• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

COVID-19; ಮಾಧ್ಯಮ ವರದಿಗಾರರು, ಪತ್ರಿಕಾ ವಿತರಕರ ಕುಟುಂಬಿಕರಿಗೂ ಪರಿಹಾರ ನೀಡಲು ಹೈಕೋರ್ಟ್‌ ನಿರ್ದೇಶನ

by
May 10, 2020
in ಕರ್ನಾಟಕ
0
COVID-19; ಮಾಧ್ಯಮ ವರದಿಗಾರರು
Share on WhatsAppShare on FacebookShare on Telegram

ಕೋವಿಡ್-19‌ ವರದಿಗಾರಿಕೆ ಅಥವಾ ಈ ಸಮಯದಲ್ಲಿ ಪತ್ರಿಕಾ ವಿತರಣೆ ಮಾಡುವವರು ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ್ದರೆ ಅಂತಹ ಮಾಧ್ಯಮ ಪ್ರತಿನಿಧಿಗಳ ಅಥವಾ ಪತ್ರಿಕಾ ವಿತರಕರ ಕುಟುಂಬಗಳಿಗೆ 5ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳು 50 ಸಾವಿರ ರೂಪಾಯಿ ಪರಿಹಾರ ನೀಡುವಂತೆಯೂ ಹೈ ಕೋರ್ಟ್‌ ತಿಳಿಸಿದೆ.

ADVERTISEMENT

ಬೆಂಗಳೂರು ನಿವಾಸಿ ಜಾಕೊಬ್‌ ಜಾರ್ಜ್‌ ಅವರು ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್‌ ನ ವಿಭಾಗೀಯ ಪೀಠದ ನ್ಯಾಯಾಧೀಶರಾದ ಬಿವಿ ನಾಗರತ್ನ ಹಾಗೂ ಸೂರಜ್‌ ಗೋವಿಂದರಾಜ್‌ ಅವರು ಈ ನಿರ್ದೇಶನವನ್ನ ನೀಡಿದ್ದಾರೆ. ಅರ್ಜಿದಾರರು ದಿನಪತ್ರಿಕೆ, ನ್ಯೂಸ್‌ ಚಾನೆಲ್‌ ಹಾಗೂ ಮ್ಯಾಗಜಿನ್‌ ಸಹಿತ ಒಟ್ಟು 30 ಸಂಸ್ಥೆಗಳನ್ನ ಫಿರ್ಯಾದಿದಾರರನ್ನಾಗಿ ಅರ್ಜಿ ಸಲ್ಲಿಸಿದ್ದು, ಅದರಂತೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೆ ಅನ್ವಯಿಸುವಂತೆ ನ್ಯಾಯಾಲಯವು ಸೂಚಿಸಿದೆ.

ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರಂತೆಯೇ ಮಾಧ್ಯಮದ ಪ್ರತಿನಿಧಿಗಳೂ ಕರೋನಾ ವಿರುದ್ಧದ ಜಾಗೃತಿಗಾಗಿ ಹಗಲು ರಾತ್ರಿಯೆನ್ನದೇ ದುಡಿಯುತ್ತಿದ್ದಾರೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಇದನ್ನ ಪರಿಗಣಿಸಿರುವ ನ್ಯಾಯಾಲಯವು ಈ ಮಹತ್ವದ ಆದೇಶವನ್ನ ನೀಡಿದೆ.

ಇನ್ನು ಅರ್ಜಿಯಲ್ಲಿ ಅರ್ಜಿದಾರರು ವಿಶೇಷವಾಗಿ ಉಲ್ಲೇಖಿಸಿರುವ ಅಂಶಗಳೇನೆಂದರೆ, “ ಮಾಧ್ಯಮ ಪ್ರತಿನಿಧಿಗಳು ಕರೋನಾದ ಈ ಸಮಯದಲ್ಲಿ ವೈದ್ಯರು, ಪೊಲೀಸ್‌ ಅಧಿಕಾರಿಗಳು, ಸರಕಾರಿ ಅಧಿಕಾರಿಗಳು, ರೋಗಿಗಳನ್ನ ಹಾಗೂ ಅವರ ಕುಟುಂಬ ಸದಸ್ಯರನ್ನ ಸಂದರ್ಶನ ನಡೆಸಿ ವರದಿ ತಯಾರಿಸುತ್ತಾರೆ. ಇಂತಹ ಸಂದರ್ಭಗಳೆಲ್ಲ ವರದಿಗಾರರು ಹೆಚ್ಚಿನ ಅಪಾಯವನ್ನ ಎದುರಿಸುವ ಸಾಧ್ಯತೆ ಇದೆ” ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಇನ್ನು ಅರ್ಜಿಯಲ್ಲಿ ಪತ್ರಕರ್ತರ ಅಭದ್ರತೆಯನ್ನೂ ಹೈಕೋರ್ಟ್‌ ಗೆ ಅರ್ಜಿದಾರರು ಮನವರಿಕೆ ಮಾಡಿದ್ದಾರೆ. ದುರಾದೃಷ್ಟವಶಾತ್‌ ವರದಿಗಾರ ಅಥವಾ ಪತ್ರಿಕಾ ವಿತರಕರು ಕೆಲಸದ ಅವಧಿಯಲ್ಲಿ ಸೋಂಕು ಬಾಧಿತರಾಗಿ ಸಾವನ್ನಪ್ಪಿದರೆ ಅಂತಹವರು ಆಡಳಿತ ವರ್ಗದಿಂದಿರಲಿ ಇಲ್ಲವೇ ಸರಕಾರದಿಂದಿರಲಿ ಯಾವುದೇ ಪರಿಹಾರ ಪಡೆಯುವ ಸಾಧ್ಯತೆಗಳಿಲ್ಲ ಎಂದಿದ್ದಾರೆ. ಅಲ್ಲದೇ ದೆಹಲಿ ಸರಕಾರ ಕರೋನಾ ಸೋಂಕು ಹೆಚ್ಚಾಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿ, ಪೊಲೀಸ್‌, ಸಿವಿಲ್‌ ಡಿಫೆನ್ಸ್‌ ಸ್ವಯಂ ಸೇವಕರು, ಶಿಕ್ಷಕ ವೃಂದ, ಅಗ್ನಿಶಾಮಕದಳ ಸಿಬ್ಬಂದಿಗಳಿಗೆ ಕರ್ತವ್ಯ ಅವಧಿಯಲ್ಲಿ ಸೋಂಕು ಕಾಣಿಸಿಕೊಂಡು ಸಾವನ್ನಪ್ಪಿದ್ದಲ್ಲಿ ಅವರ ಕುಟುಂಬಿಕರಿಗೆ 1 ಕೋಟಿ ಪರಿಹಾರ ನೀಡುವ ಘೋಷಣೆ ಮಾಡಿರುವುದನ್ನೂ ಅರ್ಜಿದಾರರು ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೇ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರಕಾರ ಪೊಲೀಸರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಘೋಷಿಸಿರುವ 50 ಲಕ್ಷ ಮೊತ್ತವನ್ನೂ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಜೊತೆಗೆ ಪೊಲೀಸ್‌ ಹಾಗೂ ಆರೋಗ್ಯ ಕಾರ್ಯಕರ್ತರಿಗೂ ನೀಡಿದಂತೆ ಮಾಧ್ಯಮವರಿಗೂ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಅದು ಸಂವಿಧಾನದ 14 ಹಾಗೂ 21 ನೇ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ. ಕಾರಣ, ಮಾಧ್ಯಮ ವರದಿಗಾರರು ಕೂಡಾ ಅಷ್ಟೇ ರಿಸ್ಕ್‌ ತೆಗೆದುಕೊಂಡು ಕೆಲಸ ನಿರ್ವಹಿಸುವುದಾಗಿ ಹೈಕೋರ್ಟ್‌ ಗೆ ಮನವರಿಕೆ ಮಾಡಲಾಯಿತು. ಈ ಎಲ್ಲಾ ಅಂಶಗಳನ್ನ ಪರಿಗಣಿಸಿ ಹೈಕೋರ್ಟ್‌ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಜೊತೆಗೆ ಮಾಧ್ಯಮ ಸಂಸ್ಥೆಗಳಿಗೂ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ.

