• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್ ಗೆಲ್ಲಲು ಪಂಚ ಸೂತ್ರಗಳ ಮೊರೆ ಹೋದ ಕಾಂಗ್ರೆಸ್

ಯದುನಂದನ by ಯದುನಂದನ
July 6, 2022
in ದೇಶ
0
ಗುಜರಾತ್ ಗೆಲ್ಲಲು ಪಂಚ ಸೂತ್ರಗಳ ಮೊರೆ ಹೋದ ಕಾಂಗ್ರೆಸ್
Share on WhatsAppShare on FacebookShare on Telegram

2014ರ ಲೋಕಸಭೆ ಚುನಾವಣೆ ಬಳಿಕ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಬಿಟ್ಟು ಉಳಿದೆಲ್ಲಾ ವಿಧಾನಸಭಾ ಚುನಾವಣೆಗಳನ್ನು ಹಾಗೂ 2019ರ ಲೋಕಸಭಾ ಚುನಾವಣೆಯನ್ನು ಸೋತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಗೆಲುವು ಅತ್ಯಗತ್ಯವಾಗಿದೆ. ಅದರಲ್ಲೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರಾದ ಗುಜರಾತ್ ಗೆಲುವು ಅತಿಹೆಚ್ಚು ಅಗತ್ಯವಾದುದಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಗಹನವಾದ ಚರ್ಚೆ ನಡೆಸಿದ್ದಾರೆ.

ADVERTISEMENT

ಕಳೆದ ಬಾರಿ ಕಾಂಗ್ರೆಸ್ ಪಕ್ಷ ಕೂದಲೆಳೆಯ ಅಂತರದಿಂದ ಗುಜರಾತ್ ಗೆಲುವನ್ನು ಕಳೆದುಕೊಂಡಿತ್ತು. ಈ ಬಾರಿ ಗೆಲುವು ಸಾಧ್ಯವೇ ಇಲ್ಲ ಎಂಬ ಮಾತುಗಳು ಎಲ್ಲೆಡೆಯಿಂದ ಕೇಳಿಬರುತ್ತಿವೆ. ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲೂ ಗೆಲುವನ್ನು ದಕ್ಕಿಸಿಕೊಳ್ಳಲೇಬೇಕು ಎಂದು ಕಾಂಗ್ರೆಸ್ ಪಣ ತೊಟ್ಟಿದೆ. ಹಾಗಾಗಿ ಸೋಮವಾರ ಹಿರಿಯ ನಾಯಕರಾದ ಪ್ರಿಯಾಂಕಾ ಗಾಂಧಿ, ಪಿ. ಚಿದಂಬರಂ, ಕೆ.ಸಿ.‌ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಅಜಯ್ ಮಾಕೇನ್ ಸಮಾಲೋಚನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ತಂತ್ರಜ್ಞ ಸುನಿಲ್ ಕನುಗೋಲು ಕೂಡ ಸಲಹೆ ನೀಡಿದ್ದಾರೆ.

‘ಪ್ರತಿಧ್ವನಿ’ಗೆ ಲಭಿಸಿರುವ ಮಾಹಿತಿಗಳ ಪ್ರಕಾರ ಸೋಮವಾರದ ಸಮಾಲೋಚನೆಯಲ್ಲಿ ಕಾಂಗ್ರೆಸ್ ನಾಯಕರು ಗುಜರಾತ್ ಚುನಾವಣೆ ಗೆಲ್ಲಲು ಐದು ಅಂಶಗಳ ಮೇಲೆ ನಿಗಾ ಇರಿಸಬೇಕು ಎಂದು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.

ಮೋದಿ ಕೇಂದ್ರಿತ ಚುನಾವಣೆ ಬೇಡ

ಕಳೆದ ಬಾರಿ ಕಾಂಗ್ರೆಸ್ ಸೋಲಲು ಮೋದಿ ಕೇಂದ್ರಿತ ಚುನಾವಣೆ ನಡೆಸಿದ್ದೇ ಪ್ರಮುಖ ಕಾರಣ. ಚುನಾವಣೆ ಉದ್ದಕ್ಕೂ ಮೋದಿಯನ್ನೇ ಗುರಿಯಾಗಿಸಿಕೊಂಡರೆ ಪರೋಕ್ಷವಾಗಿ ಇದರಿಂದ ಬಿಜೆಪಿಗೆ ಸಹಕಾರಿ ಆಗಲಿದೆ. ಮೋದಿಗೆ ‘ತಾನು ಗುಜರಾತಿ’ ಎಂಬ ಕಾರ್ಡ್ ಪ್ಲೇ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಗುಜರಾತ್ ಅಸ್ಮಿತೆ ಮೊದಿ ಪರವಾಗಿ ಕೆಲಸ ಮಾಡುತ್ತದೆ. ಆದುದರಿಂದ ಈ ಬಾರಿ ಮುಖ್ಯಮಂತ್ರಿಯೂ ಸೇರಿದಂತೆ ಮತ್ತಿತರ ಸ್ಥಳೀಯ ನಾಯಕರ ವೈಫಲ್ಯಗಳ ಬಗ್ಗೆ ಮಾತ್ರ ಚರ್ಚೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರದ ವೈಫಲ್ಯವೇ ಅಸ್ತ್ರ

ಗುಜರಾತಿನಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅಥವಾ ವೈಫಲ್ಯದ ಬಗ್ಗೆ ಮಾತನಾಡುವ ಬದಲು ರಾಜ್ಯ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಗಳ ಬಗ್ಗೆ ಮಾತನಾಡಬೇಕು. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಅಪೌಷ್ಟಿಕತೆ ಎದ್ದು ಕಾಣುತ್ತಿದೆ. ದಿನದಿಂದ ದಿನಕ್ಕೆ ಬಡತನದ ರೇಖೆಗಿಂತ ಕೆಳಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ರೀತಿಯ ವಿಷಯಗಳನ್ನು ಚುನಾವಣಾ ವಿಷಯಗಳನ್ನಾಗಿ ಪರಿವರ್ತಿಸಬೇಕು ಎಂದು ತೀರ್ಮಾನಿಸಲಾಗಿದೆ.

ಆಮ್ ಆದ್ಮಿ ಪಕ್ಷದ ಬಗ್ಗೆ ಎಚ್ಚರ

ಈ ಬಾರಿ ಆಮ್ ಆದ್ಮಿ ಪಕ್ಷವು ಗುಜರಾತ್ ವಿಧಾನಸಭಾ ಚುನಾವಣಾ ಕಣದಲ್ಲಿ ಇರುವುದರ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಲು ಕಾಂಗ್ರೆಸ್ ನಿರ್ಧರಿಸಿದೆ. ಏಕೆಂದರೆ ‌ಮೊದಲನೆಯದಾಗಿ ಆಮ್ ಆದ್ಮಿ ಪಕ್ಷ ತನ್ನ ಮತಬ್ಯಾಂಕಿಗೆ ಕೈಹಾಕುತ್ತದೆ ಎಂದು. ಎರಡನೇಯದಾಗಿ ಆಡಳಿತವಿರೋಧಿ ಮತಗಳು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಚದುರಿಹೋದರೆ ಆಗಲೂ ಬಿಜೆಪಿಗೆ ನೆರವಾಗುತ್ತದೆ ಎಂದು. ಈ ಹಿನ್ನೆಲೆಯಲ್ಲಿ ತನ್ನ ಮತಗಳನ್ನು ತನ್ನಲ್ಲೇ ಉಳಿಸಿಕೊಳ್ಳಲು‌ ತಂತ್ರ ರೂಪಿಸಬೇಕು. ಆಡಳಿತವಿರೋಧಿ ಮತಗಳು ತನ್ನತ್ತ ಬರುವಂತೆ ಮಾಡಬೇಕು. ಅದಕ್ಕಾಗಿ ಆಮ್ ಆದ್ಮಿ ಪಕ್ಷ ಪಂಜಾಬಿನಲ್ಲಿ ವೈಫಲ್ಯವಾಗಿರುವುದನ್ನು ಜನರಿಗೆ ತಿಳಿಸಬೇಕು. ಆಮ್ ಆದ್ಮಿ ಪಕ್ಷ ಬಿಜೆಪಿಯ ಬಿ‌ ಟೀಂ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು‌ ನಿರ್ಧಾರ ಮಾಡಲಾಗಿದೆ.

ಪಾಟೀದಾರ್ ಸಮುದಾಯ ಉಳಿಸಿಕೊಳ್ಳಲು ಪ್ರಯತ್ನ

ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಇತ್ತೀಚೆಗೆ ಕಾಂಗ್ರೆಸ್ ತ್ಯಜಿಸಿರುವುದು ಪಕ್ಷಕ್ಕೆ ಸ್ವಲ್ಪ ನಷ್ಟವಾಗಲಿದೆ. ಪಾಟೀದಾರರು ಮೂಲತಃ ಬಿಜೆಪಿ ಮತದಾರರು. ಕಳೆದ ಬಾರಿ ಹಾರ್ದಿಕ್ ಪಟೇಲ್ ಕಾರಣಕ್ಕೆ ಸ್ವಲ್ಪ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರು. ಈಗ ಹಾರ್ದಿಕ್ ಪಟೇಲ್ ವರ್ಚಸ್ಸು ಮೊದಲಿನಂತಿಲ್ಲ. ಹಾಗಾಗಿ ಹಾರ್ದಿಕ್ ಪಟೇಲ್ ಪಕ್ಷ ಬಿಟ್ಟು ಹೋದರೂ ಅಳಿದುಳಿದ ಪಾಟೀದಾರ್ ಮತಗಳನ್ನು ಕಾಂಗ್ರೆಸಿನಲ್ಲೇ‌ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಬೇಕು ಎಂದು ನಿರ್ಧರಿಸಲಾಗಿದೆ.

ಸತ್ಯ ಮತ್ತು ಅಸತ್ಯದ ನಡುವೆ ಹೋರಾಟ

ದೇಶಾದ್ಯಂತ ಆರ್ ಎಸ್‌ ಎಸ್ ಮತ್ತು ಬಿಜೆಪಿ ಹಲವಾರು ವಿಷಯಗಳಲ್ಲಿ ಸುಳ್ಳುಗಳನ್ನು ಹರಡುತ್ತಿವೆ. ದೇಶ, ಧರ್ಮ, ಗಡಿ, ಸೇನೆ, ಸಂಸ್ಕೃತಿ‌ ಹೆಸರಿನಲ್ಲಿ ಸುಳ್ಳುಗಳನ್ನು ಸೃಷ್ಟಿಸಿ ಯುವಕರನ್ನು ದಾರಿ ತಪ್ಪಿಸುತ್ತಿವೆ. ಬಿಜೆಪಿ ಐಟಿ ಸೆಲ್ ಅನ್ನು ಸುಳ್ಳಿನ ವಿಶ್ವವಿದ್ಯಾನಿಲಯ ಎಂತಲೇ ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈಗ ದೇಶಾದ್ಯಂತ ನಮ್ಮ ಹೋರಾಟ ಅಸತ್ಯದ ವಿರುದ್ಧ ಎಂದು ಹೇಳುತ್ತಿದೆ. ಬಿಜೆಪಿಯ ಅಸತ್ಯದ ವಿರುದ್ಧ ನಾವು ಸತ್ಯವನ್ನೇ ಅಸ್ತ್ರ ಮಾಡಿಕೊಂಡು ಹೋರಾಡುತ್ತೇವೆ ಎಂದು ಹೇಳುತ್ತಿದೆ. ಗುಜರಾತ್ ಚುನಾವಣೆಯಲ್ಲೂ ಇದೇ ರೀತಿಯ ಸತ್ಯ ಮತ್ತು ಅಸತ್ಯದ ನಡುವಿನ ಹೋರಾಟ ನಡೆಸಬೇಕು. ನಾವು ಸತ್ಯದ ಪರ, ಗಾಂಧೀಜಿ ಅವರ ಪರ ಎಂದು ಹೇಳಬೇಕು. ಆ ಮೂಲಕ ಗಾಂಧಿಜೀ ಹೆಸರಿನಲ್ಲಿ ಗುಜರಾತ್ ಅಸ್ಮಿತೆಯನ್ನು ತಮ್ಮ ಪರ ಮಾಡಿಕೊಳ್ಳಬೇಕು. ಬಿಜೆಪಿ ಗಾಂಧಿಯನ್ನು‌ ಕೊಂದ ಗೋಡ್ಸೆ ಪರ ಎಂಬುದನ್ನು ಸಾರಿ ಹೇಳಬೇಕು ಎಂದು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ವಾಯುಪಡೆ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು: ಫೋಟೊ ವೈರಲ್!

Next Post

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada