ಕರೋನಾ ಸೋಂಕಿಗೆ ಹೆದರಿ ಚಾಮರಾಜನಗರ ಜಿಲ್ಲೆಯ ಮೂಕಹಳ್ಳಿಯ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾಗಿದ್ದಾರೆ.
ಈ ಕುಟುಂಬ ಆರ್ಥಿಕ ಸಂಕಷ್ಟಕ್ಕೊಳಗಾಗಿತ್ತು. ಕುಟುಂಬದ ಯಜಮಾನ ಮಹದೇವಸ್ವಾಮಿ ಅವರಿಗೆ ಕೆಲವು ದಿನಗಳ ಹಿಂದೆ ಕರೋನಾ ಪಾಸಿಟಿವ್ ಆಗಿ ಹೋಂ ಐಸೊಲೇಷನ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಇಂದು ಬೆಳಗ್ಗೆ ಇಡೀ ಕುಟುಂಬ ನೇಣಿಗೆ ಶರಣಾಗಿದೆ. ಮಹದೇವಸ್ವಾಮಿ(45), ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ , ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.