ಕಲಬುರಗಿ (Kalaburagi): ಕಾಂಗ್ರೆಸ್ (congress) ಲೂಟಿಯಲ್ಲಿ ನಿರತವಾಗಿದೆ. ಭ್ರಷ್ಟಾಚಾರವೇ ಕಾಂಗ್ರೆಸ್ ಗೆ ಆಕ್ಸಿಜನ್ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ (loksabha election) ಪ್ರಚಾರ ಆರಂಭಿಸಿದ ಮೋದಿ ಅವರು, ಕಲ್ಲಿದ್ದಲಿನ ಕಪ್ಪುತನವನ್ನು ಹೋಗಲಾಡಿಸಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಂತಹವರಿಗೆ ಭ್ರಷ್ಟಾಚಾರವೇ ಆಮ್ಲಜನಕ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಎಷ್ಟೇ ಬಾರಿ ತಮ್ಮ ಉಡುಪುಗಳನ್ನು ಬದಲಾಯಿಸಿದರೂ ಅವರ ದುಷ್ಕೃತ್ಯಗಳು ಬದಲಾಗುವುದಿಲ್ಲ, ಈ ಬಗ್ಗೆ ಜಾಗೃತರಾಗಿರುವ ಕರ್ನಾಟಕದ ಮಂದಿ ಕಾಂಗ್ರೆಸ್ ನೆಡೆಗೆ ಆಕ್ರೋಶಗೊಂಡಿದ್ದಾರೆ. ಹಲವು ಅವಕಾಶಗಳು ಸಿಕ್ಕಿದ್ದರೂ ಕಾಂಗ್ರೆಸ್ ಸುಧಾರಣೆ ಮಾಡಿಕೊಳ್ಳುವುದಕ್ಕೆ ತಯಾರಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಬಹಿರಂಗವಾಗಿಯೇ ಬೆಂಬಲ ಸಿಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಉಂಟುಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಜನತೆಗೆ ಕಾಂಗ್ರೆಸ್ ಬಗ್ಗೆ ಸತ್ಯ ಅರಿವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಬಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಗುಲ್ಬರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ ಜಾಧವ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
#karnataka #kalaburgi #loksabhaelection #pmmodi #narendramodi #bjp #congress






