• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakshmi Hebbalkar: ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು ಆಕರ್ಷಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಅಂಗನವಾಡಿ ಕಟ್ಟಡಗಳ ಬಾಡಿಗೆ, ಮಕ್ಕಳಿಗೆ ಹಂಚುವ ಮೊಟ್ಟೆಗಳಿಗೆ ಅನುದಾನ ಕೊರತೆ ಇಲ್ಲ. ಇವುಗಳನ್ನು ವಿಳಂಬವಿಲ್ಲದೆ ಪಾವತಿಸಿ. ಪ್ರತಿ ತಿಂಗಳು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಿ. ಇಲಾಖೆಯ ಕೆಲಸಗಳು ಸುಗಮವಾಗಿ ನಡೆಯಬೇಕು. ಅಗತ್ಯ ಸುಧಾರಣೆಯಾಗಬೇಕು. ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದರು.

ಸಕ್ಷಮ ಯೋಜನೆಯಲ್ಲಿ ವಿಶೇಷ ಪ್ರಯತ್ನ ಮಾಡಿ ರಾಜ್ಯಕ್ಕೆ 17,500 ಅಂಗನವಾಡಿ ತರಲಾಗಿದೆ. ದೊಡ್ಡ ರಾಜ್ಯಗಳಿಗೂ ಸಿಗದಷ್ಟು ನಮಗೆ ಸಿಕ್ಕಿದೆ. ಕೇಂದ್ರ ಸರಕಾರ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಬೇರೆ ರಾಜ್ಯಗಳಿಗೆ ಮಾದರಿಯಾಗಿ ಉದಾಹರಿಸುತ್ತಿದೆ. ಹಾಗಾಗಿ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ಜಿಲ್ಲಾಧಿಕಾರಿ ಮೊಹಮದ್‌ ರೋಷನ್‌, ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ್‌ ಗುಡೇದ್‌, ಆಯುಕ್ತ ಗುಲಾಬರಾವ್ ಭೂಷಣ ಬೋರಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್‌ ಬಾಬು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್‌, ಡಿಎಸ್‌ಪಿ ನಿರಂಜನ್‌ ರಾಜೇ ಅರಸ್‌, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags: lakshmi hebbalkar​Lakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar familylakshmi hebbalkar healthlakshmi hebbalkar historylakshmi hebbalkar net worthlakshmi hebbalkar newslakshmi hebbalkar reactionlakshmi hebbalkar speachlakshmi hebbalkar speechlakshmi hebbalkar twitterlakshmi hebbalkar videolakshmi hebbalkar wikiMinister Lakshmi Hebbalkar
Previous Post

CM Siddaramaiah: ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ..!! ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

M B Patil: ಧಾರವಾಡದಲ್ಲಿ ಜಪಾನಿನ ಹಿಟಾಚಿ ಮಷಿನರಿ ಕಂಪನಿಯ ಅಭಿವೃದ್ಧಿ ಕೇಂದ್ರ ಸ್ಥಾಪನೆ : ಎಂ. ಬಿ. ಪಾಟೀಲ

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

M B Patil: ಧಾರವಾಡದಲ್ಲಿ ಜಪಾನಿನ ಹಿಟಾಚಿ ಮಷಿನರಿ ಕಂಪನಿಯ ಅಭಿವೃದ್ಧಿ ಕೇಂದ್ರ ಸ್ಥಾಪನೆ : ಎಂ. ಬಿ. ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada