹಲಿಯಲ್ಲಿ ಮತ್ತೊಮ್ಮೆ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಆದ್ರೆ ಹಾಲಿ ಶಾಸಕರಿಗೆ ಟಿಕೆಟ್​ ಕೊಡದೆ ಇದ್ದರೆ ಬೇರೊಂದು ಪಕ್ಷದ ಬಾಗಿಲು ತಟ್ಟುವುದಿಲ್ಲವೇ ಎನ್ನುವ ಚರ್ಚೆಯೂ ನಡೆದಿದೆ.

ಹಾಲಿ ಆರೇಳು ಜನ ಶಾಸಕರಿಗೆ ಟಿಕೆಟ್ ಮಿಸ್​..

ಈಗಾಗಲೇ ಪ್ರತೊಯೊಬ್ಬ ಹಾಲಿ ಶಾಸಕನೂ ನನಗೆ ಟಿಕೆಟ್​ ಸಿಗಲಿದೆ ಎನ್ನುವ ನಂಬಿಕೆಯಲ್ಲಿ ಪ್ರಚಾರ ಸೇರಿದಂತೆ ಸಾಕಷ್ಟು ವೆಚ್ಚ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಜನರನ್ನು ತಲುಪುವ ಉದ್ದೇಶದಿಂದ ಒಂದೆರಡು ಸುತ್ತು ರೌಂಡ್ಸ್​ ಕೂಡ ಹಾಕಿರುತ್ತಾರೆ. ಇದೀಗ ಟಿಕೆಟ್​ ಸಿಗಲ್ಲ ಎನ್ನುವುದು ಗೊತ್ತಾದರೆ ಬೇರೆ ಪಕ್ಷದ ಕಡೆಗೆ ಮುಖ ಮಾಡುವ ಸಾಧ್ಯತೆಯೂ ಇದೆ. ಸದ್ಯಕ್ಕೆ ಕಾಂಗ್ರೆಸ್​ನಲ್ಲಿ ಕಲ್ಬುರ್ಗಿ ಉತ್ತರ ಕ್ಷೇತ್ರದ ಶಾಸಕ ಖನಿಜ್ ಫಾತಿಮಾ, ಹರಿಹರದ ರಾಮಪ್ಪ, ಅಫಜಲಪುರ ಕ್ಷೇತ್ರದ ಎಂ ವೈ ಪಾಟೀಲ್, ಕುಂದಗೋಳದ ಕುಸುಮಾ ಶಿವಳ್ಳಿ, ಲಿಂಗಸುಗೂರು ಕ್ಷೇತ್ರದ ಡಿ ಎಸ್ ಹುಲಗೇರಿ, ಶಿಡ್ಲಘಟ್ಟದ ವಿ ಮುನಿಯಪ್ಪಗೆ ಟಿಕೆಟ್​ ಸಿಗಲ್ಲ ಎನ್ನುವ ಮಾಹಿತಿ ದೆಹಲಿ ಮೂಲಗಳಿಂದ ಪ್ರತಿಧ್ವನಿಗೆ ಲಭ್ಯವಾಗಿದೆ. ಆದರೆ ಟಿಕೆಟ್ ವಂಚಿತರನ್ನು ಸಮಾಧಾನ ಮಾಡಲು ಕಾಂಗ್ರೆಸ್​ ನಾಯಕರು ಒಂದು ಉಪಾಯ ಮಾಡಿಕೊಂಡಿದ್ದು, ಟಿಕೆಟ್​ ಆಕಾಂಕ್ಷಿತರಲ್ಲಿ ತಾವು ಹೇಳಿದ ಅಭ್ಯರ್ಥಿಗೆ ಟಿಕೆಟ್​ ನೀಡಲಾಗುತ್ತದೆ ಎನ್ನುವ ಮೂಲಕ ಮೂಗಿಗೆ ತುಪ್ಪ ಸವರುವ ಯತ್ನಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯ ಗೆಲುವಿಗಾಗಿ ಮುನಿಯಪ್ಪಗೆ ಅವಕಾಶ..!

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅಖಾಡಕ್ಕೆ ಧುಮುಕುವುದು ಖಚಿತವಾಗಿದೆ. ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಬಲ ಇಲ್ಲದೆ ಇದ್ದರೆ ಕೋಲಾರದಲ್ಲಿ ಗೆಲುವು ಕಷ್ಟ ಸಾಧ್ಯ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಉದ್ದೇಶಪೂರ್ವಕಾಗಿ ಕಾಂಗ್ರೆಸ್ ನಾಯಕರೇ ಸೋಲಿಸಿದರು ಅನ್ನೋ ಆರೋಪ ಇರುವ ಕಾರಣಕ್ಕೆ ಕೆ.ಹೆಚ್​ ಮುನಿಯಪ್ಪ​ ಸ್ಪರ್ಧೆ ಮಾಡಲು ಬಯಸಿದರೆ ಟಿಕೆಟ್ ನೀಡಲು ಕಾಂಗ್ರೆಸ್ ತಯಾರಿದೆ. ಕೆ.ಹೆಚ್​ ಮುನಿಯಪ್ಪ ಕೇಳಿದ ಕ್ಷೇತ್ರದಿಂದ ನೀಡಲು ಸಿದ್ದ ಎನ್ನುವ ಸಂದೇಶ ರವಾನೆಯಾಗಿದೆ. ಆದರೆ ಕೆ.ಹೆಚ್​ ಮುನಿಯಪ್ಪ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಬಾರದು ಅನ್ನೋ ಕಾರಣಕ್ಕೆ ಕಾಂಗ್ರೆಸ್​​ ಈ ಲೆಕ್ಕಾಚಾರ ಮಾಡುತ್ತಿದೆ ಎನ್ನುವುದು ದೆಹಲಿ ಮಾಹಿತಿ. …..

Tags: BJPBJP GovernmentBJP MLACongress PartyDelhiDKShivakumarElectionkarnatkanewsMallikarjun KhargeRahul GandhisiddaramaiahSiddaramaihasidduಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH

Next Post

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ..ಅಭಿವೃದ್ಧಿ ಪಥದಲ್ಲಿ ಹೊರಗುಳಿದವರ  ಬಗ್ಗೆ ಯೋಚಿಸುವುದು ಜನಪ್ರತಿನಿಧಿಗಳ ಕರ್ತವ್ಯ : Bengaluru-Mysuru Expressway

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ..ಅಭಿವೃದ್ಧಿ ಪಥದಲ್ಲಿ ಹೊರಗುಳಿದವರ  ಬಗ್ಗೆ ಯೋಚಿಸುವುದು ಜನಪ್ರತಿನಿಧಿಗಳ ಕರ್ತವ್ಯ : Bengaluru-Mysuru Expressway

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ..ಅಭಿವೃದ್ಧಿ ಪಥದಲ್ಲಿ ಹೊರಗುಳಿದವರ  ಬಗ್ಗೆ ಯೋಚಿಸುವುದು ಜನಪ್ರತಿನಿಧಿಗಳ ಕರ್ತವ್ಯ : Bengaluru-Mysuru Expressway

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada