ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣರನ್ನು ವ್ಯೆಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ರಾಷ್ಟ್ರ – ರಾಜ್ಯ ರಾಜಕೀಯದಲ್ಲಿ ತೀವ್ರ ಸದ್ದು ಮಾಡಿದ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
ಸಚಿವ ಮುನಿರತ್ನ ಸೇರಿದಂತೆ ಹಲವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದ ಕೆಂಪಣ್ಣ ವಿರುದ್ಧ ಸಚಿವ ಮುನಿರತ್ನ ಮಾನ ನಷ್ಟ ಮೊಕದ್ದಮೆ ಕ್ರಿಮಿನಲ್ ಪ್ರಕರಣವನ್ನ ದಾಖಲಿಸಿದ್ದರು.

ಅರ್ಜಿ ವಿಚಾರಣೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿತ್ತು.
ಅದರಂತೆ ಸಂಘದ ಅಧ್ಯಕ್ಷ ಕೆಂಪಣ್ಣ, ಉಪಾಧ್ಯಕ್ಷ ವಿ.ಕೃಷ್ಣ ರೆಡ್ಡಿ, ಖಜಾಂಚಿ ಹೆಚ್. ಎಸ್. ನಟರಾಜ್, ಸಂಘಟನಾ ಕಾರ್ಯದರ್ಶಿ ಗುರು ಸಿದ್ದಪ್ಪರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.