ಅದಲ್ಲದೇ ನ್ಯಾಯಾಲಯವು ರಾಜ್ಯ ಸರಕಾರ ಹಾಗೂ ಮಾಧ್ಯಮ ಸಂಸ್ಥೆಗಳಿಗೆ ಪ್ರಮುಖ ಸೂಚನೆಗಳನ್ನೂ ನೀಡಿದೆ. ಅದೇನೆಂದರೆ..

ಎಲ್ಲಾ ಮಾಧ್ಯಮ ಪ್ರತಿನಿಧಿಗಳನ್ನ, ಅದರಲ್ಲೂ ವಿಶೇಷವಾಗಿ ಸೋಂಕಿತ ಕರೋನಾ ಹೊಂದಿದ ವ್ಯಕ್ತಿ ಹಾಗೂ ಆತನ ಜೊತೆಗಿದ್ದವರೆಲ್ಲರ ಕೋವಿಡ್-19‌ ಪರೀಕ್ಷೆ ನಡೆಸಬೇಕು.

ಅಲ್ಲದೇ ಸುರಕ್ಷಿತಾ ಕಿಟ್‌ ಮಾಸ್ಕ್‌, ಗ್ಲೌಸ್‌, ಪಿಪಿಇ ಕಿಟ್‌ಗಳನ್ನ ಒದಗಿಸುವಂತೆ ಸೂಚಿಸಿದೆ.

ಇನ್ನು ಲಾಕ್‌ಡೌನ್‌ ಅವಧಿಯಲ್ಲಿ ಮುದ್ರಣ ಅಥವಾ ದೃಶ್ಯ ಮಾಧ್ಯಮಗಳು ಯಾವುದೇ ಆಗಲಿ ತನ್ನ ವರದಿಗಾರರನ್ನ ಅಥವಾ ಸಿಬ್ಬಂದಿಗಳನ್ನ ಕರ್ತವ್ಯದಿಂದ ತೆಗೆಯುವಂತಿಲ್ಲ. ಹಾಗೂ ವೇತನ ಕಡಿಮೆ ಮಾಡುವಂತಿಲ್ಲ ಎಂದು ಆದೇಶವನ್ನ ಇತ್ತಿದೆ.

Tags: ‌ ಕರ್ನಾಟಕ ಸರಕಾರ‌ ಕೇಂದ್ರ ಸರಕಾರCentral GovtCovid 19govt of karnatakaHigh Court of Karnatakaಕರ್ನಾಟಕ ಹೈ ಕೋರ್ಟ್ಕೋವಿಡ್-19
Previous Post

ಕರೋನಾ ವಾರಿಯರ್ಸ್‌ನಲ್ಲಿ ಕಂಡು ಬರುತ್ತಿರುವ ಸೋಂಕು

Next Post

ಖಾಸಗಿ ಉಪಗ್ರಹ ಚಾನೆಲ್‍ಗಳ ನಿಯಂತ್ರಣಕ್ಕೆ ನೂತನ ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಖಾಸಗಿ ಉಪಗ್ರಹ ಚಾನೆಲ್‍ಗಳ ನಿಯಂತ್ರಣಕ್ಕೆ ನೂತನ ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

ಖಾಸಗಿ ಉಪಗ್ರಹ ಚಾನೆಲ್‍ಗಳ ನಿಯಂತ್ರಣಕ್ಕೆ ನೂತನ ಕರಡು ನಿಯಮಾವಳಿ ಪ್ರಕಟಿಸಿದ ಕೇಂದ್ರ ಸರ್ಕಾರ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada