ಸಂಸದ Prathap Simha ವಿರುದ್ದ ಯಾವುದೇ ಪತ್ರಿಕಾಗೋಷ್ಠಿ ನಡೆಸದಂತೆ Bangaluru ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ M. Lakshman ಅವರು ಯಾವುದೇ ಪತ್ರಿಕೆ ಹಾಗೂ ಯಾವುದೇ ಟಿವಿ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ. ಸ್ಥಳೀಯ ಕೇಬಲ್ ಚಾನೆಲ್, ರೆಡಿಯೋ, ಸಾಮಾಜಿಕ ಮಾಧ್ಯಮ ಯಾವುದರಲ್ಲೂ ಯಾವುದೇ ಸ್ವರೂಪದ ಹೇಳಿಕೆ ನೀಡುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ದೂರಿನ ಸಂಬಂಧ ಫೆ.13ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಲಕ್ಷ್ಮಣ್ ಗೆ ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ದ ಮಾಡುತ್ತಿದ್ದ ಪತ್ರಿಕಾಗೋಷ್ಠಿಗಳು ಬಹುತೇಕ ಆಧಾರಹಿತವಾಗಿದ್ದ ಕಾರಣ ಎಲ್ಲವನ್ನೂ ನ್ಯಾಯಾಲಯ ಮುಕ್ತವಾಗಿ ವಾದವನ್ನು ಆಲಿಸಿ ಈ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆಯನ್ನು ಲಕ್ಷ್ಮಣ್ ಉಲ್ಲಂಘಿಸಿದರೆ ಅದು ನ್ಯಾಯಾಂಗ ನಿಂದನೆ ಆಗುತ್ತದೆ.
#Court #Laxman #PratapSimha #BJPKarnataka #MP