• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನ ಬದಲಾವಣೆ.. ಬಿಜೆಪಿ ತಟಸ್ಥ.. ತಿರುಗಿಬಿದ್ದ ಮುಖ್ಯಮಂತ್ರಿ..!

Any Mind by Any Mind
March 11, 2024
in Top Story, ಕರ್ನಾಟಕ
0
ಸಂವಿಧಾನ ಬದಲಾವಣೆ.. ಬಿಜೆಪಿ ತಟಸ್ಥ.. ತಿರುಗಿಬಿದ್ದ ಮುಖ್ಯಮಂತ್ರಿ..!
Share on WhatsAppShare on FacebookShare on Telegram

ADVERTISEMENT

ಲೋಕಸಭಾ ಚುನಾವಣೆ (Loksabha Election) ಘೋಷಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಸಂಕಷ್ಟ, ಸಂವಿಧಾನ ತನ್ನ ಮಹತ್ವ ಕಳೆದುಕೊಳ್ಳುವ ಸಾಧ್ಯತೆ ಇದೆ ಅನ್ನೋ ಚರ್ಚೆ ನಡೆಯುತ್ತಿದೆ. ಈ ನಡುವೆ ಸಂವಿಧಾನ (Constitution) ತಿದ್ದಪಡಿ ಬಗ್ಗೆ ಸಂಸದ ಅನಂತಕುಮಾರ ಹೆಗಡೆ (Ananthakumar Hegde) ಮತ್ತೆ ಮಾತನಾಡಿದ್ದಾರೆ. ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ ಎಂದು ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ. ಆದರೆ ಬಿಜೆಪಿ (BJP) ಅಂತರ ಕಾಯ್ದುಕೊಂಡಿದ್ದು, ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ಪಕ್ಷದ್ದಲ್ಲ.. ಅದು ಅವರ ವೈಯಕ್ತಿಕ ಹೇಳಿಕೆ ಎಂದು ಟ್ವೀಟ್‌ ಮಾಡುವ ಮೂಲಕ ತಟಸ್ಥ ನಿಲುವು ತಾಳಿದೆ.

ಕಾಂಗ್ರೆಸ್‌ನವರು ಸಂವಿಧಾನದಲ್ಲಿ ಬೇಡವಾದ ಅಂಶಗಳನ್ನೆಲ್ಲಾ ಸೇರಿಸಿದ್ದಾರೆ. ಅವುಗಳನ್ನು ತಿದ್ದುಪಡಿ ಮಾಡಬೇಕಿದೆ ಎಂದಿದ್ದಾರೆ ಅನಂತ್‌ ಕುಮಾರ್‌ ಹೆಗಡೆ. ಉತ್ತರ ಕನ್ನಡದ ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದು, ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಮೋದಿ (Modi) ಹೇಳಿದ್ದಾರೆ. 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದಿದ್ದಾರೆ ಸಂಸದ ಅನಂತ್‌ ಕುಮಾರ್‌ ಹೆಗಡೆ.

ಈ ಹಿಂದೆಯೂ ಕೂಡಾ ತಾವು ಬಂದಿರೋದೆ ಸಂವಿಧಾನ ಬದಲಾಯಿಸಲು ಎಂದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಇದೀಗ ಮತ್ತೊಮ್ಮೆ ಸಂವಿಧಾನ ತಿದ್ದುಪಡಿ ಬಗ್ಗೆ ಮಾತಾನಾಡಿದ್ದಾರೆ. ಆದರೆ ಸಂವಿಧಾನದ ಮೂಲ ಆಶಯಗಳಿಗೆ ಪೆಟ್ಟು ಬೀಳುವ ಬಗ್ಗೆ ಈಗಾಗಲೇ ಸಾಕಷ್ಟು ರಾಜಕೀಯ ತಜ್ಞರು ಹಾಗೂ ರಾಜಕೀಯ ಧುರೀಣರು ಆತಂಕ ವ್ಯಕ್ತಪಡಿಸುತ್ತಿರುವ ಈ ಹೊತ್ತಿನಲ್ಲಿ ಸಂವಿಧಾನ ಬದಲಾವಣೆಗಾಗಿಯೇ 400 ಸ್ಥಾನ ಕೇಳಿದ್ದಾರೆ ಮೋದಿ ಎನ್ನುವುದು ಜನರನ್ನು ಆತಂಕಕ್ಕೆ ಗುರಿ ಮಾಡಿದೆ.

ಸಂವಿಧಾನ ಬದಲಾವಣೆಯ ಬಗ್ಗೆ ಅನಂತ ಕುಮಾರ ಹೆಗಡೆ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ (siddaramaiah) ಖಂಡಿಸಿದ್ದಾರೆ. ಅನಂತ್ ಕುಮಾರ್ ಹೆಗಡೆಯನ್ನ ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು. ಸಂವಿಧಾನಕ್ಕಿಂತ ಮೊದಲಿದ್ದ ಮನು ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಕೂಡಲೇ ಪಕ್ಷದಿಂದ ವಜಾ ಮಾಡಲಿ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ. ಸಂಸದ ಅನಂತ್‌ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕ ಹೇಳಿಕೆ ಅಲ್ಲ . ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗ. ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂ ಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಎಂದು ಕಿಡಿಕಾರಿದ್ದಾರೆ.

#Karnataka #bengaluru #Constitution #ananthkumarhegde #siddaramaiah #congress #bjp

Previous Post

ಬಿಜೆಪಿ ಎರಡನೇ ಪಟ್ಟಿಗೆ ಕೌಂಟ್ಡೌನ್  ! ಆಕಾಂಕ್ಷಿಗಳ ಎದೆಯಲ್ಲಿ ಢವಢವ ! 

Next Post

ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada