• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Dwarka Declaration | ‘ದ್ವಾರಕಾ ಘೋಷಣೆ’ ಮೂಲಕ 10 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಕಾಂಗ್ರೆಸ್

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
March 1, 2022
in ದೇಶ, ರಾಜಕೀಯ
0
Dwarka Declaration | ‘ದ್ವಾರಕಾ ಘೋಷಣೆ’ ಮೂಲಕ 10 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಕಾಂಗ್ರೆಸ್
Share on WhatsAppShare on FacebookShare on Telegram

ಎರಡೂವರೆ ದಶಕಗಳಿಂದ ಗುಜರಾತ್‌ನಲ್ಲಿ ಅಧಿಕಾರದಿಂದ ದೂರವೇ ಉಳಿದಿರುವ ಪ್ರತಿಪಕ್ಷ ಕಾಂಗ್ರೆಸ್ ‘ದ್ವಾರಕಾ ಘೋಷಣೆ’ (Dwarka Declaration) ಯನ್ನು ಪ್ರಕಟಿಸುವ ಮೂಲಕ ಗುಜರಾತ್‌ ರಾಜ್ಯದ ಬಗ್ಗೆ ತನ್ನ ಅಭಿವೃದ್ಧಿಯ ದೃಷ್ಟಿಕೋನವನ್ನು ಪ್ರದರ್ಶಿಸಿದೆ.

ADVERTISEMENT

ವರ್ಷಾಂತ್ಯಕ್ಕೆ ಗುಜರಾತ್ (Gujarat) ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ. ಗುಜರಾತಿನ ದ್ವಾರಕಾದಲ್ಲಿ ಮೂರು ದಿನಗಳ ಕಾಲ ನಡೆದ ಚಿಂತನ ಶಿಬಿರದ ಕೊನೆಯ ದಿನ ‘ದ್ವಾರಕಾ ಘೋಷಣೆ’ ಘೋಷಿಸುವ ಮೂಲಕ ಚುನಾವಣಾ ವೇದಿಕೆ ಸಿದ್ಧಮಾಡಿಕೊಂಡಿದೆ.

ಶಿಬಿರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಾತನಾಡುತ್ತ, “ದೂರದೃಷ್ಟಿಯೊಂದಿಗೆ ನಾವೆಲ್ಲ ಜನಸಾಮಾನ್ಯರ ಬಳಿಗೆ ಹೋಗಬೇಕೆಂದು ಪಕ್ಷದ ಕಾರ್ಯಕರ್ತರಿಗೆ ಹುರಿದುಂಬಿಸಿದರು.

ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ʼದಿ ವೀಕ್ʼ (THE WEEK ) ನೊಂದಿಗೆ ಪ್ರತಿಕ್ರಿಯಿಸಿ, ಸಭೆಯಲ್ಲಿ ನಡೆದ ಚರ್ಚೆಗಳ ಆಧಾರದ ಮೇಲೆ ಈ ಘೋಷಣೆ ಮಾಡಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

500 ಕ್ಕೂ ಹೆಚ್ಚು ಕಾಂಗ್ರೆಸ್ಸಿನ ಪ್ರಮುಖ ಕಾರ್ಯಕರ್ತರು ಭಾಗಿಯಾಗಿ ಪಕ್ಷದ ಸಿದ್ಧಾಂತ, ಪ್ರಸ್ತುತ ಸಮಸ್ಯೆಗಳು, ಪಕ್ಷದ ಕಾರ್ಯವೈಖರಿ ಮತ್ತು ಮುಂದಿನ ಮಾರ್ಗಗಳ ಕುರಿತು ಚರ್ಚಿಸಿದರು ಸಭೆಯಲ್ಲಿ ಚರ್ಚಿಸಿದ್ದಾರೆ. ಇಲ್ಲಿ ಭಾಗವಹಿಸಿದವರನ್ನು ಹಲವಾರು ಗುಂಪುಗಳಾಗಿ ವಿಂಗಡಿಸಿ, ಒಂದೊಂದು ಗುಂಪಿಗೂ ಒಂದೊಂದು ಜವಾಬ್ದಾರಿ ನೀಡಲಾಗಿದೆ.

ರೂ. 500ಕ್ಕಿಂತ ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್!

‘ದ್ವಾರಕಾ ಘೋಷಣೆ’ ಯಲ್ಲಿ ರೂ. 500ಕ್ಕಿಂತ ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ನೀಡುವುದು, (Giving gas cylinders for less than Rs 500) ಹೆಚ್ಚಿನ ತೆರಿಗೆ ಮನ್ನಾ, ಕೃಷಿ ಸಾಲ ಮನ್ನಾ, ಕೋವಿಡ್-19ಕ್ಕೆ (Covid-19 ) ಬಲಿಯಾದವರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ನೀಡುವುದು ಈ ಘೋಷಣೆಯ ಪ್ರಮುಖ ಅಂಶಗಳಾಗಿವೆ.

