ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಚನ್ನರಾಯಪಟ್ಟಣ ತಾಲ್ಲೂಕಿನ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದು, ಬಾಗೂರು ರಸ್ತೆಯಲ್ಲಿ ಮಳೆ ನೀರು ಹರಿವಿನಲ್ಲಿ ವಾಹನಗಳು ಸಿಲುಕಿ ಪರದಾಡಿವೆ.. ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಗೃಹಬಳಕೆ ವಸ್ತುಗಳು ಹಾನಿಯಾಗಿವೆ.. ಹಿರೀಸಾವೆ ಹೋಬಳಿಯಲ್ಲೂ ಭಾರೀ ಮಳೆಯಾಗಿದ್ದು, ಸುತ್ತಾಮುತ್ತ ಗ್ರಾಮಗಳಲ್ಲೂ ಧಾರಾಕಾರ ಮಳೆ ಆಗಿದೆ.
ಕೊಡಗಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದೆ.. ಮಂಡ್ಯ ಜಿಲ್ಲೆ KRS ಡ್ಯಾಂಗೆ ಒಳಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.. ನಿನ್ನೆ 1 ಸಾವಿರ ಕ್ಯೂಸೆಕ್ ಇದ್ದ ಒಳಹರಿವು ಪ್ರಮಾಣ ಇದೀಗ ಸೂಮಾರು 3 ಸಾವಿರ ಕ್ಯೂಸೆಕ್ಗೆ ಏರಿಕೆ ಆಗಿದೆ. ಕೋಲಾರದಲ್ಲಿ ಕಳೆದ 3 ದಿನಗಳಿಂದ ಉತ್ತಮ ಮಳೆಯಾಗ್ತಿದ್ದು, ಕೆಜಿಎಫ್ನಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಜನರು ಸಂಕಷ್ಟ ಪಡುತ್ತಿದ್ದಾರೆ.. ರಸ್ತೆಯ ತುಂಬೆಲ್ಲಾ ಗುಂಡಿಗಳು ಇರೋದ್ರಿಂದ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.. ಹೀಗಾಗಿ ಸ್ಥಳೀಯರು ಗುಂಡಿಗಳಲ್ಲಿ ಬಾಳೆ ಗಿಡಗಳನ್ನ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿದಿದೆ.. ರಾತ್ರಿ ಸುರಿದ ಮಳೆಗೆ ಮನೆಗಳು ಜಲಾವೃತವಾಗಿವೆ.. ಶಿರಾ ನಗರದಲ್ಲಿ ಮನೆಗಳಲ್ಲಿ ಮಳೆ ನೀರು ನುಗ್ಗಿ, ದವಸ ಧಾನ್ಯ, ಪೀಠೋಪಕರಣಗಳು ಹಾನಿಯಾಗಿವೆ.. ಹಾಗೆಯೇ ತಿಪಟೂರು ತಾಲೂಕಿನ ಹೆಚ್.ಬೈರಾಪುರ ಗ್ರಾಮದಲ್ಲಿ ಸೇತುವೆಗಳು ಜಲಾವೃತಗೊಂಡಿವೆ.. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ..
ರಾಜ್ಯದ 18 ಜಿಲ್ಲೆಗಳಲ್ಲಿ ಭಾರೀ ಮಳೆ ಆಗ್ತಿದೆ. ಮುಂದಿನ 3 ದಿನದಲ್ಲಿ ದಕ್ಷಿಣ ಒಳನಾಡಿನ 8 ಜಿಲ್ಲೆಗಳು, ಕರಾವಳಿಯ ಎರಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆರೆಂಟ್ ಅಲರ್ಟ್ ನೀಡುವ ಮೂಲಕ ಮುನ್ಸೂಚನೆ ನೀಡಲಾಗಿದೆ.. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 3 ದಿನ 11ರಿಂದ 20 ಸೆ.ಮೀ ಮಳೆಯಾಗುವ ಸಾಧ್ಯತೆ ಇದೆ. ಆದರೆ ವಿಶೇಷ ಅಂದ್ರೆ ಇತ್ತೀಚಿಗೆ ಸಿಡಿಲು ಗುಡುಗು ಕಡಿಮೆ ಆಗಿದೆ.