ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಎಐಸಿಸಿ ಕಚೇರಿ ಮುಂದೆ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
![](https://pratidhvani.com/wp-content/uploads/2022/06/dks-1024x731.jpg)
ಹೌದು, ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರಾದ ರಾಜ್ಯದ ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಈ ವೇಳೆ, ಡಿಕೆ ಸುರೇಶ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಅರೆಸ್ಟ್ ಮಾಡ್ತೀರಾ ಎಂದು ಡಿಕೆ ಸುರೇಶ್ ಕೇಳುತ್ತಿದ್ದಂತೆ ಪೊಲೀಸರು ಅವರನ್ನು ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪಕ್ಷದ ಸಂಸದ ಡಿಕೆ ಸುರೇಶ್ ಅವರನ್ನು ಪೊಲೀಸರು ತಳ್ಳಾಡುತ್ತಿರುವ ದೃಶ್ಯ ಕೂಡ ಕಾಣುತ್ತಿದೆ. ದಿನೇಶ್ ಗುಂಡೂರಾವ್ ‘ನಮಗೆ ಬಹಳ ಅನ್ಯಾಯವಾಗುತ್ತಿದೆ, ಮೋದಿ ಸರ್ಕಾರ ಮುರ್ದಾಬಾದ್,’ ಎಂದು ಘೋಷಣೆ ಕೂಗಿದ್ದಾರೆ.