ಮಂಗಳೂರು (Mangaluru) : ಅತ್ತ ದೆಹಲಿಯಲ್ಲಿ ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಬಿಜೆಪಿ (BJP) ರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಕಾಂಗ್ರೆಸ್( congress) ಸಮಾವೇಶ ನಡೆದಿದೆ. ಅದು ಕೂಡ ಮಂಗಳೂರಿನಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆದಿದೆ.
![](https://pratidhvani.com/wp-content/uploads/2024/02/IMG-20240217-WA0017-1024x683.webp)
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು 370 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DKShivakumar) ಹೇಳಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಅವರು ದೇಶ ಒಗ್ಗೂಡಿಸಲು ಭಾರತ ಜೋಡೋ ಯಾತ್ರೆ (Bharatjodoyatre) ಮಾಡುತ್ತಿದ್ದಾರೆ. ದೇಶ ಹೊಸ ನಾಯಕತ್ವ ಚಿಂತನೆಯಲ್ಲಿದೆ. ನಮ್ಮ ರಾಜ್ಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Malikarjun Kharge) ಅವರು ಮಹಾತ್ಮಾ ಗಾಂಧಿ(Mahatma Gandhi), ಇಂದಿರಾ ಗಾಂಧಿ (Indra Gandhi), ಸೋನಿಯಾ ಗಾಂಧಿ (Sonia Ghandi)ಅವರು ಕೂತಿದ್ದ ಸ್ಥಾನದಲ್ಲಿ ಕೂತು ದೇಶದಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
![](https://pratidhvani.com/wp-content/uploads/2024/02/IMG-20240217-WA0016-1024x683.webp)
ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಹೇಳಿದರು.
![](https://pratidhvani.com/wp-content/uploads/2024/02/IMG-20240217-WA0023-1024x683.webp)
ಈ ಯೋಜನೆ ಜಾರಿಯಾದ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಸರ್ಕಾರಕ್ಕೆ ಪತ್ರ ಬರೆದು ನಿಮ್ಮ ಯೋಜನೆಯಿಂದ ಈ ಭಾಗದ ಪುಣ್ಯಕ್ಷೇತ್ರಗಳಿಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ. ದೇವಾಲಯಗಳಲ್ಲಿ ಮುಖ್ಯಮಂತ್ರಿಗಳ ಹೆಸರಲ್ಲಿ ಪೂಜೆ ಮಾಡಿಸಲಾಗುತ್ತಿದೆ. ನಮ್ಮ ಜನಪರ ಯೋಜನೆಗಳು ಜನರನ್ನು ತಲುಪುತ್ತಿದೆ ಎಂದರು.
ಇದು ಐತಿಹಾಸಿಕ ಭೂಮಿ. ಕೋಟಿ ಚೆನ್ನಯನವರಿಂದ, ವೀರ ಅಬ್ಬಕ್ಕ ದೇವಿ, ನಾರಾಯಣ ಗುರುಗಳ ಭೂಮಿ ಇದು. ಈ ಭೂಮಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಇತಿಹಾಸವಿದೆ.
ನಾನು ಚುನಾವಣೆ ಸಮಯದಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನಿಮಗೆ ಶಕ್ತಿ ನೀಡಿದ್ದೇವೆ ಎಂದು ಹೇಳಿದರು.
ಇಲ್ಲಿರುವ ಕಾರ್ಯಕರ್ತರು ನಮ್ಮ ಯೋಜನೆ ಜಾರಿಯಿಂದಾಗಿ ಆತ್ಮವಿಶ್ವಾಸದಿಂದ ಜನರ ಮುಂದೆ ಹೋಗಿ ಮತ ಕೇಳಬಹುದು. ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಪ್ಪು ಹಣತಂದು 15 ಲಕ್ಷ ನೀಡುವುದಾಗಿ ಹೇಳಿದ್ದರು. ಎಲ್ಲಾ ರೈತರ ಆದಾಯ ಡಬಲ್ ಮಾಡುತ್ತೇವೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರು ಹೇಳಿದ್ದನ್ನು ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.
ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಇದನ್ನು ನೋಡಿ ಅರಳಿದ ಕಮಲ ಉದುರಿಹೋಯಿತು, ತೆನೆಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಸಮೃದ್ಧಿಯಾಯಿತು, ಕರ್ನಾಟಕ ಪ್ರಗತಿಯಾಯಿತು. ಇದು ನಿಮ್ಮೆಲ್ಲರ ಶಕ್ತಿಯಲ್ಲವೇ? ಎಂದು ವಿವರವಾಗಿ ಮಾತನಾಡಿದರು.
ವಿರೋಧ ಪಕ್ಷದವರು ಏನೇ ತಂತ್ರ ಮಾಡಿದರೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರ ನಡೆಸಲಿದೆ. ನಂತರ ಮತ್ತೆ ಐದು ವರ್ಷ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮ ವಿಶ್ವಾಸ ನನಗಿದೆ. ಹೀಗಾಗಿ ನೀವು ನಮಗೆ ಶಕ್ತಿ ನೀಡಬೇಕು. ಈ ದೇಶವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.
#Karnataka #Mangaluru #congress #congress #Congressconvention #DKShivakumar