• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾವು ಮುಸ್ಲಿಂ ವೋಟಿಗೆ ಕೈ ಹಾಕುತ್ತೇವೆಂದು ಕಾಂಗ್ರೆಸ್ಸಿಗರಿಗೆ ಭಯ: ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
December 14, 2022
in Top Story, ರಾಜಕೀಯ
0
ನಾವು ಮುಸ್ಲಿಂ ವೋಟಿಗೆ ಕೈ ಹಾಕುತ್ತೇವೆಂದು ಕಾಂಗ್ರೆಸ್ಸಿಗರಿಗೆ ಭಯ: ಈಶ್ವರಪ್ಪ
Share on WhatsAppShare on FacebookShare on Telegram

ADVERTISEMENT


ಮುಸಲ್ಮಾನರ ವೋಟುಗಳು ನಮ್ಮ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದರು, ಆದರೆ ಇದೀಗ ನಾವು ಮುಸ್ಲಿಂ ವೋಟ್‌ಗಳಿಗೆ ಕೈ ಹಾಕುತ್ತೇವೆ ಎಂಬ ಭಯ ಕಾಂಗ್ರೆಸ್ಸಿಗರನ್ನ ಕಾಡುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಹೇಳಿದರು.


ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಮುಸ್ಲಿಮರ ವೋಟುಗಳು ತಮ್ಮ ವೋಟ್‌ ಬ್ಯಾಂಕ್‌ ಎಂಬ ಭಾವನೆಯಲ್ಲಿದ್ದರು. ಆದರೆ ಇದೀಗ ಮುಸಲ್ಮಾನರ ಓಟಿನ ಬುಟ್ಟಿಗೆ ನಾವು ಕೈಹಾಕುತ್ತೇವೆ ಅನ್ನೋ ಭಯ ಅವರಿಗೆ ಶುರುವಾಗಿದೆ. ಅದಕ್ಕೆ ಮುಸ್ಲಿಂ ಮತಗಳ‌ ವಿಭಜನೆಯಾಗದಂತೆ ಸಭೆ ನಡೆಸಿದ್ದಾರೆ. ಆದರೆ ಮುಸಲ್ಮಾನರ ವೋಟುಗಳು ಬೇಡವೆಂದರೂ, ಕಾಂಗ್ರೆಸ್‌ಗೆ ಹೋಗೋದು. ಈ ಮುಂಚೆ ಮುಸ್ಲಿಮರ ವೋಟು ನೂರಕ್ಕೆ ನೂರು ನಮ್ಮದೇ ಎಂಬ ಭಾವನೆಯಲ್ಲಿ ಕಾಂಗ್ರೆಸ್‌ ನಾಯಕರಿದ್ದರು. ಆದರೆ ಈಗ ಕುಮಾರಸ್ವಾಮಿ ಅನೇಕ ಭಾಗದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದು, ಅನೇಕ ಮುಸ್ಲಿಮರು ಆ ಸಭೆಗೆ ಹೋಗುತ್ತಿದ್ದಾರೆ ಎಂದರು.


ಆದರೆ ಅವರುಗಳು ಮುಸ್ಲಿಮರ ವೋಟುಗಳನ್ನ ಹೇಗಾದರೂ ಹಂಚಿಕೊಳ್ಳಲಿ. ಹಿಂದುತ್ವದ ವಿಚಾರದಲ್ಲಿ ಬಿಜೆಪಿ ದೇಶದಲ್ಲಿ ಹೋರಾಟ ಮಾಡುತ್ತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರವಿದ್ದು, ಗುಜರಾತ್‌ನಲ್ಲೂ ನಿರೀಕ್ಷೆಗೂ ಮೀರಿ ಬೆಂಬಲ ಕೊಟ್ಟಿದ್ದಾರೆ. ನಮ್ಮ ರಾಜ್ಯದಲ್ಲೂ ಕೂಡ ಹಿಂದುತ್ವದ ಆಧಾರದ ಮೇಲೆ ಚುನಾವಣೆ ಮಾಡಲಿದ್ದು, ಹಿಂದುತ್ವದ ವ್ಯವಸ್ಥೆಯಲ್ಲಿ ಎಲ್ಲರೂ ಕೊಡುತ್ತಾರೆ. ಆ ಮೂಲಕ 150ಕ್ಕೂ ಹೆಚ್ಚು ಸ್ಥಾನ ಗೆದ್ದು, ಬಿಜೆಪಿ ಅಧಿಕಾರಕ್ಕೆ ಬರುತ್ತೇ ಎಂದ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.


ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜಕಾರಣದಲ್ಲಿ ಇದೆಲ್ಲಾ ಇದ್ದಿದ್ದೇ‌. ಸಿದ್ದರಾಮಯ್ಯ ಒಂದು ಬಸ್‌ನಲ್ಲಿ, ಡಿ.ಕೆ.ಶಿವಕುಮಾರ್ ಒಂದು ಬಸ್‌ನಲ್ಲಿ ಹೊಗುವುದಾಗಿ ತಿಳಿಸಿದ್ದರು. ಇದು ರಾಜಕಾರಣ, ಸ್ವಾಭಾವಿಕವಾಗಿ ಭಿನ್ನಾಭಿಪ್ರಾಯ ಇರಲಿದ್ದು, ಅದರಲ್ಲಿ ವಿಶೇಷತೆ ಏನು ಇಲ್ಲ. ಎಲ್ಲಾ ಪಾರ್ಟಿಯಲ್ಲೂ ಇರುತ್ತೇ, ಬಿಜೆಪಿಯಲ್ಲೂ ಇದೆ. ಆದರೆ ಅವರು ಮೇಲಿನವರ ಮಾತನ್ನ ಕೇಳುತ್ತೇವೆ ಎಂದು ತೀರ್ಮಾನ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ್ ಖರ್ಗೆಯವರು ಒಂದೇ ಬಸ್‌ನಲ್ಲಿ ಹೋಗಬೇಕು ಎಂದು ಹೇಳಿದ್ದಾರೆ. ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಮೇಲಿನವರು ಎಲ್ಲಾ ರಾಜಕೀಯ ಪಕ್ಷಕ್ಕೂ ಕಡಿವಾಣ ಹಾಕಿದಾಗ ಒಂದು ಶಿಸ್ತು ಬರುತ್ತೆ. ಆ ಶಿಸ್ತಿನ ರೂಪದ ಪ್ರಯತ್ನ ಕಾಂಗ್ರೆಸ್‌ನಲ್ಲಿ ನಡೆದಿರೋದು ನಿಜಕ್ಕೂ ಸಂತೋಷ ಎಂದರು.


ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಈಶ್ವರಪ್ಪ, ಸಿದ್ದರಾಮಯ್ಯ ಅವರಿಗೆ ಬೇರೆ ಬೇರೆ ಮಾಡೋದು ರಕ್ತಗತವಾಗಿ ಬಂದಿದೆ. ಬಹಳ ಹಿಂದಿನಿಂದಲೂ ಆ ವ್ಯವಸ್ಥೆ ಮಾಡುತ್ತಿದ್ದಾರೆ. ದೇವೆಗೌಡರ ಜೊತೆ ಇದ್ದಾಗಲೂ ಬೇರೆ ಅಹಿಂದಾ ಸಮಾವೇಶ ಮಾಡಬೇಡಿ ಎಂದಿದ್ದರು, ಆದರೆ ಸಮಾವೇಶ ಮಾಡಿದ್ದಕ್ಕೆ ಪಕ್ಷದಿಂದ ಅವರನ್ನ ತೆಗೆದು ಹಾಕಿದರು. ರಾಜ್ಯದಲ್ಲಿ ಸಿಎಂ ಆಗಿದ್ದ ವ್ಯಕ್ತಿ ನೀವು, ನಿಮ್ಮನ್ನು ನಿಮ್ಮ ಕಾರ್ಯಕರ್ತರು ಒಳ್ಳೆಯ ನಾಯಕರ ಎಂದು ಕೊಂಡಿದ್ದಾರೆ. ಹೀಗಾಗಿ ನಿಮ್ಮ ಕೇಂದ್ರದ ನಾಯಕರು ಹೇಳಿದ್ದನ್ನು ಪರಿಪಾಲನೆ ಮಾಡಿ. ಆಗ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮನ್ನು ಮೆಚ್ಚಿಕೊಳ್ಳುತ್ತಾರೆ. ಇದನ್ನು ಬಿಟ್ಟು ನೀವು ದೆಹಲಿಯಲ್ಲಿ ಒಪ್ಪಿಕೊಂಡು ಬಂದು, ಇಲ್ಲಿ ಪ್ರತ್ಯೇಕ ಸಭೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ನಾನು ಸಚಿವ ಸಂಪುಟಕ್ಕೆ ಸೇರುವುದು ಬಿಡುವುದು ನನ್ನ ನಿರ್ಧಾರವಲ್ಲ. ಕೇಂದ್ರದ ನಾಯಕರು ತೀರ್ಮಾನ ಮಾಡಿದರೆ ಮಂತ್ರಿ ಆಗುತ್ತೇನೆ, ಇಲ್ಲವಾದಲ್ಲಿ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: ಈಶ್ವರಪ್ಪಮುಸ್ಲಿಂಶಿವಮೊಗ್ಗ
Previous Post

ಚೀನಿಯರ ಉಪಟಳದ ಬಗ್ಗೆ ಸದನದ ಗಮನ ಸಳೆದ ಮಲ್ಲಿಕಾರ್ಜುನ ಖರ್ಗೆ | Mallikarjun Kharge |

Next Post

BJP ಹೊರತು ಪಡಿಸಿದ ಕೇಂದ್ರ ಸರ್ಕಾರ ರಚನೆ..!  ನಿತೀಶ್​ ನೇತೃತ್ವದಲ್ಲಿ ಸಿದ್ಧವಾಗ್ತಿದೆ​ ವೇದಿಕೆ..!

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Next Post
BJP ಹೊರತು ಪಡಿಸಿದ ಕೇಂದ್ರ ಸರ್ಕಾರ ರಚನೆ..!  ನಿತೀಶ್​ ನೇತೃತ್ವದಲ್ಲಿ ಸಿದ್ಧವಾಗ್ತಿದೆ​ ವೇದಿಕೆ..!

BJP ಹೊರತು ಪಡಿಸಿದ ಕೇಂದ್ರ ಸರ್ಕಾರ ರಚನೆ..!  ನಿತೀಶ್​ ನೇತೃತ್ವದಲ್ಲಿ ಸಿದ್ಧವಾಗ್ತಿದೆ​ ವೇದಿಕೆ..!

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada