• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂವಿಧಾನ ಬದಲಾವಣೆ.. ಬಿಜೆಪಿ ತಟಸ್ಥ.. ತಿರುಗಿಬಿದ್ದ ಮುಖ್ಯಮಂತ್ರಿ..!

Any Mind by Any Mind
March 11, 2024
in Top Story, ಕರ್ನಾಟಕ
0
ಸಂವಿಧಾನ ಬದಲಾವಣೆ.. ಬಿಜೆಪಿ ತಟಸ್ಥ.. ತಿರುಗಿಬಿದ್ದ ಮುಖ್ಯಮಂತ್ರಿ..!
Share on WhatsAppShare on FacebookShare on Telegram

ADVERTISEMENT

ಲೋಕಸಭಾ ಚುನಾವಣೆ (Loksabha Election) ಘೋಷಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಸಂಕಷ್ಟ, ಸಂವಿಧಾನ ತನ್ನ ಮಹತ್ವ ಕಳೆದುಕೊಳ್ಳುವ ಸಾಧ್ಯತೆ ಇದೆ ಅನ್ನೋ ಚರ್ಚೆ ನಡೆಯುತ್ತಿದೆ. ಈ ನಡುವೆ ಸಂವಿಧಾನ (Constitution) ತಿದ್ದಪಡಿ ಬಗ್ಗೆ ಸಂಸದ ಅನಂತಕುಮಾರ ಹೆಗಡೆ (Ananthakumar Hegde) ಮತ್ತೆ ಮಾತನಾಡಿದ್ದಾರೆ. ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ ಎಂದು ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ. ಆದರೆ ಬಿಜೆಪಿ (BJP) ಅಂತರ ಕಾಯ್ದುಕೊಂಡಿದ್ದು, ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ಪಕ್ಷದ್ದಲ್ಲ.. ಅದು ಅವರ ವೈಯಕ್ತಿಕ ಹೇಳಿಕೆ ಎಂದು ಟ್ವೀಟ್‌ ಮಾಡುವ ಮೂಲಕ ತಟಸ್ಥ ನಿಲುವು ತಾಳಿದೆ.

ಕಾಂಗ್ರೆಸ್‌ನವರು ಸಂವಿಧಾನದಲ್ಲಿ ಬೇಡವಾದ ಅಂಶಗಳನ್ನೆಲ್ಲಾ ಸೇರಿಸಿದ್ದಾರೆ. ಅವುಗಳನ್ನು ತಿದ್ದುಪಡಿ ಮಾಡಬೇಕಿದೆ ಎಂದಿದ್ದಾರೆ ಅನಂತ್‌ ಕುಮಾರ್‌ ಹೆಗಡೆ. ಉತ್ತರ ಕನ್ನಡದ ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದು, ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಮೋದಿ (Modi) ಹೇಳಿದ್ದಾರೆ. 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದಿದ್ದಾರೆ ಸಂಸದ ಅನಂತ್‌ ಕುಮಾರ್‌ ಹೆಗಡೆ.

ಈ ಹಿಂದೆಯೂ ಕೂಡಾ ತಾವು ಬಂದಿರೋದೆ ಸಂವಿಧಾನ ಬದಲಾಯಿಸಲು ಎಂದಿದ್ದ ಸಂಸದ ಅನಂತ್‌ ಕುಮಾರ್‌ ಹೆಗಡೆ, ಇದೀಗ ಮತ್ತೊಮ್ಮೆ ಸಂವಿಧಾನ ತಿದ್ದುಪಡಿ ಬಗ್ಗೆ ಮಾತಾನಾಡಿದ್ದಾರೆ. ಆದರೆ ಸಂವಿಧಾನದ ಮೂಲ ಆಶಯಗಳಿಗೆ ಪೆಟ್ಟು ಬೀಳುವ ಬಗ್ಗೆ ಈಗಾಗಲೇ ಸಾಕಷ್ಟು ರಾಜಕೀಯ ತಜ್ಞರು ಹಾಗೂ ರಾಜಕೀಯ ಧುರೀಣರು ಆತಂಕ ವ್ಯಕ್ತಪಡಿಸುತ್ತಿರುವ ಈ ಹೊತ್ತಿನಲ್ಲಿ ಸಂವಿಧಾನ ಬದಲಾವಣೆಗಾಗಿಯೇ 400 ಸ್ಥಾನ ಕೇಳಿದ್ದಾರೆ ಮೋದಿ ಎನ್ನುವುದು ಜನರನ್ನು ಆತಂಕಕ್ಕೆ ಗುರಿ ಮಾಡಿದೆ.

ಸಂವಿಧಾನ ಬದಲಾವಣೆಯ ಬಗ್ಗೆ ಅನಂತ ಕುಮಾರ ಹೆಗಡೆ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ (siddaramaiah) ಖಂಡಿಸಿದ್ದಾರೆ. ಅನಂತ್ ಕುಮಾರ್ ಹೆಗಡೆಯನ್ನ ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು. ಸಂವಿಧಾನಕ್ಕಿಂತ ಮೊದಲಿದ್ದ ಮನು ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಕೂಡಲೇ ಪಕ್ಷದಿಂದ ವಜಾ ಮಾಡಲಿ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ. ಸಂಸದ ಅನಂತ್‌ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕ ಹೇಳಿಕೆ ಅಲ್ಲ . ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗ. ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂ ಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಎಂದು ಕಿಡಿಕಾರಿದ್ದಾರೆ.

#Karnataka #bengaluru #Constitution #ananthkumarhegde #siddaramaiah #congress #bjp

Previous Post

ಬಿಜೆಪಿ ಎರಡನೇ ಪಟ್ಟಿಗೆ ಕೌಂಟ್ಡೌನ್  ! ಆಕಾಂಕ್ಷಿಗಳ ಎದೆಯಲ್ಲಿ ಢವಢವ ! 

Next Post

ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

Related Posts

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ
Top Story

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

by ಪ್ರತಿಧ್ವನಿ
November 22, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಪರ ಸಚಿವರು ಹಾಗೂ ಶಾಸಕರು ದೆಹಲಿ ಯಾತ್ರೆ ನಡೆಸಿದರೆ, ಇತ್ತ...

Read moreDetails
ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
Next Post
ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

ಲೋಕಪಾಲ ಮುಖ್ಯಸ್ಥರಾಗಿ ಎ ಎಂ ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ

Please login to join discussion

Recent News

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ
Top Story

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

by ಪ್ರತಿಧ್ವನಿ
November 22, 2025
ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ
Top Story

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

by ಪ್ರತಿಧ್ವನಿ
November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

November 22, 2025
ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada