• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯನ ರಾಜೀನಾಮೆ ಕೇಳದಂತೆ ಕಾಂಗ್ರೆಸ್​ ಅಸ್ತ್ರ..!

ಕೃಷ್ಣ ಮಣಿ by ಕೃಷ್ಣ ಮಣಿ
September 30, 2024
in Top Story, ಕರ್ನಾಟಕ, ದೇಶ, ರಾಜಕೀಯ, ಶೋಧ
0
ಸಿದ್ದರಾಮಯ್ಯನ ರಾಜೀನಾಮೆ ಕೇಳದಂತೆ ಕಾಂಗ್ರೆಸ್​ ಅಸ್ತ್ರ..!
Share on WhatsAppShare on FacebookShare on Telegram

ADVERTISEMENT

ಮುಡಾ ಹಗರಣದಲ್ಲಿ ಖಾಸಗಿ ದೂರು ಒಂದು ಕಡೆಯಾದರೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದನ್ನು ಹೈಕೋರ್ಟ್​ ಎತ್ತಿ ಹಿಡಿಯುವ ಕೆಲಸ ಮಾಡಿತ್ತು. ಆ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅನ್ನೋ ಆಕ್ರೋಶ ಹೆಚ್ಚಾಗಿತ್ತು. ಬಿಜೆಪಿ-ಜೆಡಿಎಸ್​ ಎರಡೂ ಪಕ್ಷಗಳ ನಾಯಕರು ರಾಜೀನಾಮೆಗೆ ಆಗ್ರಹ ಮಾಡಿದ್ದರು. ಆದರೆ ಕಾಂಗ್ರೆಸ್​ ಸರ್ಕಾರ ಒಂದೆರಡು ದಿನದಲ್ಲಿ ಮೈತ್ರಿ ನಾಯಕರ ಬಾಯಿ ಮುಚ್ಚಿಸುವಲ್ಲಿ ಸಫಲವಾಗಿದೆ. ಇದೀಗ ಬಿಜೆಪಿ ನಾಯಕರು ಸಿದ್ದರಾಮಯ್ಯ ರಾಜೀನಾಮೆ ಕೇಳುವುದನ್ನು ಸ್ವತಃ ತಾವೇ ಬಿಟ್ಟು ಬಿಡುವಂತಾಗಿದೆ. ಒಂದು ವೇಳೆ ರಾಜೀನಾಮೆ ಕೇಳಿದರೆ ಕಾಂಗ್ರೆಸ್​ ಸರ್ಕಾರ ಹೂಡಿರುವ ಬಲೆಯಲ್ಲಿ ಸಿಕ್ಕಿ ಬೀಳುತ್ತಾರೆ.

ಕೇಂದ್ರ ಸರ್ಕಾರ ನಡೆಸಿದ ಚುನಾವಣಾ ಬಾಂಡ್​​ ಅಕ್ರಮ ಎಂದು ಈಗಾಗಲೇ ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟು ಎಲೆಕ್ಷನ್​ ಬಾಂಡ್​ ಖರೀದಿಗೆ ತಡೆ ನೀಡಿದೆ. ಇನ್ನು ಯಾವೆಲ್ಲಾ ಕಂಪನಿಗಳು ಎಷ್ಟು ಹಣವನ್ನು ಚುನಾವಣಾ ಬಾಂಡ್​ ಮೂಲಕ ಖರೀದಿ ಮಾಡಿದ್ದಾರೆ ಎನ್ನುವುದನ್ನು ಬಹಿರಂಗ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ಅದರಂತೆ ಈಗಾಗಲೇ ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಲಿಸ್ಟ್​ ಹಾಕಲಾಗಿದೆ. ಈ ನಡುವೆ ರಾಜ್ಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹಾಗು ಜಾರಿ ನಿರ್ದೇಶನಾಲಯದ ವಿರುದ್ಧ ದೂರು ದಾಖಲಾಗಿದೆ.

ತಿಲಕ್​ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲು ಆಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೇಳುವುದಾದರೆ ನಿರ್ಮಲಾ ಸೀತಾರಾಮನ್​ ಅವರ ರಾಜೀನಾಮೆಯನ್ನು ಸ್ವತಃ ಬಿಜೆಪಿ, ಜೆಡಿಎಸ್​ ನಾಯಕರೇ ಕೇಳಬೇಕಿದೆ. ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದಂತೆ ನಿರ್ಮಲಾ ವಿರುದ್ಧವೂ ಖಾಸಗಿ ದೂರು ದಾಖಲು ಮಾಡಿ, ತನಿಖೆ ಮಾಡುವಂತೆ ಕೋರ್ಟ್​ ಸೂಚನೆ ಕೊಟ್ಟಿದೆ. ಇದೀಗ ನಿರ್ಮಲಾ ಸೀತಾರಾಮನ್​ ಅವರನ್ನು ವಿಚಾರಣೆಗೆ ಕರೆಯಲು ನೋಟಿಸ್​ ನೀಡುವ ತಯಾರಿಯಲ್ಲಿದೆ ಪೊಲೀಸ್​ ಇಲಾಖೆ. ಜನಾಧಿಕಾರ ಸಂಘರ್ಷ ಸಮಿತಿ ದಾಖಲಿಸಿದ್ದ ಕೇಸ್​ ವಿಚಾರಣೆ ನಡೆಸಿದ್ದ MP MLA ಕೋರ್ಟ್​ FIR ದಾಖಲು ಮಾಡಿ ತನಿಖೆಗೆ ಸೂಚನೆ ನೀಡಿತ್ತು.

