• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಾನಗಲ್-ಸಿಂದಗಿ ಉಪಚುನಾವಣೆ; ಎರಡು ಕ್ಷೇತ್ರಗಳಲ್ಲೂ ಗೆಲುವು ಕಾಂಗ್ರೆಸ್ಸಿನದ್ದೇ; ಯಾಕೆ ಗೊತ್ತಾ?

ನಚಿಕೇತು by ನಚಿಕೇತು
October 15, 2021
in ಕರ್ನಾಟಕ
0
ಹಾನಗಲ್-ಸಿಂದಗಿ ಉಪಚುನಾವಣೆ; ಎರಡು ಕ್ಷೇತ್ರಗಳಲ್ಲೂ ಗೆಲುವು ಕಾಂಗ್ರೆಸ್ಸಿನದ್ದೇ; ಯಾಕೆ ಗೊತ್ತಾ?
Share on WhatsAppShare on FacebookShare on Telegram

ರಾಜ್ಯದ ಉಪಚುನಾವಣೆ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಚುನಾವಣಾ ಸಮರದ ಅಖಾಡದಲ್ಲಿ ಲಾಭ ಯಾರಿಗೆ ನಷ್ಟ ಯಾರಿಗೆ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಬಿರುಸುಗೊಂಡಿದೆ. ಅದರಲ್ಲೂ ಹಾನಗಲ್ ಹಾಗೂ ಸಿಂದಗಿ ಎರಡರಲ್ಲೂ ಕಮಲ ಪಡೆಯ ಹಾದಿ ಕಷ್ಟ ಎಂದು ಹೇಳಲಾಗುತ್ತಿದೆಯಾದರೂ ಗೆಲುವಿನ ಓಟದಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದಿದೆ ಎಂಬ ಲೆಕ್ಕಾಚಾರಗಳು ಶುರುವಾಗಿವೆ.

ADVERTISEMENT

ಉಪಚುನಾವಣಾ ಅಖಾಡದಲ್ಲಿ ಇನ್ನು ಸರಿಯಾಗಿ ಪ್ರಚಾರದ ಭರಾಟೆಯೇ ಆರಂಭವಾಗಿಲ್ಲ. ಆಗಲೇ ಈ ಚುನಾವಣಾ ಕದನದ ರಣಾಂಗಣದಲ್ಲಿ ಪಕ್ಷಗಳ ಬಲಾಬಲದ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸುತ್ತಿವೆ. ಚುನಾವಣಾ ಅಖಾಡ ಯಾರಿಗೆ ಲಾಭ ತರಲಿದೆ ಯಾರಿಗೆ ನಷ್ಟ ಉಂಟು ಮಾಡಲಿದೆ ಅನ್ನೋ ಚರ್ಚೆ ಜೋರಾಗಿದೆ.

ಹಾನಗಲ್ನಲ್ಲಿ ಬಿಜೆಪಿ ಹಾದಿ ಕಷ್ಟ ಕಷ್ಟ ಹಾನಗಲ್ನಲ್ಲಿ ರೇವತಿ ಉದಾಸಿಗೆ ಟಿಕೆಟ್ ಕೈ ತಪ್ಪಿರೋ ಕಾರಣಕ್ಕೆ ಉದಾಸಿ ಕುಟುಂಬ ಒಳಪೆಟ್ಟು ನೀಡೋ ಸಾಧ್ಯತೆಯಿದೆ. ನಾಯಕತ್ವ ಬದಲಾವಣೆ ಬಳಿಕ ಲಿಂಗಾಯತ ಮತ ಕ್ರೋಢಿಕರಣ ಕಷ್ಟ ಸಾಧ್ಯವಾಗಿದ್ದು, ಕ್ಷೇತ್ರದಲ್ಲಿ ಪ್ರಬಲವಾಗಿರೋ ಲಿಂಗಾಯುತ ಸಮುದಾಯ ಬಿಎಸ್ವೈ ಆಪ್ತ ಸಜ್ಜನರ ಬಗ್ಗೆ ಗೊಂದಲದಲ್ಲಿದೆ. ಇನ್ನು ಹಾವೇರಿ ಸಿಎಂ ತವರು ಜಿಲ್ಲೆಯಾದ್ರೂ ಬೊಮ್ಮಾಯಿಗೆ ಹಾನಗಲ್ ಕ್ಷೇತ್ರದ ಮೇಲೆ ಅಷ್ಟೊಂದು ಹಿಡಿತವಿಲ್ಲ. ಶಾಸಕರಾಗಿದ್ದ ದಿವಂಗತ ಸಿಎಂ ಉದಾಸಿ ಅನಾರೋಗ್ಯದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಡೆಗಣಿಸಿರೋದು ಸಹ ಪಕ್ಷಕ್ಕೆ ಹಿನ್ನಡೆ ಉಂಟು ಮಾಡೋ ಸಾಧ್ಯತೆಯಿದೆ.

ಹಾನಗಲ್ನಲ್ಲಿ ಕಾಂಗ್ರೆಸ್ v/s ಬಿಜೆಪಿ

2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಕ್ಷೇತ್ರದಲ್ಲಿ ಚಿರಪರಿಚಿತರು. ಕಳೆದ ಚುನಾವಣೆಯಲ್ಲಿ ಮಾನೆ ಕೇವಲ 6514 ಮತಗಳ ಅಂತರದಿಂದಷ್ಟೇ ಪರಾಭವಗೊಂಡಿದ್ದರು. ಇನ್ನು ಶ್ರೀನಿವಾಸ್ ಮಾನೆ ಪರಾಭವಗೊಂಡ ಬಗ್ಗೆ ಕ್ಷೇತ್ರದಲ್ಲಿ ಸಹಾನೂಭುತಿ ಇದೆ. ಸೋತ ಬಳಿಕವೂ ಮಾನೆ ಒಂದೂವರೆ ವರ್ಷದಿಂದ ಕ್ಷೇತ್ರದಲ್ಲಿ ನಿರಂತರ ಸಂಚಾರ ಮಾಡಿದ್ದಾರೆ. ಮತ್ತೊಂದೆಡೆ ಒಗ್ಗಟ್ಟಿನ ಮಂತ್ರ ಜಪಿಸುತ್ತಿರೋ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಬಲಿಷ್ಠವಾಗಿದೆ ಅನ್ನೋ ಸಂದೇಶ ನೀಡುತ್ತಿದ್ದಾರೆ.

ಕಮಲ ಪಡೆಗೆ ಸಿಂದಗಿ ಸವಾಲು ಜೆಡಿಎಸ್ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಬಿಜೆಪಿಗೆ ತರುವುದು ಸುಲಭದ ಮಾತಲ್ಲ. ಮಾಜಿ ಶಾಸಕ ಎಂಸಿ ಮಗೂಳಿ ಪುತ್ರ ಅಶೋಕ್ ಮನಗೂಳಿ ಈಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ಮನಗೂಳಿ ನಿಧನದ ಅನುಕಂಪ ಅವರ ಪುತ್ರನಿಗೆ ಗೆಲುವು ಆಗುವ ಸಾಧ್ಯತೆಯಿದೆ. ಇನ್ನು ಬೈ ಎಲೆಕ್ಷನ್ ಉಸ್ತುವಾರಿಗಳು ಪ್ರಚಾರ ಕಣದಲ್ಲಿ ಸರಿಯಾಗಿ ಗುರುತಿಸಿಕೊಳ್ಳುತ್ತಿಲ್ಲ. ಜೊತೆಗೆ ಬಿಜೆಪಿ ನಾಯಕರಲ್ಲಿ ಬೈ ಎಲೆಕ್ಷನ್ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲ್ಲ ಅನ್ನೋ ಉದಾಸೀನತೆಯಿದ್ದು, ಇದು ಪಕ್ಷಕ್ಕೆ ಪೆಟ್ಟು ನೀಡೋ ಸಾಧ್ಯತೆಯಿದೆ.

ಸಿಂದಗಿಯಲ್ಲಿ ‘ಕೈ’ ಹಿಡಿಯುತ್ತಾ ಅನುಕಂಪ?

ಸಿಂದಗಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿದೆ ಕಾರಣವಾಗುವುದು ಅನುಕಂಪದ ಅಲೆ. ತಂದೆಯ ನಿಧನವನ್ನೇ ಅಶೋಕ್ ಮನಗೂಳಿ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಇತ್ತ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡಿಯೂ ಮೋಡಿ ಮಾಡುತ್ತಿದ್ದು, ಮನಗೂಳಿ ಬದುಕಿದ್ದಾಗ ತಮ್ಮ ಪುತ್ರನನ್ನು ಕಾಂಗ್ರೆಸ್ ತೆಕ್ಕೆಗೆ ಹಾಕಿದ್ರು ಅನ್ನೋ ಹೇಳಿಕೆ ಸಂಚಲನ ಮೂಡಿಸಿದೆ. ಇನ್ನು ಎಂಸಿ ಮನಗೂಳಿ ಸಚಿವರಾಗಿದ್ದಾಗ ಕ್ಷೇತ್ರದಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳು ಅಶೋಕ್ ಮನಗೂಳಿಗೆ ಶ್ರೀರಕ್ಷೆಯಾಗಿವೆ.

ಹಾನಗಲ್ನಲ್ಲಿ ಬಿಜೆಪಿಯಿಂದ ಶಿವರಾಜ ಶರಣಪ್ಪ ಸಜ್ಜನರ, ಕಾಂಗ್ರೆಸ್ನಿಂದ ಶ್ರೀನೀವಾಸ ಮಾನೆ ಹಾಗೂ ಜೆಡಿಎಸ್ನಿಂದ ನಿಯಾಜ್ ಶೇಖ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಪಕ್ಷೇತರರೂ ಸೇರಿದಂತೆ ಈ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಸಸಿದ್ದಾರೆ. ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಭೂಸನೂರ ರಮೇಶ ಬಾಳಪ್ಪ, ಕಾಂಗ್ರೆಸ್ನಿಂದ ಅಶೋಕ ಮನಗೂಳಿ ಹಾಗೂ ಜೆಡಿಎಸ್ನಿಂದ ಅಂಗಡಿ ನಾಜೀಯಾ ಅಭ್ಯರ್ಥಿಗಳಾಗಿ ಸ್ರ್ಪಧಿಸಿದ್ದು ಒಟ್ಟು ಆರು ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಈ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಅ.16ರ ನಂತರ ಮೂರು ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಲಿದ್ದಾರೆ. ಕಾಂಗ್ರೆಸ್ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸೇರಿದಂತೆ ಪ್ರಮುಖ ನಾಯಕರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತರೂಢ ಬಿಜೆಪಿಯಿಂದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ನಾಯಕರು ಪ್ರಚಾರಕ್ಕೆ ಇಳಿಯಲಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆ ರಾಜಕೀಯ ಸಮೀಕರಣ ಜೋರಾಗಿದೆ. ಮತದಾರನ ಮನಗೆಲ್ಲಲು ಕೈ ಹಾಗೂ ಕಮಪ ಪಡೆ ರಣತಂತ್ರಗಳನ್ನು ಹೆಣೆಯುತ್ತಿವೆ. ಆದರೆ ಯಾವ ಪಕ್ಷದ ರಣತಂತ್ರಕ್ಕೆ ಹಾನಗಲ್ ಹಾಗೂ ಸಿಂದಗಿ ಮತದಾರ ಮಾರುಹೋಗುತ್ತಾನೆ ಅನ್ನೋದನ್ನ ಕಾದು ನೋಡಬೇಕಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಡಿಕೆ ಶಿವಕುಮಾರ್‌ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಂದಗಿಸಿದ್ದರಾಮಯ್ಯಹಾನಗಲ್ಹಾನಗಲ್ ಸಿಂದಗಿ
Previous Post

ಪಂಜಾಬ್‌ ನಲ್ಲಿ ಮತ್ತೆ ಕೈ ಕಲಹ: ಕ್ಯಾಪ್ಟನ್‌ ಭೇಟಿ ಮಾಡಿದ ಸಿಎಂ ಚನ್ನಿ: ಸಿಧು ಟಾರ್ಗೆಟ್

Next Post

ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುತ್ತೇವೆ ಎಂದಿದ್ದ ಬಿಜೆಪಿ, ನರಕ ತೋರಿಸುತ್ತಿದ್ದಾರೆ – ಕಾಂಗ್ರೆಸ್‌ ಮುಖಂಡ ಸಲೀಂ ಅಹ್ಮದ್‌

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Next Post
ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುತ್ತೇವೆ ಎಂದಿದ್ದ ಬಿಜೆಪಿ,  ನರಕ ತೋರಿಸುತ್ತಿದ್ದಾರೆ –  ಕಾಂಗ್ರೆಸ್‌ ಮುಖಂಡ ಸಲೀಂ ಅಹ್ಮದ್‌

ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುತ್ತೇವೆ ಎಂದಿದ್ದ ಬಿಜೆಪಿ, ನರಕ ತೋರಿಸುತ್ತಿದ್ದಾರೆ - ಕಾಂಗ್ರೆಸ್‌ ಮುಖಂಡ ಸಲೀಂ ಅಹ್ಮದ್‌

Please login to join discussion

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada