ಸೌಜನ್ಯ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ ಎಂದು ಈಗಾಗ್ಲೆ ಸಾರ್ವಜನಿಕರು ಮತ್ತು ಸೌಜನ್ಯ ಪರವಾದ ಹೋರಾಟಗಾರರು ಪರಮೇಶ್ವರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡ ಕಾರೋದಕ್ಕೆ ಶುರು ಮಾಡಿದ್ದಾರೆ.
ಅಷ್ಟಕ್ಕೂ ಈ ಪ್ರಕರಣ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸೌಜನ್ಯ ಪ್ರಕರಣ ಕಾನೂನಾತ್ಮಕವಾಗಿ ಪೂರ್ಣಗೊಂಡಿದ್ದು, ಮರುತನಿಖೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಆದ್ರೆ ಸಾರ್ವಜನಿಕ ವಲಯದಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಸೌಜನ್ಯಾ ಈ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಮರು ತನಿಖೆ ವಿಚಾರ ಸರ್ಕಾರದ ಮುಂದಿಲ್ಲ ಅಂತ ಉಡಾಫೆ ಹೇಳಿಕೆಯನ್ನ ನೀಡಿದ್ದಾರೆ.

ಆದರೆ ಈ ಹೇಳಿಕೆಯ ಕುರಿತಾಗಿ ಈಗ ಸಮಾಜಿಕ ಜಾಲರತಾಣದಲ್ಲಿ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಾಕಷ್ಟು ಮಂದಿ ಸರ್ಕಾರದ ವಿರುದ್ಧ ಹಾಗೂ ಡಾ.ಜಿ. ಪರಮೇಶ್ವರ್ ವಿರುದ್ಧ ಕಿಡಿ ಕಾರೋದಕ್ಕೆ ಪ್ರಾರಂಭ ಮಾಡಿದ್ದಾರೆ.

ಇನ್ನು ಈ ಹಿಂದೆ ಸ್ವಯಂ ಕ್ರಿಮಿನಲ್ ಪ್ರಕರಣಗಳನ್ನು ಮೈಸೂರಿನ ಟ್ರಯಲ್ ಕೋರ್ಟ್ ಗಳಲ್ಲಿ ನಡೆಸಿ ಅನುಭವವಿರುವ ಖ್ಯಾತ ಕ್ರಿಮಿನಲ್ ಲಾಯರ್ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಸೌಜನ್ಯಳ ಪೋಷಕರು ಮರು ತನಿಖೆಗೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಅಧ್ಯಯನ ಮಾಡಿ ನಂತರ ಸೂಕ್ತ ನಿರ್ಧಾರ ಮಾಡುತ್ತೇನೆಂದು ಹೇಳಿದ್ದನ್ನು ಎಂದಿದ್ರು ಆದ್ರೆ ಈಗ ಈ ಪ್ರಕರಣದ ಕುರಿತಾಗಿ ಡಾ, ಜಿ ಪರಮೇಶ್ವರ್ ಅವರ ಹೇಳಿಕೆ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.