ಶುಕ್ರವಾರ ಕೋರ್ಟ್​ ಆದೇಶ ಆಗುತ್ತಿದ್ದಂತೆ ಶನಿವಾರ ಎಫ್​ಐಆರ್​ ಆಗಿದೆ. ಭಾನುವಾರ ರಾಜೀನಾಮೆ ಕೇಳುವ ಬಿಜೆಪಿ ನಾಯಕರ ಸಂಖ್ಯೆ ಇಳಿಮುಖವಾಗಿದೆ. ಇನ್ಮುಂದೆ ಎಫ್​ಐಆರ್​ ಆಗಿದೆ ಎನ್ನುವ ಕಾರಣಕ್ಕೆ ರಾಜೀನಾಮೆ ಕೇಳಿದರೆ. ಮೊದಲು ನಿರ್ಮಲಾ ಸೀತಾರಾಮನ್​ ರಾಜೀನಾಮೆ ಕೇಳಿ ಎನ್ನುವುದು ಕಾಂಗ್ರೆಸ್​ ಕೊಡುವ ರೆಡಿಮೇಡ್​ ಉತ್ತರ ಆಗಿರಲಿದೆ. ಎಫ್​ಐಆರ್​ ಅಷ್ಟೇ ಆಗಿದೆ, ತನಿಖೆ ನಡೆಸಲಿ, ಚಾರ್ಜ್​ ಶೀಟ್​ ಹಾಕಲಿ ಎಂದು ಬಿಜೆಪಿ ನಾಯಕರು ಹೇಳಿದರೆ ಸಿದ್ದರಾಮಯ್ಯಗೂ ಅದೇ ರೀತಿ ತನಿಖೆ ನಡೆದು ಚಾರ್ಜ್​ಶೀಟ್​​ ಹಾಕಲಿ, ಅಲ್ಲೀವರೆಗೂ ತಾಳ್ಮೆಯಿಂದ ಇರಿ ಎನ್ನುವ ತಿರುಗೇಟು ಕಾಂಗ್ರೆಸ್​ ಕಡೆಯಿಂದ ಬರುವುದು ಶತಸಿದ್ಧ. ಒಟ್ಟಾರೆ ಬಿಜೆಪಿ ಆರ್ಭಟವನ್ನು ಕಾಂಗ್ರೆಸ್​ ಒಂದೆರಡು ದಿನದಲ್ಲಿ ತಣಿಸಿದೆ ಎನ್ನುವುದು ಮಾತ್ರ ಸತ್ಯ.

Tags: BJPCM SiddaramaiahCongress Partydarshan vs kumaraswamydk shivakumar vs hd kumaraswamydk shivakumar vs siddaramaiahhd kumaraswamy on siddaramaiahhd kumaraswamy slams siddaramaiahhd kumaraswamy vs dk shivakumarhd kumaraswamy vs siddaramaiahhd kumarswamyhd kumarswamy siddaramaiahhdkumarswamykumaraswamy vs siddaramaiahsiddaramaiahsiddaramaiah hd kumaraswamysiddaramaiah newssiddaramaiah vs dk shivakumarsiddaramaiah vs hd kumaraswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೆಲೆಬ್ರಿಟಿ ಶೋ ವೇಳೆ ಅಚಾನಕ್​ ಘಟನೆ.. ಬೆಚ್ಚಿ ಬಿದ್ದ ಸ್ಟಾರ್ಸ್​​..

Next Post

ನೂತನ ಕಮ್ಯಾಂಡರ್ ಆಗಿ ನೇಮಕವಾದ 9 ತಾಸಿನಲ್ಲೇ ಹಿಜ್ಬುಲ್ಲಾ ಉಗ್ರನ ಹತ್ಯೆ!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ನೂತನ ಕಮ್ಯಾಂಡರ್ ಆಗಿ ನೇಮಕವಾದ 9 ತಾಸಿನಲ್ಲೇ ಹಿಜ್ಬುಲ್ಲಾ ಉಗ್ರನ ಹತ್ಯೆ!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada