ರಾಜ್ಯದಲ್ಲಿ ಚುನಾವಣಾ ಕೂಗು ಜೋರಾಗಿದ್ದು, ರಾಜಕೀಯ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಈ ನಡುವೆ ಪಕ್ಷಾಂತರ ಪರ್ವವೂ ಕೂಡ ಜೋರಾಗಿ ನಡೆಯುತ್ತಿದೆ. 2018ರಿಂದ ಜೆಡಿಎಸ್ನಿಂದ (JDS) ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ನಾರಾಯಣ ಗೌಡ (Narayan Gowda) ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ (D.K.Suresh) ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು (Bengaluru) ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಆಗುತ್ತಿದೆ.

20-30 ವರ್ಷ ರಾಜಕೀಯ ಇತಿಹಾಸ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ನಾರಾಯಣ ಗೌಡ ಅವರು ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಅಲ್ಲದೇ ಇವರು ರೈತ ಕುಟುಂಬದ ಪ್ರಮುಖ ನಾಯಕರಾಗಿದ್ದಾರೆ ಎಂದರು. ಕಾಂಗ್ರೆಸ್ನ (Congress) ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪುತ್ತಿದೆ. ಸಮೀಕ್ಷೆಗಳು ಕೂಡಾ ಕಾಂಗ್ರೆಸ್ನ ಪರವಾಗಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಹೆಬ್ಬಾಗಿಲು ತೆರೆಯುತ್ತದೆ. ಈ ಬಾರಿ ಕಾಂಗ್ರೆಸ್ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ವಿಶ್ವಾಸ ವ್ಯಕ್ತಪಡಿಸಿದ್ರು.