ಶಿಕ್ಷಣದ ಖಾಸಗೀಕರಣದಿಂದ ಪೋಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕಾಂಗ್ರೆಸ್ ʼಮಹಾತ್ಮಾ ಗಾಂಧಿ ಮಾದರಿ ಶಾಲೆʼ (Mahatma Gandhi Model School) ಯನ್ನು ಸ್ಥಾಪಿಸುವುದಾಗಿ ಭರವಸೆ ನೀಡಿದೆ.

ರೈತರ ವಿದ್ಯುತ್ ಬಿಲ್‌ಗಳನ್ನು (electricity bills) ಅರ್ಧದಷ್ಟು ಕಡಿತಗೊಳಿಸಲಾಗುವುದು ಮತ್ತು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್‌ ತಿಳಿಸಿದೆ.

ನಗರ ಪ್ರದೇಶಗಳಲ್ಲಿ ವಾರ್ಡ್‌ವಾರು ʼತ್ರಿರಂಗ ಕ್ಲಿನಿಕ್‌ʼ (Triranga Clinics) ಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಣೆಯಲ್ಲಿ ತಿಳಿಸಲಾಗಿದೆ. ಈ ಕ್ಲಿನಿಕ್‌ ಗಳಲ್ಲಿ ವಿವಿಧ ಕಾಯಿಲೆಯ ಚಿಕಿತ್ಸೆಯೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಕ್ಲಿನಿಕ್‌ನ ಕಲ್ಪನೆಯಾಗಿದೆ. ಈ ಮೂಲಕ ನಾಗರಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲಾಗುವ ಗುರಿಯನ್ನು ನೀಡಿದ್ದಾರೆ.

10 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ

ಮುಖ್ಯವಾಗಿ ‘ದ್ವಾರಕಾ ಘೋಷಣೆ’ ಯಲ್ಲಿ 10 ಲಕ್ಷ ಉದ್ಯೋಗ (10 lakh jobs) ಸೃಷ್ಟಿಸುವ ಭರವಸೆಯನ್ನು ನೀಡಲಾಗಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಿಷ್ಠ ಸಮಯ ನಿಗಧಿಮಾಡಲಾಗಿದೆ.

ಬರುವ ದಿನಗಳಲ್ಲಿ ಪಕ್ಷದ ನೀತಿಗಳನ್ನು ಜನಸಾಮಾನ್ಯರ ಮುಂದಿಡಲಾಗುವುದು ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ (Jagdish Thakor ) ವಿವರಿಸಿದ್ದು, ಸ್ವಚ್ಛ ಮತ್ತು ಸಮರ್ಥ ಸರಕಾರ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಎರಡೂವರೆ ದಶಕದಿಂದ ಅಧಿಕಾರ ಕೇಂದ್ರದಿಂದ ದೂರ ಉಳಿದು, ಈ ಭಾರೀ ಹೇಗಾದರೂ ಮಾಡಿ ಗುಜರಾತಿನ ಅಧಿಕಾರದ ಗದ್ದುಗೆಗೆ ಏರಲು ಈಗಿನಿಂದಲೇ ಯೋಜನೆ ಹಾಕಿಕೊಂಡಂತೆ ಕಾಣುತ್ತಿದೆ. ‘ದ್ವಾರಕಾ ಘೋಷಣೆ’ ಕಾಂಗ್ರೆಸ್ಸಿಗೆ ಲಾಭ ತಂದುಕೊಡುತ್ತಾ ಎಂಬುದನ್ನು ಕಾದು ನೋಡಬೇಕು.

Tags: BJPCongress PartyCovid 19Dwarka Declarationelectricity billsGiving gas cylinders for less than Rs 500Rahul GandhiTHE WEEKTriranga Clinicsಕರೋನಾಕೋವಿಡ್-19ಗುಜರಾತ್‌ಚಿಂತನ್‌ ಶಿಬಿರದ್ವಾರಕಾ ಘೋಷಣೆನರೇಂದ್ರ ಮೋದಿಬಿಜೆಪಿ
Previous Post

SC-ST ಜನರಿಗೆ ಬಜೆಟ್ ನಲ್ಲಿ ನ್ಯಾಯಯುತ ಅನುದಾನ ಒದಗಿಸಿ : ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

Next Post

UP Elections | ಉತ್ತರ ಪ್ರದೇಶದಲ್ಲಿ ಇನ್ಮುಂದೆ ಜಾತಿ ರಾಜಕಾರಣ ನಡೆಯಲ್ಲ : ಪ್ರಧಾನಿ ಮೋದಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
UP Elections | ಉತ್ತರ ಪ್ರದೇಶದಲ್ಲಿ ಇನ್ಮುಂದೆ ಜಾತಿ ರಾಜಕಾರಣ ನಡೆಯಲ್ಲ : ಪ್ರಧಾನಿ ಮೋದಿ

UP Elections | ಉತ್ತರ ಪ್ರದೇಶದಲ್ಲಿ ಇನ್ಮುಂದೆ ಜಾತಿ ರಾಜಕಾರಣ ನಡೆಯಲ್ಲ : ಪ್ರಧಾನಿ ಮೋದಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada