ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟ ಮಾಡಿದ ಮಾರನೇ ದಿನವೇ ರೇಣುಕಾಚಾರ್ಯ ಮನೆಗೆ ಬಿಎಸ್ವೈ ಭೇಟಿ ನೀಡಿದ್ದಾರೆ. ಬಿಎಸ್ವೈ ನೋಡಿ ರೇಣುಕಾಚಾರ್ಯ ಭಾವುಕರಾಗಿ, ದಯಮಾಡಿ ಇದೊಂದು ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮನೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ನೀಡಿದರು. ನಿವಾಸಕ್ಕೆ ಬಂದ ತಮ್ಮ ನಾಯಕನನ್ನು ರೇಣುಕಾಚಾರ್ಯ ಬೆಂಬಲಿಗರು ಜಯಘೋಷಗಳಿಂದ ಬರ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆಯೇ ಹೊರತು ಪಕ್ಷ ಸಂಘಟನೆ ಮಾಡಲ್ಲ ಎಂದಿಲ್ಲ. ಇದೊಂದು ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಎಲ್ಲಾ ಶಾಸಕರ ಕೋರಿಕೆ ಎಂದು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲ್ಲ, ಇನ್ನು ಸಿಎಂ ಆಗಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.